ದಾವಣಗೆರೆ; ವಿವಿಧ ಹುದ್ದೆಗಳಿಗೆ ಮೇ. 10ರಂದು ನೇರ ಸಂದರ್ಶನ
ದಾವಣಗೆರೆ, ಮೇ 06; ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 63 ಹುದ್ದೆಗಳನ್ನು 6 ತಿಂಗಳ ಮಟ್ಟಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ.
ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಮೇ 10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕೊಡಗು; ಮೇ 7ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ರಚಿಸಲಾದ ಐಸಿಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಚಿಗಟೇರಿ ಜಿಲ್ಲಾಸ್ಪತ್ರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗಳಿಗೆ 6 ತಿಂಗಳ ಮಟ್ಟಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಮೈಸೂರು; ಮೇ 7, 8ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಜಿಲ್ಲಾ ಆಸ್ಪತ್ರೆಗೆ ತಜ್ಞ ವೈದ್ಯರು (6) ವೇತನ ತಿಂಗಳಿಗೆ ರೂ. 1,20,000. ವೈದ್ಯರು ಜಿಲ್ಲಾ ಆಸ್ಪತ್ರೆಗೆ (12), ತಾಲ್ಲೂಕು ಆಸ್ಪತ್ರೆಗಳಿಗೆ (12) ಸೇರಿದಂತೆ ಒಟ್ಟು 24 ವೈದ್ಯರು. ವೇತನ ರೂ. 60000. ಶುಶ್ರೂಷಕರ ಹುದ್ದೆ ಜಿಲ್ಲಾ ಆಸ್ಪತ್ರೆ (18), ತಾಲ್ಲೂಕು ಆಸ್ಪತ್ರೆಗಳಿಗೆ (12) ಒಟ್ಟು 30. ವೇತನ ರೂ. 25000. ಜಿಲ್ಲಾ ಆಸ್ಪತ್ರೆಗಾಗಿ ಐಸಿಯು ಟೆಕ್ನಿಷಿಯನ್ (1) ಹುದ್ದೆ ವೇತನ ರೂ. 25000. ಮೆಂಟೇನನ್ಸ್ ಇಂಜಿನಿಯರ್ (1) ಹುದ್ದೆ ವೇತನ ರೂ. 30000. ಬಯೋಮೆಡಿಕಲ್ ಇಂಜಿನಿಯರ್ (1) ಹುದ್ದೆ ವೇತನ ರೂ. 30000.
ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 19 ಹುದ್ದೆಗಳಿಗೆ ಅರ್ಜಿ
ತಜ್ಞ ವೈದ್ಯರ ಹುದ್ದೆಗೆ ಅಂಗೀಕೃತ ವಿವಿಯಿಂದ ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆದಿರಬೇಕು. ವೈದ್ಯರು ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಲ್ಲಿ ನೋಂದಣಿಯಾಗಿರಬೇಕು. ಶುಶ್ರೂಷಕರು ಇಲಾಖೆ ನಿಗದಿಪಡಿಸಿರುವ ಬಿಎಸ್ಸಿ/ ಜೆಎನ್ಎಂ ನರ್ಸಿಂಗ್ ಹೊಂದಿರಬೇಕು ಹಾಗೂ ನೊಂದಣಿ ಪ್ರಾಧಿಕಾರದಲ್ಲಿ ನೊಂದಣಿಯಾಗಿರಬೇಕು. ನೇಮಕಾತಿಗೊಂಡ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳು ಬಂಧಪತ್ರ ಹಾಗೂ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವ ಷರತ್ತಿಗೆ ಒಳಪಟ್ಟಿರುತ್ತಾರೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 10 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಮೂಲ ದಾಖಲೆ, ಪ್ರಮಾಣಪತ್ರಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.