ಗದಗ ಮೃಗಾಲಯದಲ್ಲಿ ಕೆಲಸ ಖಾಲಿ ಇದೆ, ನ.29ಕ್ಕೆ ನೇರ ಸಂದರ್ಶನ
ಗದಗ, ನವೆಂಬರ್ 24; ಕಾರ್ಯನಿರ್ವಾಹಕ ನಿರ್ದೇಶಕರು ಗದಗ ಮೃಗಾಲಯ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಗದಗ ವಿಭಾಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ. ಆಸಕ್ತರು ನವೆಂಬರ್ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಗದಗ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಜೀವಶಾಸ್ತ್ರಜ್ಞ, ಶಿಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಂದು ಜೀವಶಾಸ್ತ್ರಜ್ಞ ಮತ್ತು ಒಂದು ಶಿಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಮತ್ತು ಅರ್ಹರು ನವೆಂಬರ್ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂದರ್ಶನ ನಡೆಯುವ ವಿಳಾಸ; ಉಪ ಅರಣ್ಯ ಸಂರಕ್ಷಣಾಧಿಕಾರಿ, ಗದಗ ವಿಭಾಗ ಕಚೇರಿ.
ಆಯಾ ಹುದ್ದೆಗೆ ಅರ್ಜಿ ಹಾಕಿ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿ 0-6 ವರ್ಷದ ಒಳಗಿನ ಮಕ್ಕಳು ಪೋಷಣೆ ಮತ್ತು ರಕ್ಷಣೆಯನ್ನು ಪಡೆಯುತ್ತಿದ್ದಾರೆ.
ಈ ಸಂಸ್ಥೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಆಯಾ ಹುದ್ದೆ ಖಾಲಿ ಇದ್ದು, ಪ್ರಸ್ತುತ 3 ಜನ ಆಯಾಗಳ ಅವಶ್ಯಕತೆ ಇರುತ್ತದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಡಿಕೇರಿಯ ಮಡಿಲು ಸರ್ಕಾರಿ ದತ್ತು ಸಂಸ್ಥೆಯ ಅಧೀಕ್ಷಕರಾದ ಪಿ. ಎಸ್. ನಾಗರತ್ನ ಅವರು ತಿಳಿಸಿದ್ದಾರೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಜಲಾನಯನ ಅಭಿವೃದ್ಧಿ ಇಲಾಖೆ ಪ್ರಾಯೋಜಿತ ರಿವಾರ್ಡ್ ಯೋಜನೆಯಡಿ ತಾತ್ಕಾಲಿಕವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕನ್ಸಲ್ಟೆಂಟ್- ಜಿ.ಐ.ಎಸ್.; ಎಸ್.ಆರ್.ಎಫ್- ಮಣ್ಣು ವಿಶ್ಲೇಷಣೆ ಹಾಗೂ ಜಿ.ಐ.ಎಸ್., ಯೋಜನಾ ಸಹಾಯಕರು-ಮಣ್ಣು ವಿಶ್ಲೇಷಣೆ, ಜಿ.ಐ.ಎಸ್. ಹಾಗೂ ಪಿ.ಎಂ.ಸಿ.; ಸಹಾಯಕರು- ಮಣ್ಣು ವಿಶ್ಲೇಷಣೆ, ಪಿ.ಎಂ.ಸಿ. ಹಾಗೂ ಹೈಡ್ರಾಲಜಿ ಹುದ್ದೆಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನದ ಮೂಲಕ ತುಂಬಲಾಗುತ್ತದೆ.
ಡಿಸೆಂಬರ್ 1, 2, 3ರಂದು ಲಿಖಿತ ಪರೀಕ್ಷೆ, ಸಂದರ್ಶನ ನಡೆಯಲಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ಧಾರವಾಡದ ಕೃಷಿ ವಿವಿ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications