ಎಲ್ಲಿಂದಲಾದರೂ ಕೆಲಸ ಮಾಡಿ: ಭಾರತದಿಂದ 9,000 ಉದ್ಯೋಗಿಗಳಿಗೆ ಅವಕಾಶ
'ಎಲ್ಲಿಂದಲಾದರೂ ಕೆಲಸ ಮಾಡಿ' ಹೀಗಂತ ಯಾವುದಾದರೂ ಕಂಪನಿ ಆಫರ್ ಕೊಟ್ಟುಬಿಟ್ಟರೆ ಉದ್ಯೋಗಿಗಳಿಗೆ ಸ್ವರ್ಗಕ್ಕೆ ದಾರಿತೋರಿದಷ್ಟೇ ಖುಷಿ ನೀಡುವುದರಲ್ಲಿ ಅನುಮಾನವಿಲ್ಲ. ಕೊರೊನಾದಿಂದ ಕೊಂಚ ಬಿಡುಗಡೆ ಸಿಗುತ್ತಿದ್ದಂತೆ ಹಲವಾರು ಕಂಪನಿಗಳು ಉದ್ಯೋಗಿಗಳಿಗೆ 'ವರ್ಕ್ ಫ್ರಾಂ ಆಫೀಸ್' ಎಂದು ಹೇಳಿ ಉದ್ಯೋಗಿಗಳಿಗೆ ಕಡ್ಡಾಯವಾಗಿ ಆಫೀಸ್ ಬರಲು ಸೂಚಿಸಿವೆ. ಈಗಲೂ ಕೊರೊನಾ ಭೀತಿಯಲ್ಲಿರುವ ಜನ ಹಾಗೂ ಮನೆಯಲ್ಲಿ ಆಫೀಸ್ ಕೆಲಸಕ್ಕೆ ಹೊಂದಿಕೊಂಡಿರುವ ಜನರಿಗೆ ಇದು ಕಿರಿಕಿರಿಯನ್ನುಂಟು ಮಾಡಿದೆ. ಈ ನಡುವೆ ಎಂಎನ್ಸಿ ಕಂಪನಿಯೊಂದು ಭಾರತದಾದ್ಯಂತ ಸುಮಾರು 9,000 ಹೊಸ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಆಫರ್ ಕೊಡುವುದಾಗಿ ಕರೆ ನೀಡಿದೆ.
ಮನೆಯಿಂದಲೇ ಉದ್ಯೋಗಿಗಳಿಂದ ಕೆಲಸ ಮಾಡಿಸಿಕೊಳ್ಳಲು ಕಂಪನಿ ಯೋಚನೆ ಮಾಡಿದೆ. ತಾವು ನೀಡುವ ಟಾರ್ಗೆಟ್ ಪೂರ್ಣಗೊಳಿಸಿದರೆ ಸಾಕು ಎಂದು ಕಂಪನಿ ಹೇಳಿಕೊಂಡಿದೆ. ಸದ್ಯ ಶ್ರೇಣಿ II ಮತ್ತು III ರೀತಿಯಲ್ಲಿ ಹಂತ ಹಂತವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಜಾಗತಿಕ ಗ್ರಾಹಕ ಸೇವಾ ಸಾಫ್ಟ್ವೇರ್ ಮತ್ತು ಸೇವೆಗಳ ಕಂಪನಿ ಮಂಗಳವಾರ ಕಂಪನಿಯು ಭಾರತದಾದ್ಯಂತ ಸುಮಾರು 9,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಯೋಜಿಸುತ್ತಿದೆ ಎಂದು ಹೇಳಿದೆ. ನೇರ ಕರೆ ಹಾಗೂ ಚಾಟ್ಗಳ ಮೂಲಕ ಕಂಪನಿ ಉದ್ಯೋಗಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದೆ.
"ನಾವು ನಮ್ಮ ಜನರಿಂದ ಹೆಚ್ಚಾಗಿ ಕೆಲಸವನ್ನು ತೆಗೆದುಕೊಳ್ಳುತ್ತೇವೆ ಮತ್ತು ಅವರನ್ನು ನಾಯಕರನ್ನಾಗಿ ಬೆಳೆಸುವ ಮುನ್ನ ಫ್ರೆಷರ್ಗಳನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಉದ್ಯಮಕ್ಕಿಂತ ನಮ್ಮ ಅಟ್ರಿಷನ್ ದರಗಳು ಸ್ಥಿರವಾಗಿ ಕಡಿಮೆ ಇರುವುದಕ್ಕೆ ಇದು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ನಮ್ಮ ಕಾರ್ಯಪಡೆಯಲ್ಲಿ ವೈವಿಧ್ಯತೆಯನ್ನು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ," ಎಂದು ಮಿಂಟ್ ವರದಿಯ ಪ್ರಕಾರ, ಭಾರತ ಮತ್ತು ಅಮೇರಿಕಾ ಎಸ್ವಿಪಿ ಮತ್ತು HRD ಹೆಡ್ ನೀನಾ ನಾಯರ್ ಅವರು ಹೇಳಿದರು.

ಕಂಪನಿಯು ಕಳೆದ ವರ್ಷ ಭಾರತದಿಂದ 5,000 ಜನರನ್ನು ನೇಮಿಸಿಕೊಂಡಿದೆ ಎಂದು ಹೇಳಿದೆ. ಕಂಪನಿಯು ಇತ್ತೀಚೆಗೆ ಲಾಸ್ ವೇಗಾಸ್ನಲ್ಲಿ ನಡೆದ CCW ಎಕ್ಸಲೆನ್ಸ್ ಅವಾರ್ಡ್ಸ್ನಲ್ಲಿ "ವರ್ಷದ BPO" ಪ್ರಶಸ್ತಿಯನ್ನು ಸ್ವೀಕರಿಸಿದೆ ಮತ್ತು ಇದನ್ನು ಕಂಪನಿಗೆ ಗ್ರಾಹಕ ಸಂಪರ್ಕ ವಾರ, ವಿಶ್ವದ ಅತಿದೊಡ್ಡ ಗ್ರಾಹಕ ಕಾರ್ಯಕ್ರಮದಿಂದ ಪ್ರಸ್ತುತಪಡಿಸಲಾಯಿತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications