Beauty Tips: ನೈಸರ್ಗಿಕ ಅರಿಶಿನ ಫೇಸ್ ಪ್ಯಾಕ್ ಮನೆಯಲ್ಲೇ ತಯಾರಿಸಿ- ಪ್ರಯೋಜನ ಏನು ಗೊತ್ತಾ?
ಸುಂದರವಾಗಿ ಕಾಣಬೇಕು ಅಂತ ಯಾರಿಗೆ ತಾನೆ ಆಸೆ ಇರಲ್ಲ ಹೇಳಿ. ಇದಕ್ಕಾಗಿ ಹುಡುಗಿಯರು ಮುಖಕ್ಕೆ ಅನೇಕ ವಿಧದ ಉತ್ಪನ್ನಗಳನ್ನು ಬಳಕೆ ಮಾಡುತ್ತಾರೆ. ದುಬಾರಿ ಹಣ ನೀಡಿ ಕ್ರೀಂ, ಫೇಶಿಯಲ್, ಬ್ಲೀಚ್ ಹಾಗೂ ಸೌಂದರ್ಯ ಚಿಕಿತ್ಸೆಗಳನ್ನು ಮಾಡಿಸಿಕೊಳ್ಳಲು ಮುಂದಾಗುತ್ತಾರೆ. ಆದರೆ ಇದರಿಂದ ಪ್ರಯೋಜನವಾಗುವುದಕ್ಕಿಂತ ತ್ವಚೆ ಹಾಳಾಗುವ ಸಂದರ್ಭಗಳೇ ಹೆಚ್ಚು. ನೀವೇನಾದ್ರು ನಿಮ್ಮ ತ್ವಚೆ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಬಯಸಿದ್ದರೆ ಅರಿಶಿನ ಫೇಸ್ ಪ್ಯಾಕ್ ಬಳಸಿ. ಇದನ್ನು ನೀವು ಮನೆಯಲ್ಲೇ ತಯಾರಿಸಬಹುದು.
ತಕ್ಷಣ ಪಾರ್ಟಿ, ಫಂಕ್ಷನ್ಗಳಿಗೆ ಹೋಗುವ ಸಂದರ್ಭ ಬಂದಲ್ಲಿ ಈ ಫೇಸ್ ಪ್ಯಾಕ್ ತಯಾರಿಸಿ ಬಳಸಬಹುದು. ಹಾಗಾದರೆ ಇದನ್ನು ತಯಾರಿಸುವುದು ಹೇಗೆ? ಜೊತೆಗೆ ಇದನ್ನು ತ್ವಚೆಗೆ ಅನ್ವಯಿಸುವ ವಿಧಾನವನ್ನು ತಿಳಿಯಿರಿ. ಹಾಗಾದರೆ ಮೊದಲಿಗೆ ಅರಿಶಿನ ಫೇಸ್ ಪ್ಯಾಕ್ ತಯಾರಿಸುವ ವಿಧಾನವನ್ನು ತಿಳಿಯೋಣ.

ಬೇಕಾಗುವ ಪದಾರ್ಥಗಳು:-
* ಶುದ್ಧ ಅರಿಶಿನ ಪುಡಿ 50 ಗ್ರಾಂ
* ಅಕ್ಕಿ ಒಂದು ಕಪ್
* ಕೊಬ್ಬರಿ ಎಣ್ಣೆ 2 ಟೇಬಲ್ ಸ್ಪೂನ್
* ನಿಂಬೆಹಣ್ಣು
ತಯಾರಿಸುವ ವಿಧಾನ:-
* ಅರಿಶಿನ ಪುಡಿಗೆ ಅಕ್ಕಿ ತೊಳೆದ ನೀರನ್ನು ಹಾಕಿ ಹಾಗೂ ಎಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ 15 ನಿಮಿಷ ಬಿಡಿ. ನಂತರ ಇದಕ್ಕೆ ಮೂರು ಹನಿ ನಿಂಬೆಹಣ್ಣಿನ ರಸವನ್ನು ಬೆರೆಸೆ ಮಿಕ್ಸ್ ಮಾಡಿದರೆ ನೈಸರ್ಗಿಕ ಅರಿಶಿನ ಫೇಸ್ ಪ್ಯಾಕ್ ರೆಡಿಯಾಗುತ್ತದೆ.
ತ್ವಚೆಗೆ ಅನ್ವಯಿಸುವ ವಿಧಾನ:-
*ಅದನ್ನು ನಿಮ್ಮ ಇಡೀ ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ.
*10-15 ನಿಮಿಷಗಳ ನಂತರ ಮುಖ ಮತ್ತು ಕುತ್ತಿಗೆಯನ್ನು ಚೆನ್ನಾಗಿ ತೊಳೆಯಿರಿ.
*ನಂತರ, ಮುಖಕ್ಕೆ ಮಾಯಿಶ್ಚರೈಸರ್ ಕ್ರೀಂ ಹಚ್ಚಿ.
ಪ್ರಯೋಜನಗಳು:-
ಅರಿಶಿನ ತ್ವಚೆಗೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿದೆ. ಹೀಗಾಗಿ ಹಿಂದಿನ ಕಾಲದ ಮಹಿಳೆಯರು ಹಸಿ ಅರಿಶಿನದ ಕೊಂನನ್ನು ಕಲ್ಲಿನಲ್ಲಿ ರುಬ್ಬಿಕೊಂಡು ತ್ವಚೆಗೆ ಅನ್ವಯಿಸುತ್ತಿದ್ದರು. ಅರಿಶಿನದ ಫೇಸ್ ಪ್ಯಾಕ್ ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮುಖದ ಕಲೆಗಳನ್ನು ತೆಗೆದುಹಾಕಲು ಈ ಫೇಸ್ ಪ್ಯಾಕ್ ಸಹಾಯ ಮಾಡುತ್ತದೆ ಮತ್ತು ಅದರಿಂದ ಇನ್ನೂ ಅನೇಕ ಪ್ರಯೋಜನಗಳು ಸಿಗಲಿದೆ.
*ಮುಖದಲ್ಲಿ ನೆರಿಗೆಗಳು ಮತ್ತು ಸೂಕ್ಷ್ಮ ಗೆರೆಗಳನ್ನು ಮೂಡದಂತೆ ತಡೆಯಲು ಸಹಾಯ ಮಾಡುತ್ತದೆ.
*ಸೋಂಕುಗಳು ಮತ್ತು ಚರ್ಮಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ನಿವಾರಿಸುತ್ತದೆ.
* ಮುಖದಲ್ಲಿ ಮೊಡವೆ ಮತ್ತು ಗುಳ್ಳೆಗಳ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅರಿಶಿನದ ಫೇಸ್ ಪ್ಯಾಕ್ ಬಹಳ ಪ್ರಯೋಜನಕಾರಿಯಾಗಿದೆ.
* ಅರಿಶಿನದ ಫೇಸ್ ಪ್ಯಾಕ್ ಚರ್ಮವನ್ನು ಬಿಳಿಯಾಗಿಸುವ ಗುಣಗಳನ್ನು ಹೊಂದಿದೆ.
* ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ, ಇದು ಒಣ ಚರ್ಮದ ಸಮಸ್ಯೆಗಳನ್ನು ದೂರ ಮಾಡುತ್ತದೆ.
* ಇದು ಚರ್ಮದ ನೈಸರ್ಗಿಕ ತೈಲವನ್ನು ಕಾಪಾಡಿ ಹೆಚ್ಚುವರಿ ತೈಲವನ್ನು ಹೀರಿಕೊಳ್ಳುತ್ತದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications