Work From Home: ಪ್ರಮುಖ ಐಟಿ ಕಂಪನಿಯಿಂದ ವರ್ಕ್ಫ್ರಮ್ ಹೋಮ್ ಆಯ್ಕೆಗೆ ಬ್ರೇಕ್
Work From Home: ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಪದ್ಧತಿ ಕೊನೆಯಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಐಟಿ - ಬಿಟಿ ಸೇರಿದಂತೆ ವಿವಿಧ ಪ್ರಮುಖ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ವರ್ಕ್ಫ್ರಮ್ ಆಯ್ಕೆಯನ್ನು ತೆಗೆದುಹಾಕಲಾಗುತ್ತಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯು ಇದೀಗ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
ಭಾರತದ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ವರ್ಕ್ಫ್ರಮ್ ಹೋಮ್ ಆಯ್ಕೆಗೆ ಬ್ರೇಕ್ ಹಾಕಲು ಮುಂದಾಗಿದೆ. ಇದರಿಂದ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಖ್ಯವಾಗಿ ಪ್ರಮುಖ ಕಂಪನಿಗಳು ನೀಡಿದ್ದ ವರ್ಕ್ಫ್ರಮ್ ಹೋಮ್ ಆಯ್ಕೆಯಿಂದಾಗಿ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೂ ಅಲ್ಪ ಪ್ರಮಾಣದಲ್ಲಿ ಬ್ರೇಕ್ ಬಿದ್ದಿತ್ತು.

ಟಿಸಿಎಸ್ ಸಂಸ್ಥೆಯು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಡಿತಗೊಳಿಸಲು ಮುಂದಾಗಿದೆ. ಹೊಸ ನಿಯಮಗಳ ಅನುಸಾರ ವಾರದಲ್ಲಿ 5 ದಿನಗಳ ಕಚೇರಿ ಹಾಜರಾತಿ / ಕಚೇರಿಗೆ ಬರುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಚೇರಿಯಿಂದ ಕೆಲಸ ಮಾಡುವ ನೀತಿಯನ್ನು ಬಿಗಿಗೊಳಿಸಿದೆ. ಕೆಲವು ಉದ್ಯೋಗಿಗಳು ಹಿಂದಿನ ತ್ರೈಮಾಸಿಕಗಳಲ್ಲಿ ಹಾಜರಾತಿ ನಿಯಮಗಳನ್ನು ಪಾಲಿಸದ ಕಾರಣ, ಉದ್ಯೋಗಿಗಳ ವಾರ್ಷಿಕ ಕಾರ್ಯಕ್ಷಮತೆಯ ಮೌಲ್ಯಮಾಪನವನ್ನು ತಡೆಯಲಾಗಿದೆ. ಈ ನಿರ್ಧಾರವು ಪ್ರಸ್ತುತ ಹಣಕಾಸು ವರ್ಷದ ನಿರ್ದಿಷ್ಟ ತ್ರೈಮಾಸಿಕಗಳಲ್ಲಿ ಟಿಸಿಎಸ್ನ ಕಚೇರಿಯಿಂದ ಕೆಲಸ ಮಾಡುವ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಐದು ದಿನಗಳ ಕಾಲ ಕಚೇರಿಗೆ ಬರಬೇಕು
ಇನ್ನು ಮುಂದಿನ ದಿನಗಳಲ್ಲಿ ಈ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ವಾರದಲ್ಲಿ ಐದು ದಿನಗಳ ಕಾಲ ಕಚೇರಿಗೆ ಬರಬೇಕು ಎನ್ನುವ ನಿಯಮವನ್ನು ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ವರ್ಕ್ ಫ್ರಮ್ ಹೋಮ್ (Work From Home) ಆಯ್ಕೆಯು ಕೊನೆಗೊಳ್ಳಲಿದೆ. ಟಿಸಿಎಸ್ನಲ್ಲಿ ವರ್ಕ್ಫ್ರಮ್ ಹೋಮ್ ಆಯ್ಕೆಯನ್ನು ದುರ್ಬಳಕೆ ಮಾಡಿಕೊಂಡಿರುವ ಉದ್ಯೋಗಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಅವರ ಬಡ್ತಿ ಹಾಗೂ ವೇತನ ಹೆಚ್ಚಳದ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ.
ಟಿಸಿಎಸ್ ಸಂಸ್ಥೆಯ ಉದ್ಯೋಗಿಗಳ ಕಂಪನಿ ಹಾಜರಾತಿ ವಿಚಾರದಲ್ಲಿ ದೃಢವಾಗಿದೆ. ಉದ್ಯೋಗಿಗಳು ವಾರದಲ್ಲಿ ಐದು ದಿನಗಳು ಕಚೇರಿಯಿಂದ ಕೆಲಸ ಮಾಡಬೇಕಾಗುತ್ತದೆ. ಇದು ಕಂಪನಿಯು ಅಂತಹ ದೃಢವಾದ ನಿಲುವನ್ನು ತೆಗೆದುಕೊಂಡ ಭಾರತದ ಉನ್ನತ ಐಟಿ ಸಂಸ್ಥೆಗಳಲ್ಲಿ ಮೊದಲನೆಯದಾಗಿದೆ. ಕಂಪನಿಯು ಕಳೆದ ವರ್ಷ ತನ್ನ ವರ್ಕ್ ಫ್ರಮ್ ಹೋಮ್ ವಿನಾಯಿತಿ ನೀತಿಯನ್ನು ನವೀಕರಿಸಿದೆ. ಉದ್ಯೋಗಿಗಳು ಪ್ರತಿ ತ್ರೈಮಾಸಿಕಕ್ಕೆ ಆರು ದಿನಗಳವರೆಗೆ ವೈಯಕ್ತಿಕ ತುರ್ತು ಪರಿಸ್ಥಿತಿಗಳಲ್ಲಿ ಈ ನಿಯಮದಿಂದ ವಿನಾಯಿತಿ ಪಡೆಯುವುದಕ್ಕೆ ಅವಕಾಶ ಇರಲಿದೆ.
ಟ್ರಾಫಿಕ್ ಜಾಮ್ ಸೇರಿದಂತೆ ವಿವಿಧ ಸಮಸ್ಯೆ
ಕಂಪನಿಯ ಈ ಹೊಸ ನಿರ್ಧಾರದಿಂದ ದೇಶದ ಪ್ರಮುಖ ನಗರಗಳಲ್ಲಿ ಟ್ರಾಫಿಕ್ ಜಾಮ್ ಸೇರಿದಂತೆ ವಿವಿಧ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯವಾಗಿ ಕಂಪನಿಯ ಹೊಸ ನಿಯಮವನ್ನು ಇನ್ನುಳಿದ ಕಂಪನಿಗಳು ಸಹ ಫಾಲೋ ಮಾಡುವ ಸಾಧ್ಯತೆ ಇದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications