ಗದಗ ಮೃಗಾಲಯದಲ್ಲಿ ಕೆಲಸ ಖಾಲಿ ಇದೆ, ನ.29ಕ್ಕೆ ನೇರ ಸಂದರ್ಶನ
ಗದಗ, ನವೆಂಬರ್ 24; ಕಾರ್ಯನಿರ್ವಾಹಕ ನಿರ್ದೇಶಕರು ಗದಗ ಮೃಗಾಲಯ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಗದಗ ವಿಭಾಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ. ಆಸಕ್ತರು ನವೆಂಬರ್ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಗದಗ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಜೀವಶಾಸ್ತ್ರಜ್ಞ, ಶಿಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಂದು ಜೀವಶಾಸ್ತ್ರಜ್ಞ ಮತ್ತು ಒಂದು ಶಿಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಮತ್ತು ಅರ್ಹರು ನವೆಂಬರ್ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂದರ್ಶನ ನಡೆಯುವ ವಿಳಾಸ; ಉಪ ಅರಣ್ಯ ಸಂರಕ್ಷಣಾಧಿಕಾರಿ, ಗದಗ ವಿಭಾಗ ಕಚೇರಿ.
ಆಯಾ ಹುದ್ದೆಗೆ ಅರ್ಜಿ ಹಾಕಿ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿ 0-6 ವರ್ಷದ ಒಳಗಿನ ಮಕ್ಕಳು ಪೋಷಣೆ ಮತ್ತು ರಕ್ಷಣೆಯನ್ನು ಪಡೆಯುತ್ತಿದ್ದಾರೆ.
ಈ ಸಂಸ್ಥೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಆಯಾ ಹುದ್ದೆ ಖಾಲಿ ಇದ್ದು, ಪ್ರಸ್ತುತ 3 ಜನ ಆಯಾಗಳ ಅವಶ್ಯಕತೆ ಇರುತ್ತದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಡಿಕೇರಿಯ ಮಡಿಲು ಸರ್ಕಾರಿ ದತ್ತು ಸಂಸ್ಥೆಯ ಅಧೀಕ್ಷಕರಾದ ಪಿ. ಎಸ್. ನಾಗರತ್ನ ಅವರು ತಿಳಿಸಿದ್ದಾರೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಜಲಾನಯನ ಅಭಿವೃದ್ಧಿ ಇಲಾಖೆ ಪ್ರಾಯೋಜಿತ ರಿವಾರ್ಡ್ ಯೋಜನೆಯಡಿ ತಾತ್ಕಾಲಿಕವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕನ್ಸಲ್ಟೆಂಟ್- ಜಿ.ಐ.ಎಸ್.; ಎಸ್.ಆರ್.ಎಫ್- ಮಣ್ಣು ವಿಶ್ಲೇಷಣೆ ಹಾಗೂ ಜಿ.ಐ.ಎಸ್., ಯೋಜನಾ ಸಹಾಯಕರು-ಮಣ್ಣು ವಿಶ್ಲೇಷಣೆ, ಜಿ.ಐ.ಎಸ್. ಹಾಗೂ ಪಿ.ಎಂ.ಸಿ.; ಸಹಾಯಕರು- ಮಣ್ಣು ವಿಶ್ಲೇಷಣೆ, ಪಿ.ಎಂ.ಸಿ. ಹಾಗೂ ಹೈಡ್ರಾಲಜಿ ಹುದ್ದೆಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನದ ಮೂಲಕ ತುಂಬಲಾಗುತ್ತದೆ.
ಡಿಸೆಂಬರ್ 1, 2, 3ರಂದು ಲಿಖಿತ ಪರೀಕ್ಷೆ, ಸಂದರ್ಶನ ನಡೆಯಲಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ಧಾರವಾಡದ ಕೃಷಿ ವಿವಿ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications