ಐಎಎಸ್, ಐಪಿಎಸ್ ಆಕಾಂಕ್ಷಿಗಳಿಗೆ ಶುಭಸುದ್ದಿ: ಯುಪಿಎಸ್ಸಿಗೆ ನಡೆಯಲಿದೆ ನೇಮಕಾತಿ
ನವದೆಹಲಿ, ಫೆಬ್ರವರಿ 20: ಕೇಂದ್ರ ನಾಗರಿಕ ಸೇವಾ ಆಯೋಗದಿಂದ ಉದ್ಯೋಗಾಕಾಂಕ್ಷಿಗಳಿಗೆ ಒಳ್ಳೆಯ ಸುದ್ದಿ ದೊರೆತಿದೆ. 2014ರ ಬಳಿಕ ಇದೇ ಮೊದಲ ಬಾರಿಗೆ ಅತ್ಯಧಿಕ ನೇಮಕಾತಿಗೆ ಯುಪಿಎಸ್ಸಿ ಮುಂದಾಗಿದೆ.
ದೇಶದ ಪ್ರತಿಷ್ಠಿತ ನಾಗರಿಕ ಸೇವೆಗಳಾದ ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್)ಗಳಿಗೆ ನೇಮಕಾತಿ ನಡೆಸಲು ಪರೀಕ್ಷೆಗಳು ನಡೆಯಲಿವೆ.
ಪ್ರಸಕ್ತ ವರ್ಷ 896 ನಾಗರಿಕ ಸೇವಾ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 2014ರಲ್ಲಿ 1,291 ಖಾಲಿ ಹುದ್ದೆಗಳಿಗೆ ಯುಪಿಎಸ್ಸಿ ಪರೀಕ್ಷೆ ನಡೆಸಿತ್ತು. 2018ರಲ್ಲಿ 783ಕ್ಕೂ ಅಧಿಕ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಕಳೆದ ಕೆಲವು ವರ್ಷಗಳಿಂದ ಯುಪಿಎಸ್ಸಿ 180 ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ.

ನೇಮಕಾತಿ ಸಂಬಂಧ ಯುಪಿಎಸ್ಸಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು 2019ರ ಮಾರ್ಚ್ 18 ಕೊನೆಯ ದಿನವಾಗಿದೆ.
ನರೇಂದ್ರ ಮೋದಿ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಉದ್ಯೋಗದಲ್ಲಿ ಶೇ 10ರ ಮೀಸಲಾತಿ ನೀಡುವ ನಿಯಮವು ಇಲ್ಲಿ ಅನ್ವಯವಾಗಲಿದೆ. ಆನ್ಲೈನ್ನಲ್ಲಿ ಸವಿವರವಾದ ಅರ್ಜಿಯೊಂದಿಗೆ ಆದಾಯ ಮತ್ತು ಆಸ್ತಿಯ ಪ್ರಮಾಣಪತ್ರಗಳನ್ನು ಆಕಾಂಕ್ಷಿಗಳು ಒದಗಿಸಬೇಕು.
ಪ್ರತಿವರ್ಷ ಯುಪಿಎಸ್ಸಿ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಕೇಡರ್ ನಿಯಂತ್ರಣ ಪ್ರಾಧಿಕಾರಗಳು ತಮ್ಮ ಅಗತ್ಯಗಳಲ್ಲಿ ಬದಲಾವಣೆಗಳನ್ನು ತಂದರೆ ಖಾಲಿ ಇರುವ ಹುದ್ದೆಗಳಲ್ಲಿಯೂ ಬದಲಾವಣೆಗಳಾಗಬಹುದು ಎಂದು ಅಧಿಸೋಚನೆಯಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಸುಮಾರು 1,500 ಐಎಎಸ್ ಅಧಿಕಾರಿಗಳ ಕೊರತೆ ಇದೆ. ಅದರಲ್ಲಿಯೂ ಅನೇಕ ಮಹತ್ವದ ಹುದ್ದೆಗಳು ಖಾಲಿ ಇವೆ. ಈ ಬಾರಿ ನೇಮಕಾತಿಯಲ್ಲಿ ಏರಿಕೆ ಮಾಡಿದ್ದರೂ ಸರ್ಕಾರದಲ್ಲಿ ಖಾಲಿ ಇರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎನ್ನಲಾಗದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications