ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ; ಅಂಚೆ ಇಲಾಖೆ ಕೆಲಸ, ಜುಲೈ 16ರಂದು ನೇರ ಸಂದರ್ಶನ

|
Google Oneindia Kannada News

ಧಾರವಾಡ, ಜುಲೈ 01; ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು

ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ನೇರ ಸಂದರ್ಶನದ ಕುರಿತು ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ರಿಂದ 50 ವರ್ಷದೊಳಗಿನವರಾಗಿರಬೇಕು.

ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು

 Walk In Interview For Post Office Insurance Agent At Dharwad

ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಸೇರಿದಂತೆ ಯಾವುದೇ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಅವರಿಗೆ ಅವಕಾಶ ನೀಡಲಾಗುತ್ತದೆ.

ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು

ಆಯ್ಕೆಯಾದ ಅಭ್ಯರ್ಥಿಗಳು ರೂ. 5000ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ನೀಡಬೇಕಾಗುತ್ತದೆ.

ಆಯ್ಕೆಯಾದ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ಸೂಕ್ತ ಕಮೀಷನ್ ನೀಡಲಾಗುತ್ತದೆ. ನಿಗದಿತ ವೇತನ ಇರುವುದಿಲ್ಲ ಹಾಗೂ ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳಲ್ಲಿ ಏಜೆಂಟ್ ಆಗಿರಬಾರದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.

ನೇರ ಸಂದರ್ಶನ ನಡೆಯುವ ವಿಳಾಸ; ಕೆ. ಸಿ. ಪಾರ್ಕ್ ಹತ್ತಿರದ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯ.

English summary
Walk in interview for post office insurance agent at Dharwad district. Candidates can attend interview on July 16, 11 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X