ಚಾಮರಾಜನಗರ: ನ. 7ಕ್ಕೆ ನೇರ ಸಂದರ್ಶನ, ಅಭ್ಯರ್ಥಿಗಳಿಗೆ ಅರ್ಹತೆ ಮಾಹಿತಿ
ಚಾಮರಾಜನಗರ, ನವೆಂಬರ್ 06: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿಯೊಂದಿದೆ. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ನವೆಂಬರ್ 7ರ ಗುರುವಾರ ಉದ್ಯೋಗಕ್ಕಾಗಿ ನೇರ ಸಂದರ್ಶನ-2024 ಆಯೋಜನೆ ಮಾಡಲಾಗಿದೆ. ಪುರುಷರಿಗೆ 34, ಮಹಿಳೆಯರಿಗೆ 16 ಹುದ್ದೆಗಳಿವೆ. ಆಸಕ್ತರು, ಅರ್ಹರು ಅಗತ್ಯ ದಾಖಲೆಗಳ ಜೊತೆ ಉದ್ಯೋಗಕ್ಕಾಗಿ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಚಾಮರಾಜನಗರ ಉದ್ಯೋಗಕ್ಕಾಗಿ ನೇರ ಸಂದರ್ಶನ-2024 ಆಯೋಜನೆ ಮಾಡಿದೆ. ನವೆಂಬರ್ 7ರ ಗುರುವಾರ, ಬೆಳಗ್ಗೆ 10:30 ರಿಂದ 3:30ರ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ರೂಂ ನಂಬರ್ 210, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಭಾಗವಹಿಸುವ ಕಂಪನಿಗಳು: ಉದ್ಯೋಗಕ್ಕಾಗಿ ನೇರ ಸಂದರ್ಶನ-2024ರಲ್ಲಿ ರಾಜ್ ಬಯೋ ಆರ್ಗಾನಿಕ್ಸ್ ಹಾಗೂ ವಿ.ಎಲ್.ಕೆ ರಾಜ್ ಅಗ್ರಿ ವೆಂಚರ್ & ಡೆವಲಪರ್ಸ್ ಚಾಮರಾಜನಗರ ಪಾಲ್ಗೊಳ್ಳಲಿವೆ.
ಈ ನೇರ ಸಂದರ್ಶನದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಪುರುಷ ಅಭ್ಯರ್ಥಿಗಳಿಗೆ 24 ವರ್ಷ ಮೇಲ್ಪಟ್ಟು, ಮಹಿಳಾ ಅಭ್ಯರ್ಥಿಗಳಿಗೆ 21 ವರ್ಷ ಮೇಲ್ಪಟ್ಟು ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಪುರುಷರನ್ನು 34, ಮಹಿಳೆಯರನ್ನು 16 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇರ ಸಂದರ್ಶನದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಮ್ಮ ಸ್ವ-ವಿವರ ಮತ್ತು ಅಂಕಪಟ್ಟಿಗಳ ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 08226 - 224430.
ಧಾರವಾಡದಲ್ಲಿ ಕೆಲಸ ಖಾಲಿ ಇದೆ: ಧಾರವಾಡ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5 ರೊಳಗಾಗಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 16,382.52 ಗೌರವ ಸಂಭಾವನೆ ನೀಡಲಾಗುತ್ತದೆ. ಗ್ರಾಮ ಪಂಚಾಯತಿವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳು, ಹೆಚ್ಚಿನ ಮಾಹಿತಿಗಾಗಿ https://zpdharwad.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications