UIDAI Recruitment: ಬೆಂಗಳೂರಿನ ಆಧಾರ್ ಸೇವಾ ಕೇಂದ್ರದಲ್ಲಿ ಉದ್ಯೋಗವಕಾಶ, ಫೆ. 2ರೊಳಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ್ನ ಬೆಂಗಳೂರು ತಂತ್ರಜ್ಞಾನ ಕೇಂದ್ರದಲ್ಲಿ ಸಹಾಯಕ ನಿರ್ದೇಶಕ (ತಂತ್ರಜ್ಞಾನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಖಾಲಿ ಹುದ್ದೆಗಳು 'ವಿದೇಶಿ ಸೇವಾ ಅವಧಿಯ ನಿಯಮಗಳ' ಅಡಿಯಲ್ಲಿ ಭರ್ತಿ ಮಾಡಿಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. 2026 ಫೆಬ್ರವರಿವರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ.
ಈ ಹುದ್ದೆಗೆ ಆಯ್ಕೆ ಆಗುವವರು ಆಧಾರ್ (ಹಣಕಾಸು ಮತ್ತು ಇತರೆ ಸಬ್ಸಿಡಿಗಳು, ಪ್ರಯೋಜನಗಳು ಮತ್ತು ಸೇವೆಗಳ ಉದ್ದೇಶಿತ ವಿತರಣೆ) ಕಾಯಿದೆ, 2016ರ ಅಡಿಯಲ್ಲಿ ಸ್ಥಾಪಿತವಾದ ಯುಐಡಿಎಐ, ಆಧಾರ್ ಸಂಖ್ಯೆಗಳನ್ನು ನೀಡುವುದು ಮತ್ತು ದೃಢೀಕರಿಸುವ ನೀತಿ, ಕಾರ್ಯವಿಧಾನ ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಹೊಂದಿರುತ್ತಾರೆ.

ಯುಐಡಿಎಐ ಸಹಾಯಕ ನಿರ್ದೇಶಕ (ತಂತ್ರಜ್ಞಾನ) ವಿಭಾಗದಲ್ಲಿ ಎರಡು ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಯ್ಕೆ ಆಗುವವರಿಗೆ ಬೆಂಗಳೂರಿನ ಯುಐಡಿಎಐ ತಂತ್ರಜ್ಞಾನ ಕೇಂದ್ರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಅಧಿಕಾರಿಗಳು, ರಾಜ್ಯ/ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು, ಸಾರ್ವಜನಿಕ ವಲಯದ ಉದ್ದಿಮೆಗಳು (PSU) ಮತ್ತು ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಅರ್ಜಿ ಸಲ್ಲಿಸಬಹುದು.
ಅರ್ಹತೆ ವಿವರ
ಕೇಂದ್ರ ಸರ್ಕಾರದ ಅಧಿಕಾರಿಗಳು, ಪೋಷಕ ಕೇಡರ್/ಇಲಾಖೆಯಲ್ಲಿ ಸದೃಶ ಹುದ್ದೆಗಳನ್ನು ನಿಯಮಿತ ಆಧಾರದ ಮೇಲೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಪರ್ಯಾಯವಾಗಿ, 7ನೇ ಕೇಂದ್ರ ವೇತನ ಆಯೋಗದ ವೇತನ ಶ್ರೇಣಿ 10 (₹56,100 - ₹1,77,500) ಅಥವಾ ವೇತನ ಶ್ರೇಣಿ 9 (₹53,100 - ₹1,67,800) ರಲ್ಲಿ ಮೂರು ವರ್ಷಗಳ ನಿಯಮಿತ ಸೇವೆಯನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಿದೆ.
ಇದಲ್ಲದೆ, 7ನೇ ಕೇಂದ್ರ ವೇತನ ಆಯೋಗದ ವೇತನ ಶ್ರೇಣಿ 8 (₹47,600 - ₹1,51,100) ರಲ್ಲಿ ನಾಲ್ಕು ವರ್ಷಗಳ ನಿಯಮಿತ ಸೇವೆ ಮಾಡಿದವರು, ಅಥವಾ ವೇತನ ಶ್ರೇಣಿ 7 (₹44,900 - ₹1,42,400) ರಲ್ಲಿ ಆರು ವರ್ಷಗಳ ನಿಯಮಿತ ಸೇವೆ ಮಾಡಿದ ಅಧಿಕಾರಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅವರು ಕನಿಷ್ಠ ಐದು ವರ್ಷ ಸೇವಾ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳ ವಯೋಮಿತಿ
ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು, ಸಾರ್ವಜನಿಕ ವಲಯದ ಉದ್ದಿಮೆಗಳು ಅಥವಾ ಸ್ವಾಯತ್ತ ಸಂಸ್ಥೆಗಳ ಅಧಿಕಾರಿಗಳು ಅರ್ಜಿ ಸಲ್ಲಿಸುವವರಾದರೆ ಅರ್ಹ ಅನುಭವ ಹೊಂದಿರಬೇಕು. ಎಲ್ಲಾ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಹೊತ್ತಿಗೆ ಗರಿಷ್ಠ 56 ವರ್ಷದೊಳಗೆ ಇರಬೇಕು.
ಶೈಕ್ಷಣಿಕ ಅರ್ಹತೆ
ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿ, ಇಲ್ಲವೇ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ನಾಲ್ಕು ವರ್ಷಗಳ ಪದವಿ, ಅಥವಾ ಕಂಪ್ಯೂಟರ್ ಅಪ್ಲಿಕೇಶನ್ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಧಿಕಾರಿಗಳು ಅರ್ಜಿ ಸಲ್ಲಿಸಬಹುದು. ಖಾಸಗಿ ಕ್ಷೇತ್ರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂಬುದನ್ನು ಗಮನಿಸಬೇಕು.
ಅನುಭವಿಗಳಿಗೆ ಆದ್ಯತೆ
ಯೋಜನಾ ನಿರ್ವಹಣೆ, ಸಂಗ್ರಹಣೆ, ಆರ್ಎಫ್ಪಿ ತಯಾರಿಕೆ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ICT) ಯೋಜನೆಗಳು, ಇ-ಆಡಳಿತ, ನೆಟ್ವರ್ಕಿಂಗ್, ಟೆಲಿಕಾಂ ಅಥವಾ ಮಾಹಿತಿ ಭದ್ರತೆಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಿದ ನಂತರ ಯಾವುದೇ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲು ಅವಕಾಶವಿಲ್ಲ. ಯುಐಡಿಎಐಗೆ ಯಾವುದೇ ಸಮಯದಲ್ಲಿ ತನ್ನ ವಿವೇಚನೆಯ ಮೇರೆಗೆ ಹುದ್ದೆಗಳ ಸಂಖ್ಯೆಯನ್ನು ಬದಲಾಯಿಸುವ ಹಕ್ಕು ಹೊಂದಿದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.
ಆಯ್ಕೆ ಆದವರಿಗೆ ಭತ್ಯೆ, ವಿಮೆ ಇತರ ಸೌಲಭ್ಯಗಳು
ಐದು ವರ್ಷದ ಅವಧಿಗೆ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ನಿಯಮಗಳ ಪ್ರಕಾರ ಹುದ್ದೆಯ ಅಧಿಕಾರಿಯನ್ನು ಕನಿಷ್ಠ ಮೂರು ವರ್ಷಕ್ಕೆ ಸಿಮೀತ ಸಹ ಮಾಡಲು ಅವಕಾಶ ಇದೆ. ಉದ್ಯೋಗ ಪಡೆದವರಿಗೆ ನೇಮಕಾತಿ, ಸಂಬಳ, ಭತ್ಯೆಗಳು, ವೈದ್ಯಕೀಯ ಪ್ರಯೋಜನ ಮತ್ತು ಪ್ರಯಾಣ ಭತ್ಯೆಗಳು ಯುಐಡಿಎಐ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ) ನಿಯಮಗಳು, 2020 ಮತ್ತು ಯುಐಡಿಎಐ (ವೇತನ, ಭತ್ಯೆಗಳು ಮತ್ತು ಸೇವಾ ನಿಯಮಗಳು) ನಿಯಮಗಳು, 2020 ರ ನಿಬಂಧನೆಗಳಿಗೆ ಒಳಪಟ್ಟಿರುತ್ತವೆ. ನಿಯಮ, ನೇಮಕಾತಿ ಸುತ್ತೋಲೆಗಾಗಿ ಅಧಿಕೃತ ವೆಬ್ಸೈಟ್ www.uidai.gov.in ಗೆ ಭೇಟಿ ನೀಡಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ (ಅನೆಕ್ಸ್ I) ಮೂಲಕ ಅಗತ್ಯ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬೇಕು. ನೇಮಕಾತಿಯಲ್ಲಿ ಆಯ್ಕೆಯಾದರೆ ಕೇಡರ್ ನಿಯಂತ್ರಣ ಪ್ರಾಧಿಕಾರವು ಅವರನ್ನು ಸೇವೆಯಿಂದ ಬಿಡುಗಡೆ ಮಾಡಲು ಸಿದ್ಧವಿರಬೇಕು. ಸೇವೆಗಳನ್ನು ಬಿಡುಗಡೆ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಯುಐಡಿಎಐ ತಿಳಿಸಿದೆ.
ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ, ವಿಳಾಸ
ಅರ್ಜಿಯಲ್ಲಿ ಪೋಷಕ ಸಂಸ್ಥೆಯ ಸಮಾನ ಶ್ರೇಣಿಯ ಬಗ್ಗೆ ದೃಢೀಕರಿಸಿರಬೇಕು. ಈ ಎಲ್ಲಾ ದಾಖಲೆಗಳು ಸಂಪೂರ್ಣ ಮತ್ತು ನಿಖರವಾಗಿ, ಸತ್ಯವಾಗಿರಬೇಕು. ಅಪೂರ್ಣ ಮಾಹಿತಿಯ ದಾಖಲೆಗಳು ಇದ್ದಲ್ಲಿ ಅಂತವರ ಅರ್ಜಿ ಸ್ವೀಕರಿಸುವುದಿಲ್ಲ.
ಸೂಕ್ತ ಅರ್ಜಿಗಳನ್ನು ಇಲ್ಲಿನ 'ನಿರ್ದೇಶಕ (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಆಧಾರ್ ಕಾಂಪ್ಲೆಕ್ಸ್, ಎನ್ಟಿಐ ಲೇಔಟ್, ಟಾಟಾ ನಗರ, ಕೊಡಿಗೆಹಳ್ಳಿ, ತಂತ್ರಜ್ಞಾನ ಕೇಂದ್ರ, ಬೆಂಗಳೂರು - 560 092' ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸ್ವೀಕಾರಕ್ಕೆ ಈ ಹಿಂದೆ 2025ರ ಡಿಸೆಂಬರ್ 09 ಕೊನೆಯ ದಿನವಾಗಿತ್ತು. ಅದನ್ನೀಗ 2026 ಫೆಬ್ರವರಿ 2ರವರೆಗೆ ವಿಸ್ತರಣೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗೆ ನಿರ್ದೇಶಕರ (ಲೆಫ್ಟಿನೆಂಟ್ ಕರ್ನಲ್ ನೀರಜ್ ಚೌಧರಿ) ದೂರವಾಣಿ ಸಂಖ್ಯೆ 011-23478554 ಅಥವಾ [email protected] ಇಮೇಲ್ ಮೂಲಕ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.
ಗಮನಿಸಿ..
ಕೇಡರ್ ನಿಯಂತ್ರಣ ಪ್ರಾಧಿಕಾರ ಎಂದರೇನು: ಹಾಗೆಂದರೆ ಭಾರತೀಯ ಆಡಳಿತ ಸೇವೆ (IAS), ಭಾರತೀಯ ಪೊಲೀಸ್ ಸೇವೆ (IPS) ಮತ್ತು ಭಾರತೀಯ ಅರಣ್ಯ ಸೇವೆ (IFS) ಸದಸ್ಯರ ವಿಷಯದಲ್ಲಿ ಅನುಕ್ರಮವಾಗಿ ಕೇಂದ್ರ ಸರ್ಕಾರದಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಪರಿಸರ ಮತ್ತು ಅರಣ್ಯ ಸಚಿವಾಲಯ. ಪೋಷಕ ಸಂಸ್ಥೆಗೆ ಕೇಡರ್ ನಿಯಂತ್ರಣ ಪ್ರಾಧಿಕಾರವನ್ನು ನಿರ್ದಿಷ್ಟಪಡಿಸದಿದ್ದಾಗ, ನಿಯೋಜನೆ ಮೇಲೆ ಅಧಿಕಾರಿಯನ್ನು ಬಿಡುಗಡೆ ಮಾಡಲು ಸಮರ್ಥವಾಗಿರುವ ಯಾವುದೇ ಪ್ರಾಧಿಕಾರವನ್ನು ಕೇಡರ್ ನಿಯಂತ್ರಣ ಪ್ರಾಧಿಕಾರ ಎಂದು ಪರಿಗಣಿಸಲಾಗುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications