Greed: ಆಸೆ ಈಡೇರಿದ ಮೇಲೆ ಹುಟ್ಟುವ ದುರಾಸೆಯತ್ತ ಎಚ್ಚರವಾಗಿರಿ!
ಮನುಷ್ಯನಲ್ಲಿ ಆಸೆ ಇರಬೇಕು... ಆದರೆ ದುರಾಸೆ ಇರಬಾರದು.. ಇದು ಹಿರಿಯರು ಹೇಳುತ್ತಾ ಬಂದಿರುವ ಮಾತು. ಮತ್ತು ದುರಾಸೆಗೆ ಲಗಾಮು ಹಾಕದೆ ಹೋದರೆ ಆಸೆಯಿಂದ ಗಳಿಸಿದೆಲ್ಲವನ್ನು ದುರಾಸೆ ನಿರ್ನಾಮ ಮಾಡಿ ಬಿಡುತ್ತದೆ. ಹೀಗಾಗಿ ಆಸೆಯಿಂದ ಕಟ್ಟಿಕೊಳ್ಳುವ ಬದುಕು ದುರಾಸೆಗೆ ಬಿದ್ದಾಗ ಹೇಗೆ ಹಾಳಾಗಿ ಹೋಗುತ್ತದೆ ಎಂಬುದು ಹಲವರಿಗೆ ಹಲವು ವಿಚಾರಗಳಲ್ಲಿ ಗೊತ್ತಾಗಿರುತ್ತದೆ. ಜತೆಗೆ ದುರಾಸೆಗೆ ಬಿದ್ದು ಬದುಕನ್ನು ಕಳೆದುಕೊಂಡವರ ದೊಡ್ಡ ಪಟ್ಟಿಯೇ ನಮ್ಮ ಮುಂದಿದೆ.
ಆಸೆಯಿಂದ ಬದುಕು ಕಟ್ಟಿಕೊಂಡು ನೆಮ್ಮದಿಯಾಗಿ ಜೀವನ ಕಳೆಯುತ್ತಿದ್ದವರಿಗೆ ಇದ್ದಕ್ಕಿದ್ದಂತೆ ದುರಾಸೆ ಹುಟ್ಟಿ ಹೆಚ್ಚು ಹಣ ಮಾಡುವ ಹಾದಿಯತ್ತ ಹೆಜ್ಜೆ ಹಾಕಿದರೆ ಏನಾಗುತ್ತದೆ? ಅಧ್ಯಾತ್ಮದ ಭಾಷೆಯಲ್ಲಿ ಹೇಳಬೇಕಾದರೆ ದುರಾಸೆಯ ಬೆನ್ನೇರಿ ಹೊರಟರೆ ಏನಾಗುತ್ತದೆ ಎಂಬುದಕ್ಕೊಂದು ದೃಷ್ಟಾಂತ ಕಥೆ ಇಲ್ಲಿದೆ. ಅದನ್ನು ಓದಿದ ಬಳಿಕ ನಮಗೆ ಆಸೆ ಮತ್ತು ದುರಾಸೆ ನಡುವಣ ವ್ಯತ್ಯಾಸ ಅರ್ಥವಾಗಿ ಬಿಡುತ್ತದೆ.

ಕಥೆಯ ಪ್ರಕಾರ ಗೋವಿಂದ ಮತ್ತು ಆನಂದ ಎಂಬ ಇಬ್ಬರು ವ್ಯಾಪಾರಿಗಳು ತಮ್ಮ ಊರಿನಲ್ಲಿಯೇ ವ್ಯಾಪಾರ ನಡೆಸಿಕೊಂಡು ಬಂದಿದ್ದರು. ವ್ಯಾಪಾರದಿಂದ ಒಂದಷ್ಟು ಲಾಭ ಬರುತ್ತಿತ್ತಲ್ಲದೆ, ಜೀವನ ಸುಖಮಯವಾಗಿಯೇ ಸಾಗುತ್ತಿತ್ತು. ಅದರೆ ಅವರಿಗೆ ಸಮಾಧಾನವಾಗಿರಲಿಲ್ಲ. ದೂರದ ಊರಿನಲ್ಲಿ ವ್ಯಾಪಾರ ಮಾಡಿದರೆ ಅಲ್ಲಿ ಬಹಳಷ್ಟು ಲಾಭ ಗಳಿಸಬಹುದು ಎಂಬ ದುರಾಸೆ ಅವರಲ್ಲಿ ಮನೆ ಮಾಡಿತು. ಹೀಗಾಗಿ ಅವರು ಹೊಸ ಊರಿನ ಹಾದಿ ಹಿಡಿದರು.
ಹೊಸ ಊರಿನಲ್ಲಿ ವ್ಯಾಪಾರ ಶುರು
ಹೊಸ ಊರಿಗೆ ತೆರಳಿದ ಗೋವಿಂದ ಮತ್ತು ಆನಂದ ಅಲ್ಲಿ ವ್ಯಾಪಾರ ಮಾಡಲು ಸಿದ್ದರಾದರು. ತಮ್ಮಲ್ಲಿರುವ ಹಣವನ್ನೆಲ್ಲಾ ವ್ಯಾಪಾರಕ್ಕೆ ಬಂಡವಾಳವಾಗಿ ಸುರಿದು ಅದರಿಂದ ಲಕ್ಷಾಂತರ ರೂಪಾಯಿ ಲಾಭಗಳಿಸುವ ಬಯಕೆ ಅವರದ್ದಾಗಿತ್ತು. ಅಪರಿಚಿತ ಊರು, ಅಪರಿಚಿತ ಜನ, ತಮ್ಮಲ್ಲಿರುವ ಬಂಡವಾಳವನ್ನು ಹೇಗೆ ವ್ಯಾಪಾರಕ್ಕೆ ವಿನಿಯೋಗಿಸುವುದು ಎಂಬುದು ಅವರಿಗೆ ಚಿಂತೆಯಾಯಿತು. ಬಹಳ ಯೋಚಿಸಿದ ನಂತರ ಅವರಿಬ್ಬರು ಒಂದು ನಿರ್ಧಾರಕ್ಕೆ ಬಂದರು.

ನಮ್ಮಲ್ಲಿರುವ ಬಂಡವಾಳವನ್ನೆಲ್ಲಾ ಸಂಪೂರ್ಣವಾಗಿ ವ್ಯಾಪಾರಕ್ಕೆ ಬಳಸಿದರೆ ತೊಂದರೆಯಾಗಬಹುದು. ಆದುದರಿಂದ ಬಂಡವಾಳದ ಸ್ವಲ್ಪ ಭಾಗವನ್ನು ಮಾತ್ರ ಖರ್ಚು ಮಾಡಿ ಕ್ರಮೇಣ ಸ್ವಲ್ಪ ಸ್ವಲ್ಪವೇ ವ್ಯಾಪಾರ ಕುದುರಿದ ನಂತರ ಬಳಸಿಕೊಳ್ಳೋಣ ಎಂದುಕೊಂಡರು. ತಮ್ಮಲ್ಲಿದ್ದ ಬಂಡವಾಳದ ಸ್ವಲ್ಪ ಭಾಗವನ್ನು ಹಾಕಿ ವ್ಯಾಪಾರ ಆರಂಭಿಸಿದರು. ಆದರೆ ಈ ಸ್ವಲ್ಪ ಭಾಗದ ಬಂಡವಾಳ ವ್ಯಾಪಾರದ ಪ್ರಾರಂಭದ ಖರ್ಚಿಗೆ ಸರಿದೂಗಿ ಲಾಭವೇನೂ ಬರಲಿಲ್ಲ.
ದೃಷ್ಟಾಂತ ಕಥೆಯಿಂದ ತಿಳಿಯುವುದೇನು?
ಮತ್ತೆ ಇನ್ನು ಸ್ವಲ್ಪ ಭಾಗವನ್ನು ವ್ಯಾಪಾರಕ್ಕೆ ಬಳಸಿದರು. ಅದು ಸಹ ಖರ್ಚು ವೆಚ್ಚಗಳಿಗೆ ಸರಿ ಹೋಗಿ ಲಾಭ ಕಾಣಲಿಲ್ಲ. ಹೀಗೆ ಸ್ವಲ್ಪ ಸ್ವಲ್ಪ ಬಂಡವಾಳ ಹಾಕುತ್ತಾ ಹೋದರು. ವ್ಯಾಪಾರ ಕುದುರುವ ವೇಳೆಗೆ ಬಂಡವಾಳವೆಲ್ಲಾ ಕರಗಿ ಸಂಪೂರ್ಣ ನಷ್ಟ ಹೊಂದಿದರು. ಈ ದೃಷ್ಟಾಂತ ಕಥೆಯಿಂದ ಮನುಷ್ಯ ಆಸೆಯ ಕುದುರೆಯೇರಿದರೆ ಎಂತಹ ಕಷ್ಟ ನಷ್ಟಗಳಿಗೆ ತಳ್ಳಲ್ಪಡುತ್ತಾನೆ ಎಂಬುದನ್ನು ತಿಳಿಸುತ್ತದೆ.

ಹಾಗೆನೋಡಿದರೆ ಆಸೆ ಪಡದ ಮನುಷ್ಯ ಇಲ್ಲವೇ ಇಲ್ಲ. ಆಸೆ ಎಂಬುದು ನಮ್ಮಲ್ಲಿ ಇಲ್ಲದೆ ಹೋದರೆ ನಾವು ಉನ್ನತಿ ಕಾಣಲು ಸಾಧ್ಯವಿಲ್ಲವೇನೋ.. ನಾವು ನಮ್ಮ ಮಿತಿಯಲ್ಲಿ ಆಸೆ ಪಡುವುದು ಮತ್ತು ಆ ಆಸೆ ನೆರವೇರುವ ತನಕ ವಿರಮಿಸದೆ ದುಡಿಯುವುದು ನಮ್ಮನ್ನು ನಮ್ಮ ಆಸೆಯ ಸುಖವನ್ನು ಬಹಳ ಕಾಲದವರೆಗೆ ಅನುಭವಿಸಲು ಸಾಧ್ಯವಾಗುತ್ತದೆ. ಆದರೆ ಹಾಗೆ ನಡೆಯುವುದು ಮಾತ್ರ ಬಹಳ ಅಪರೂಪ.
ಬುದ್ಧನ ಯುಕ್ತಿ ಸದಾ ನಮ್ಮ ನೆನಪಿನಲ್ಲಿರಲಿ
ಏಕೆಂದರೆ ನಾವೆಲ್ಲರೂ ಆಸೆಯ ಕುದುರೆ ಏರಿ ಹೊರಡುವವರು ಹೀಗಾಗಿ ಕೆಲವೊಮ್ಮೆ ಆಸೆಯ ಕುದುರೆಯ ಹಾದಿ ಬದಲಿಸಿರುತ್ತದೆ. ಆಸೆಯ ಸುಖದ ಅಮಲಿನಲ್ಲಿ ಕಷ್ಟ ಕಾರ್ಪಣ್ಯಗಳನ್ನು ಎಳೆದುಕೊಂಡು ಜರ್ಜರಿತರಾಗಿ ಬಿಡುತ್ತೇವೆ. ಆಸೆಗಳೆಲ್ಲ ನೆರವೇರಿದ್ದೇ ಆದರೆ ಮತ್ತೆ ನಮ್ಮಲ್ಲಿ ಹುಟ್ಟುವುದು ದುರಾಸೆ. ದುರಾಸೆ ಎಂಬುವುದು ನಮ್ಮನ್ನು ಜೀವಂತ ಸುಡುವ ಬೆಂಕಿ.
ಏಕಾಂತದಲ್ಲಿ ಕುಳಿತು ಸಿಂಹಾವಲೋಕನ ಮಾಡಿ ನೋಡಿದರೆ ನಾವು ಆಸೆ ಮಾಡಿ ಪಡೆದದ್ದು ದುರಾಸೆ ಮಾಡಿ ಕಳೆದುಕೊಂಡಿದ್ದು ಎಲ್ಲವನ್ನೂ ಪಟ್ಟಿ ಮಾಡಬಹುದು. ದುರಾಸೆಯಿಂದ ನಾವು ಪಡೆದುದಕ್ಕಿಂತಲೂ ಕಳೆದುಕೊಂಡಿದ್ದೇ ಜಾಸ್ತಿ ಎಂಬುವುದು ನಮ್ಮ ಅರಿವಿಗೆ ಬಾರದಿರದು. ಆಸೆಯನ್ನು ನಿಯಂತ್ರಿಸದೇ ಹೋದರೆ ಇದುವರೆಗೆ ಆಸೆ ಮಾಡಿ ಏನನ್ನೂ ಪಡೆದಿದ್ದೆವೆಯೋ ಅಥವಾ ಉಳಿಸಿಟ್ಟಿದ್ದೇವೆಯೇ ಅವುಗಳನ್ನೆಲ್ಲ ಕಳೆದುಕೊಳ್ಳಬೇಕಾಗ ಬಹುದೆಂಬುದನ್ನು ತಳ್ಳಿಹಾಕುವಂತಿಲ್ಲ.
ಆಸೆಯನ್ನು ವರ್ಜಿಸದೆ ಹೊರತು ನಮ್ಮ ಬದುಕಿನಲ್ಲಿ ಸುಖ, ನೆಮ್ಮದಿ ಕಾಣಲಾಗದು. ಲೌಕಿಕ ಸುಖದ ಬಗೆಗಿನ ನಮ್ಮ ಆಸೆ ಕ್ರಮೇಣ ದುರಾಸೆಯಾಗಿ ಚಿಂತೆ, ನೋವು, ದುಃಖ, ಕಷ್ಟಗಳ ಗೂಡಾಗಿ ಒಂದು ಸುಂದರ ಬದುಕನ್ನು ನಾವೇ ಕೈಯ್ಯಾರ ಹಾಳುಗೆಡವಿಕೊಳ್ಳುತ್ತೇವೆ ಎಂಬುವುದನ್ನು ಮರೆಯಬಾರದು. ನಮ್ಮ ಆಸೆಯನ್ನು ಆಧ್ಯಾತ್ಮದೆಡೆಗೆ ವಾಲಿಸಿ ಜ್ಞಾನದ, ಯೋಗದ, ಇತರೆ ದೈವ ಕಾರ್ಯದ ಬಗೆಗೆ, ದೈವತ್ವದೊಂದಿಗೆ ಸಂಪೂರ್ಣವಾಗಿ ಐಕ್ಯವಾಗಿಸಿಕೊಳ್ಳುವ ಮೂಲಕ ಆಸೆಯನ್ನು ಈ ದೇಹದಿಂದ ಹೊಡೆದೋಡಿಸಬೇಕು. ಆಸೆಯೇ ದುಃಖಕ್ಕೆ ಮೂಲ ಎಂಬ ಬುದ್ಧನ ಯುಕ್ತಿ ಸದಾ ನಮ್ಮ ನೆನಪಿನಲ್ಲಿರಬೇಕು.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications