Election Result: ಅಧಿಕಾರ ಕೊಡಪ್ಪ ದೇವ್ರೇ.. ಟೆಂಪಲ್ ರನ್: ಅರುಣಾಚಲೇಶ್ವರ ವರದಿಂದ ಡಿಕೆಶಿ ಸಿಎಂ ಆಗ್ತಾರಾ?
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಮತ ಎಣಿಕೆ ಭರದಿಂದ ಸಾಗಿದೆ. ಅದರಲ್ಲೂ ವಿಪಕ್ಷ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗುತ್ತಿದ್ದು, ಆಡಳಿತರೂಢ ಬಿಜೆಪಿ ತೀವ್ರ ಹಿನ್ನೆಡೆ ಅನುಭವಿಸುತ್ತಿದೆ. ಮುಂಜಾನೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಗೆಲುವಿಗಾಗಿ ದೇಗುಲಗಳಿಗೆ ಭೇಟಿ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯ ವಿಜಯನಗರದಲ್ಲಿರುವ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದು, ಎರಡು ವಿಧಾನಸಭಾ ಕ್ಷೇತಗಳಿಂದ ಸ್ಪರ್ಧಿಸಿರುವ ವಿ.ಸೋಮಣ್ಣ, ಮೈಸೂರಿನ ಬೆಟ್ಟದ ತಾಯಿ ಚಾಮುಂಡೇಶ್ವರಿಯ ಮೊರೆ ಹೋಗಿದ್ದರು.

ಕಾಂಗ್ರೆಸ್ ನಾಯಕರು ತಾವೇನು ಕಮ್ಮಿ ಇಲ್ಲ ಎಂಬಂತೆ ಶತಾಯಗತಾಯ ಅಧಿಕಾರ ಹಿಡಿಯಲೇ ಬೇಕು ಎಂದು ನಿರ್ಧರಿಸಿದಂತೆ ಕಾಣುತ್ತಿದ್ದು, ಡಿಕೆಶಿ ಕುಟುಂಬ ಸಮೇತ ತಿರುವಣ್ಣಾಮಲೈ ಅರುಣಾಚಲೇಶ್ವರ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದರು. ಈ ಬಾರಿಯಾದರೂ ಬಹುಮತದ ಸರ್ಕಾರ ಬರಲಿ ಎಂದು ಬೆಳಗ್ಗೆಯೇ ಪ್ರಿಯಾಂಕಾ ಗಾಂಧಿ, ಹಿಮಾಚಲ ಪ್ರದೇಶದಲ್ಲಿ ಶಿಮ್ಲಾದ ಜಖು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಹಿಂಡಲಗಾ ಗಣಪತಿ ದೇಗುಲಕ್ಕೆ ತೆರಳಿ, ತಮ್ಮ ಹಾಗೂ ಪಕ್ಷದ ಅಖಂಡ ದ್ವಿಗ್ವಿಜಯಕ್ಕಾಗಿ ವಿಶೇಷ ಪೂಜೆ ಮಾಡಿಸಿದ್ದು, ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ ಬಸವೇಶ್ವರ ದೇವಸ್ಥಾನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ದರು.

ಈಗಾಗಲೇ ಕಾಂಗ್ರೆಸ್ ನಲ್ಲಿ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಕಚೇರಿಯ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ಜೈಕಾರ ಹಾಕುತ್ತಿದ್ದಾರೆ. ಪಕ್ಷದ ಅಭ್ಯರ್ಥಿಗಳು ವಿವಿಧ ಕ್ಷೇತ್ರದಲ್ಲಿ ಜಯಗಳಿಸಿರುವ ಬಗ್ಗೆ ವರದಿಯಾಗಿದೆ. ಇನ್ನು, ತಿರುವಣ್ಣಾಮಲೈ 'ಅರುಣಾಚಲೇಶ್ವರ'ನಿಂದ ಡಿಕೆಶಿಗೆ ಸಿಎಂಯಾಗುವಂತೆ ವರ ಸಿಗುತ್ತಾ? ಎಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಆರಂಭವಾಗಿವೆ.

ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೆ ಏರಲು 113 ಸ್ಥಾನಗಳನ್ನು ಪಡೆಯಬೇಕು. ಕಾಂಗ್ರೆಸ್ ಈಗಾಗಲೇ ಮ್ಯಾಜಿಕ್ ನಂಬರ್ ದಾಟಿ ಮುನ್ನುಗುತ್ತಿದ್ದು, ಹೀಗಾಗಿ, ಈ ಬಾರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಆಗಿದೆ. ಜೊತೆಗೆ ಆಡಳಿತರೂಢ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕೂರುವುದು ಶತಸಿದ್ದ ಎನ್ನುವಂತಿದೆ. ಅತಂತ್ರ ಸರ್ಕಾರ ಬಂದರೆ, 'ಕಿಂಗ್ ಮೇಕರ್' ಆಗುತ್ತೇವೆ ಎಂಬ ಜೆಡಿಎಸ್ ಕನಸು ಭಗ್ನವಾಗುವಂತೆ ಭಾಸವಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications