ವಿಜಯ ಬ್ಯಾಂಕಿನಲ್ಲಿ 10ನೇ ತರಗತಿ ಪಾಸಾದವರಿಗೆ ಹುದ್ದೆಗಳಿವೆ
ಬೆಂಗಳೂರು, ಮಾರ್ಚ್ 10: ವಿಜಯ ಬ್ಯಾಂಕ್ ತನ್ನ ಅಧಿಕೃತ ವೆಬ್ ತಾಣದಲ್ಲಿ 310 ಜವಾನ ಮತ್ತು 122 ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 432 ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ಅನುಸಾರವಾಗಿ ಅಧಿಕೃತ ವೆಬ್ಸೈಟಿನಲ್ಲಿರುವ ಅರ್ಜಿಗಳನ್ನು ಭರ್ತಿ ಮಾಡಿ ಮಾರ್ಚ್ 14,2019 ರೊಳಗೆ ಸಲ್ಲಿಸಬೇಕು.
ಸಂಸ್ಥೆ ಹೆಸರು: ವಿಜಯ ಬ್ಯಾಂಕ್
ಹುದ್ದೆ ಹೆಸರು: ಜವಾನ, ತಾತ್ಕಾಲಿಕ ಸ್ವೀಪರ್
ಒಟ್ಟು ಹುದ್ದೆ : 432
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 14, 2019
ವಿದ್ಯಾರ್ಹತೆ: ಜವಾನ ಮತ್ತು ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದುಕೊಂಡಿರಬೇಕು.

ವಯೋಮಿತಿ : ಈ ಎರಡು ಹುದ್ದೆಗಳಿಗೆ ಮಾರ್ಚ್ 1,2019ರ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಯೋಮಿತಿ ವಿನಾಯತಿ ವಿವರವನ್ನು ಅಧಿಸೂಚನೆಯನ್ನು ನೀಡಲಾಗಿರುತ್ತದೆ.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 50/- ರೂ ಮತ್ತು ಇತರೆ ಅಭ್ಯರ್ಥಿಗಳಿಗೆ 150/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಆಯ್ಕೆ.
ಅರ್ಜಿ ಸಲ್ಲಿಸುವ ವಿಧಾನ:
ವಿಜಯ ಬ್ಯಾಂಕಿನ ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಕೆರಿಯರ್ ಸೆಕ್ಷನ್ ನಲ್ಲಿ Vijaya Bank Recruitment 2019 For Peons & Part time Sweeper Posts ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಮಾರ್ಚ್ 14, 2019ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications