ಕೋಲಾರದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ಕೋಲಾರ, ಜೂನ್ 8: ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನ ನಿಗದಿಯಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಮೂಲ ಅಂಕ ಪಟ್ಟಿಗಳು, ಎಲ್ಲಾ ಪ್ರಮಾಣ ಪತ್ರಗಳು, ವಿಳಾಸ ಪುರಾವೆ ಮತ್ತು ಗುರುತಿನ ಚೀಟಿಗಳ 2 ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬಹುದು.
ನಂ.18-158 ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆ ಮತ್ತು ಕೋವಿಡ್-19 ಆಸ್ಪತ್ರೆ, ಕೋಲಾರ ಇಲ್ಲಿ ರಚಿಸಲಾದ ಐ.ಸಿ.ಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದೆ. ಇದಕ್ಕಾಗಿ 06 ತಿಂಗಳ ಮಟ್ಟಿಗೆ ಅಥವಾ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ನೇಮಕಾತಿಯನ್ನು ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಹುದ್ದೆಗಳು ಹಾಗೂ ವಿದ್ಯಾರ್ಹತೆ:
*ತಜ್ಞ ವೈದ್ಯರು (M.D General Medicine/Md pulmonary Medical DM/DNB Cardiology/Intersivist/Anaesthesia) 06 ಹುದ್ದೆಗಳು,
* ವೈದ್ಯರು (MBBS) 12 ಹುದ್ದೆಗಳು,
* ಶುಶ್ರೂಷಕರು (BSC Nursing/GNM Training Passed) 18 ಹುದ್ದೆಗಳು,
* ಐ.ಸಿ.ಯು ಟೆಕ್ನಿಷಿಯನ್ (Diploma in Anaesthesia care Technology/DOTT/Equivalent) 01 ಹುದ್ದೆ,
* ಗ್ರೂಪ್ 'ಡಿ' (SSLC Pass) 06 ಹುದ್ದೆಗಳು,
* ಮೆಂಟೇನೆನ್ಸ್ ಇಂಜಿನಿಯರ್ (Diploma in Mechanical/Electrical/Electronics/Equivalent) 01 ಹುದ್ದೆ, * ಬಯೋ-ಮೆಡಿಕಲ್ ಇಂಜಿನಿಯರ್ (BE in Bio Medical Engineering/Diploma in Bio Medical Engineering 5 years Experience) 01 ಹುದ್ದೆ.
ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ಶೈಕ್ಷಣಿಕ ಹಾಗೂ ಅನುಭವದ ಮೂಲ ದಾಖಲಾತಿಗಳು ಮತ್ತು ಎರಡು ನಕಲು ಪ್ರತಿ, ಭಾವಚಿತ್ರಗಳೊಂದಿಗೆ ಜೂನ್ 10 ಮತ್ತು ಜೂನ್ 11 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೂ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿ, ಎಸ್.ಎನ್.ಆರ್. ಆಸ್ಪತ್ರೆ ಕೋಲಾರ ಇಲ್ಲಿ ಹಾಜರಾಗಲು ಜಿಲ್ಲಾ ಶಸ್ತ್ರ ಚಿಕಿತ್ಸಕರು ತಿಳಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications