ಆಟೋಮೊಬೈಲ್ ಕ್ಷೇತ್ರದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ
ನವದೆಹಲಿ, ಜುಲೈ, 20: "ಭಾರತದ ಆಟೋಮೊಬೈಲ್ ಕ್ಷೇತ್ರವು ಮುಂದಿನ 5-6 ವರ್ಷಗಳಲ್ಲಿ ಯುವಕರಿಗೆ ಕನಿಷ್ಠ ಒಂದು ಕೋಟಿ ಉದ್ಯೋಗಗಳನ್ನು ಸೃಷ್ಟಿಸಲಿದೆ" ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಆಟೋಮೋಟಿವ್ ಸ್ಕಿಲ್ಸ್ ಡೆವಲಪ್ಮೆಂಟ್ ಕೌನ್ಸಿಲ್ ಮೂಲಕ ಮಾತನಾಡಿದ ಅವರು, "ಭಾರತದಲ್ಲಿ ಈ ವಲಯದ ಶೇಕಡಾ 40ರಷ್ಟು ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಮಾಡಲಾಗುತ್ತದೆ ಮತ್ತು ಆಟೋಮೊಬೈಲ್ಗಳಲ್ಲಿ ಎಲೆಕ್ಟ್ರಾನಿಕ್ಸ್ ಬಳಕೆಯ ಹೆಚ್ಚಳ ಮಾಡುವ ನಿರೀಕ್ಷೆಯಿದೆ" ಎಂದು ಹೇಳಿದರು.
"ಭಾರತದಲ್ಲಿ ಆಟೋ ಕ್ಷೇತ್ರವು ಮುಂದಿನ 5-6 ವರ್ಷಗಳಲ್ಲಿ ಯುವಕರಿಗೆ ಒಂದು ದೊಡ್ಡ ಅವಕಾಶವನ್ನು ಕಲ್ಪಿಸುತ್ತದೆ. ಇದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಲಯವಾಗಿದೆ" ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

"ಮೊಬೈಲ್ ಫೋನ್, ಲ್ಯಾಪ್ಟಾಪ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಉತ್ಪಾದನಾ ಕಂಪನಿಗಳಿಗೆ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಪಾಲುದಾರಿಕೆಯನ್ನು ನೀಡಲಾಗುತ್ತದೆ. ಮತ್ತು ಕೌಶಲ್ಯ ಅಭಿವೃದ್ಧಿ ಶಕ್ತಿಯ ಕೇಂದ್ರವನ್ನಾಗಿ ಭಾರತವನ್ನು ಜಗತ್ತಿಗೆ ಪರಿಚಯಿಸಿ, ಪ್ರಧಾನ ಮಂತ್ರಿಯವರ ಆಶಯವನ್ನು ಪೂರೈಸಲು ಮುಂದಾಗಿದ್ದೇವೆ. ಯುವಕರಿಗೆ ಈ ಕ್ಷೇತ್ರದಲ್ಲಿ ತರಬೇತಿ ನೀಡುವುದರ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವುದು ನಮ್ಮ ಗುರಿಯಾಗಿದೆ" ಎಂದು ಹೇಳಿದರು.
ಎಂಒಯು ಭಾಗವಾಗವಾದ ಟಿಕೆಎಂನಿಂದ 2024ರ ವೇಳೆಗೆ 18,000 ಆಟೋಮೋಟಿವ್ ಕೌಶಲ್ಯಗಳ ಮೂಲಕ ತರಬೇತಿ ನೀಡುವ ಯೋಜನೆ ರೂಪಿಸಲಾಗಿದೆ. ವಿಕ್ರಮ್ ಗುಲಾಟಿ ಅವರ ಕಂಪನಿಯು ಈಗಾಗಲೇ ದೇಶಾದ್ಯಂತ 10,000 ಯುವಕರಿಗೆ ತರಬೇತಿ ನೀಡಿದೆ. ನಾವು 21 ರಾಜ್ಯಗಳಲ್ಲಿ 56 ತರಬೇತಿ ಕೇಂದ್ರಗಳನ್ನು ಹೊಂದಿದ್ದೇವೆ. ASDCಯೊಂದಿಗಿನ ಒಪ್ಪಂದದ ಅಡಿಯಲ್ಲಿ 2024ರ ವೇಳೆಗೆ ಯುವಕರಿಗೆ ತರಬೇತಿ ನೀಡಲು ಕೇಂದ್ರಗಳನ್ನು ಭಾರತದಾದ್ಯಂತ ವಿಸ್ತರಿಸಲು ಬಯಸುತ್ತೇವೆ. ಹೆಚ್ಚಿನದಾಗಿ ತರಬೇತಿ ನೀಡಲು ಈಶಾನ್ಯ, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್ಗಢದಲ್ಲಿ ಕೇಂದ್ರಗಳನ್ನು ವಿಸ್ತರಿಸಲಾಗುತ್ತದೆ.

ಆಟೋಮೊಬೈಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಮಹತ್ವದ ಹೆಜ್ಜೆ ಇದಾಗಿದ್ದು, ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಇನ್ನು ಹೆಚ್ಚಿನದಾಗಿ ಮಹತ್ವಪೂರ್ಣ ಯೋಜನೆಗಳನ್ನು ಜಾರಿಗೆ ತರಲು ರಾಜೀವ್ ಚಂದ್ರಶೇಖರ್ ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸದಂತೆ ಕಂಪನಿಗಳನ್ನು ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications