Work From Home: ಪ್ರಮುಖ ಐಟಿ ಕಂಪನಿಯಿಂದ ವರ್ಕ್ಫ್ರಮ್ ಹೋಮ್ ಆಯ್ಕೆಗೆ ಬ್ರೇಕ್
Work From Home: ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಪದ್ಧತಿ ಕೊನೆಯಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಐಟಿ - ಬಿಟಿ ಸೇರಿದಂತೆ ವಿವಿಧ ಪ್ರಮುಖ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ವರ್ಕ್ಫ್ರಮ್ ಆಯ್ಕೆಯನ್ನು ತೆಗೆದುಹಾಕಲಾಗುತ್ತಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯು ಇದೀಗ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
ಭಾರತದ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ವರ್ಕ್ಫ್ರಮ್ ಹೋಮ್ ಆಯ್ಕೆಗೆ ಬ್ರೇಕ್ ಹಾಕಲು ಮುಂದಾಗಿದೆ. ಇದರಿಂದ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಖ್ಯವಾಗಿ ಪ್ರಮುಖ ಕಂಪನಿಗಳು ನೀಡಿದ್ದ ವರ್ಕ್ಫ್ರಮ್ ಹೋಮ್ ಆಯ್ಕೆಯಿಂದಾಗಿ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೂ ಅಲ್ಪ ಪ್ರಮಾಣದಲ್ಲಿ ಬ್ರೇಕ್ ಬಿದ್ದಿತ್ತು.

ಟಿಸಿಎಸ್ ಸಂಸ್ಥೆಯು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಡಿತಗೊಳಿಸಲು ಮುಂದಾಗಿದೆ. ಹೊಸ ನಿಯಮಗಳ ಅನುಸಾರ ವಾರದಲ್ಲಿ 5 ದಿನಗಳ ಕಚೇರಿ ಹಾಜರಾತಿ / ಕಚೇರಿಗೆ ಬರುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಚೇರಿಯಿಂದ ಕೆಲಸ ಮಾಡುವ ನೀತಿಯನ್ನು ಬಿಗಿಗೊಳಿಸಿದೆ. ಕೆಲವು ಉದ್ಯೋಗಿಗಳು ಹಿಂದಿನ ತ್ರೈಮಾಸಿಕಗಳಲ್ಲಿ ಹಾಜರಾತಿ ನಿಯಮಗಳನ್ನು ಪಾಲಿಸದ ಕಾರಣ, ಉದ್ಯೋಗಿಗಳ ವಾರ್ಷಿಕ ಕಾರ್ಯಕ್ಷಮತೆಯ ಮೌಲ್ಯಮಾಪನವನ್ನು ತಡೆಯಲಾಗಿದೆ. ಈ ನಿರ್ಧಾರವು ಪ್ರಸ್ತುತ ಹಣಕಾಸು ವರ್ಷದ ನಿರ್ದಿಷ್ಟ ತ್ರೈಮಾಸಿಕಗಳಲ್ಲಿ ಟಿಸಿಎಸ್ನ ಕಚೇರಿಯಿಂದ ಕೆಲಸ ಮಾಡುವ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಐದು ದಿನಗಳ ಕಾಲ ಕಚೇರಿಗೆ ಬರಬೇಕು
ಇನ್ನು ಮುಂದಿನ ದಿನಗಳಲ್ಲಿ ಈ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ವಾರದಲ್ಲಿ ಐದು ದಿನಗಳ ಕಾಲ ಕಚೇರಿಗೆ ಬರಬೇಕು ಎನ್ನುವ ನಿಯಮವನ್ನು ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ವರ್ಕ್ ಫ್ರಮ್ ಹೋಮ್ (Work From Home) ಆಯ್ಕೆಯು ಕೊನೆಗೊಳ್ಳಲಿದೆ. ಟಿಸಿಎಸ್ನಲ್ಲಿ ವರ್ಕ್ಫ್ರಮ್ ಹೋಮ್ ಆಯ್ಕೆಯನ್ನು ದುರ್ಬಳಕೆ ಮಾಡಿಕೊಂಡಿರುವ ಉದ್ಯೋಗಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಅವರ ಬಡ್ತಿ ಹಾಗೂ ವೇತನ ಹೆಚ್ಚಳದ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ.
ಟಿಸಿಎಸ್ ಸಂಸ್ಥೆಯ ಉದ್ಯೋಗಿಗಳ ಕಂಪನಿ ಹಾಜರಾತಿ ವಿಚಾರದಲ್ಲಿ ದೃಢವಾಗಿದೆ. ಉದ್ಯೋಗಿಗಳು ವಾರದಲ್ಲಿ ಐದು ದಿನಗಳು ಕಚೇರಿಯಿಂದ ಕೆಲಸ ಮಾಡಬೇಕಾಗುತ್ತದೆ. ಇದು ಕಂಪನಿಯು ಅಂತಹ ದೃಢವಾದ ನಿಲುವನ್ನು ತೆಗೆದುಕೊಂಡ ಭಾರತದ ಉನ್ನತ ಐಟಿ ಸಂಸ್ಥೆಗಳಲ್ಲಿ ಮೊದಲನೆಯದಾಗಿದೆ. ಕಂಪನಿಯು ಕಳೆದ ವರ್ಷ ತನ್ನ ವರ್ಕ್ ಫ್ರಮ್ ಹೋಮ್ ವಿನಾಯಿತಿ ನೀತಿಯನ್ನು ನವೀಕರಿಸಿದೆ. ಉದ್ಯೋಗಿಗಳು ಪ್ರತಿ ತ್ರೈಮಾಸಿಕಕ್ಕೆ ಆರು ದಿನಗಳವರೆಗೆ ವೈಯಕ್ತಿಕ ತುರ್ತು ಪರಿಸ್ಥಿತಿಗಳಲ್ಲಿ ಈ ನಿಯಮದಿಂದ ವಿನಾಯಿತಿ ಪಡೆಯುವುದಕ್ಕೆ ಅವಕಾಶ ಇರಲಿದೆ.
ಟ್ರಾಫಿಕ್ ಜಾಮ್ ಸೇರಿದಂತೆ ವಿವಿಧ ಸಮಸ್ಯೆ
ಕಂಪನಿಯ ಈ ಹೊಸ ನಿರ್ಧಾರದಿಂದ ದೇಶದ ಪ್ರಮುಖ ನಗರಗಳಲ್ಲಿ ಟ್ರಾಫಿಕ್ ಜಾಮ್ ಸೇರಿದಂತೆ ವಿವಿಧ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯವಾಗಿ ಕಂಪನಿಯ ಹೊಸ ನಿಯಮವನ್ನು ಇನ್ನುಳಿದ ಕಂಪನಿಗಳು ಸಹ ಫಾಲೋ ಮಾಡುವ ಸಾಧ್ಯತೆ ಇದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications