Home Guards Recruitment: ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದಿಂದ 140 ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Home Guards Recruitment: ಉದ್ಯೋಗಾವಕಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಉತ್ತರ ಕನ್ನಡ ಜಿಲ್ಲೆ ಗೃಹ ರಕ್ಷಕ ದಳವು ಖಾಲಿ ಇರುವ 140 ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳವು 140 ಹೋಂ ಗಾರ್ಡ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಎಸ್ಎಸ್ಎಲ್ಸಿ ಉತ್ತೀರ್ಣರಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಪುರುಷ ಹಾಗೂ ಮಹಿಳೆ ಇಬ್ಬರಿಗೂ ಅವಕಾಶವಿದೆ. ಇದಕ್ಕೆ ಬೇಕಾದ ಅರ್ಜಿಗಳನ್ನು ಈಗಾಗಲೇ ನೀಡಲಾಗಿದ್ದು, ಆಸಕ್ತರು ಇಲ್ಲಿ ನೀಡಲಾದ ವಿಳಾಸಕ್ಕೆ ತೆರಳಿ ಅರ್ಜಿ ಪ್ರತಿಯನ್ನು ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ನಂತರ ಮತ್ತೆ ಇಲಾಖೆಗೆ ಸಲ್ಲಿಸಬೇಕು.

ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ ಮೆಡಿಕಲ್ ಫಿಟ್ನೆಸ್ ಪ್ರಮಾಣ ಪತ್ರದ ಜೊತೆ ಆಧಾರ್ ಕಾರ್ಡ್, ಎಸ್ಎಸ್ಎಲ್ಸಿ ಅಂಕ ಪಟ್ಟಿಯನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕೃತ ಮಾಡಿಕೊಂಡು ಅರ್ಜಿ ಜೊತೆಗೆ ಸಲ್ಲಿಕೆ ಮಾಡಬೇಕು. ಭರ್ತಿ ಮಾಡಿದ ಅರ್ಜಿ ನೀಡಲು ಕೊನೇ ದಿನಾಂಕ ಮಾರ್ಚ್ 7, 2025 ಆಗಿದೆ.
ಅರ್ಜಿ ಸಲ್ಲಿಸಬಯಸುವರು 10ನೇ ತರಗತಿ ಉತ್ತೀರ್ಣರಾಗಿರಬೇಕು. 19ರಿಂದ 50 ವರ್ಷದ ಒಳಗಿರಬೇಕು ಅರ್ಜಿ ಸಲ್ಲಸಬಹುದಾಗಿದೆ. ಪುರುಷರು 163 ಸೆಂಟಿ ಮೀಟರ್ ಎತ್ತರ, ಮಹಿಳೆಯರು 150 ಸೆಂಟಿ ಮೀಟರ್ ಎತ್ತರ ಇರಬೇಕು. ಇನ್ನು ಅಭ್ಯರ್ಥಿಗಳು ಯಾವುದೇ ಅಪರಾಧಿಕ/ರಾಜಕೀಯ ಹಿನ್ನೆಲೆ ಉಳ್ಳವರಾಗಿರಬಾರದು.
ಹೆವಿ ಡ್ರೈವಿಂಗ್ ಲೈಸೆನ್ಸ್, ಅಡುಗೆ ಭಟ್ಟರು, ಮೆಕಾನಿಕ್, ಪೈಂಟರ್, ಪ್ಲಂಬರ್, ಕಂಪ್ಯೂಟರ್ ಜ್ಞಾನ, ಎನ್ಸಿಸಿ ಹಾಗೂ ಕ್ರೀಡಾಕೂಟದಲ್ಲಿ ಉತ್ತಮ ಸಾಮರ್ಥ್ಯ ಇದ್ದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ನೀಡುವ ವಿಳಾಸ ಗೃಹ ರಕ್ಷಕ ದಳದ ಜಿಲ್ಲಾ ಕಚೇರಿ, ಸರ್ವೋದಯ ನಗರ, ದಿವಕರ್ ಕಾಮರ್ಸ್ ಕಾಲೇಜ್ ಎದುರು, ಕೊಡಿಭಾಗ, ಕಾರವಾರ. ಇಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆಯಬಹುದು.
ಗೃಹರಕ್ಷಕ ದಳ ಸಂಸ್ಥೆ ಸ್ವಯಂ ಸೇವಕ ಸಂಸ್ಥೆ ಆಗಿದೆ. ಈ ಕೆಲಸವೂ ಖಾಯಂ ಸರ್ಕಾರಿ ನೌಕರಿ ಅಲ್ಲ. ಯಾವುದೇ ರೀತಿಯ ಮಾಸಿಕ ಸಂಬಳ ಅಥವಾ ವಿಶೇಷ ಭತ್ಯೆ ನೀಡಲಾಗುವುದಿಲ್ಲ. ಸರ್ಕಾರ ನಿಗದಿ ಪಡಿಸಿದ ಗೌರವ ಧನವನ್ನು ಕರ್ತವ್ಯ ನಿರ್ವಹಿಸುವ ಅವಧಿಗೆ ಮಾತ್ರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 08382 -200137/ 226361 ಅಥವಾ 9480898775 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications