ವಿಜಯಾ ಬ್ಯಾಂಕ್ನಲ್ಲಿ ಅರ್ಜಿ ಆಹ್ವಾನ, ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ಅಕ್ಟೋಬರ್ 25 : ವಿಜಯಾ ಬ್ಯಾಂಕ್ 4 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 9, 2018 ಕೊನೆಯ ದಿನವಾಗಿದೆ.
ವಿಜಯಾ ಬ್ಯಾಂಕ್ 4 ಚೀಫ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂದು. ನವೆಂಬರ್ 23ರೊಳಗೆ ಅಂಚೆ ಮೂಲಕ ಬ್ಯಾಂಕಿಗೆ ಕಳುಹಿಸಬೇಕು. ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಅಂಚೆ ಮೂಲಕ ವಿಜಯಾ ಬ್ಯಾಂಕ್, ಪೋಸ್ಟ್ ಬಾಕ್ಸ್ ನಂ 5136, ಜಿಪಿಓ ಬೆಂಗಳೂರು - 56001...ಹೆಚ್ಚಿನ ಮಾಹಿತಿ ಚಿತ್ರಗಳಲ್ಲಿ.....
ಇಂಗ್ಲಿಶ್ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟು ನಾಲ್ಕು ಹುದ್ದೆಗಳಿವೆ
* ಚೀಫ್ ಮ್ಯಾನೇಜರ್ (Forex Dealer) - 1
* ಚೀಫ್ ಮ್ಯಾನೇಜರ್ (Equity Dealer) - 1
* ಚೀಫ್ ಮ್ಯಾನೇಜರ್ (Credit Risk) - 1
* ಚೀಫ್ ಮ್ಯಾನೇಜರ್ (Operational Risk) - 1

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು. ಆಗಸ್ಟ್ 1, 2018ಕ್ಕೆ ಅನ್ವಯವಾಗುವಂತೆ.

ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಎಂಬಿಎ/ಸಿಎ/ಸಿಎಫ್ಎ ಪೂರ್ಣಗೊಳಿಸಿರುವವರು ಅರ್ಜಿ ಹಾಕಬಹುದು. ಎಂಎಸ್ಸಿ/ಸಿಎಐಐಬಿ/ಡಿಪ್ಲೊಮಾ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ
ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಯಾವ ಹುದ್ದೆಗೆ ಎಷ್ಟು ವೇತನ ಎಂಬ ಮಾಹಿತಿ ಇಲ್ಲಿದೆ ನೋಡಿ....

ಅರ್ಜಿ ಶುಲ್ಕ ಎಷ್ಟು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ.
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ 600 ರೂ. ಶುಲ್ಕವಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications