Chandra Grahan 2025: ರಕ್ತ ಚಂದ್ರಗ್ರಹಣದ ಪ್ರಭಾವ ಏನು? ಯಾರ ಮೇಲೆ ಗ್ರಹಣದ ಎಫೆಕ್ಟ್? ಗ್ರಹಣದ ಟೈಂನಲ್ಲಿ ಹೇಗಿರಬೇಕು?
ಭಾರತೀಯ ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹಣಗಳನ್ನು ಮಹತ್ತರವಾದ ದೈವಿಕ ಘಟನೆಗಳೆಂದು ಪರಿಗಣಿಸಲಾಗಿದೆ. ಚಂದ್ರಗ್ರಹಣದ ವೇಳೆ ಚಂದ್ರನ ಮೇಲೆ ರಾಹು-ಕೇತುಗಳ ದೋಷಕರ ಛಾಯೆ ಬೀಳುತ್ತದೆ. ಇದನ್ನು ರಾಹುಗ್ರಸ್ತ ಗ್ರಹಣ ವೆಂದು ಶ್ಲೋಕಗಳಲ್ಲಿ ಉಲ್ಲೇಖಿಸಲಾಗಿದೆ. ಚಂದ್ರನೇ ಕರ್ಕಾಟಕದ ಅಧಿಪತಿ.
ಗ್ರಹಣ ಬಂತು ಅಂದ್ರೆ ಕೆಲವರಿಗೆ ಭಯ, ಇನ್ನು ಕೆಲವರಿಗೆ ಕುತೂಹಲ. ಕೆಲವರು ಶಾಸ್ತ್ರದಲ್ಲಿ ಹೇಳಿದ್ದ ಸಂಪ್ರದಾಯ ಪಾಲನೆ ಮಾಡಿದ್ರೆ, ಇನ್ನು ಕೆಲವರು ಅದೆಲ್ಲ ಮೂಢನಂಬಿಕೆ ಅಂತ ಲೆಕ್ಕಿಸುವುದಿಲ್ಲ. ಸೆಪ್ಟೆಂಬರ್ 7 ರಂದು ಭಾರತದಲ್ಲಿ ಕಾಣಿಸಿಕೊಳ್ಳಲಿರೋ ರಕ್ತ ಚಂದ್ರಗ್ರಹಣ. ಅಂದು ರಕ್ತಸಿಕ್ತವಾಗಿ ಕಾಣಿಸಿಕೊಳ್ಳುವ ಚಂದ್ರ ಕೇಡು ಮಾಡ್ತಾನಾ? ಅದಕ್ಕೆ ಪರಿಹಾರ ಏನು? ಅದೆಲ್ಲದ್ದಕ್ಕೂ ಖ್ಯಾತ ಜೋತಿಷ್ಯಿಗಳು ಭಾರತೀಯ ಸಂಪ್ರಾದಾಯ ಟ್ರಸ್ಟ್ ನ ಅಧ್ಯಕ್ಷರು ಡಾ. ಮಹರ್ಷಿ ಗುರೂಜಿ ಅವರು ಉತ್ತರ ನೀಡಿದ್ದಾರೆ.

ಸೆಪ್ಟೆಂಬರ್ 7 ಭಾನುವಾರದಂದು ಗ್ರಹಣ ಸ್ಪರ್ಶಕಾಲ ಶುರುವಾಗೋದು ನಾಸ ಕೊಟ್ಟಿರುವ ಮಾಹಿತಿ ಪ್ರಕಾರ ಸೆಪ್ಟೆಂಬರ್ 7 ರ ರಾತ್ರಿ 8.58 ರಿಂದ 2.25 ನಿಮಿಷದ 3 ಗಂಟೆ 22 ನಿಮಿಷ ಇರುತ್ತದೆ. ಕರ್ನಾಟಕದಲ್ಲಿ ಚಂದ್ರ ಗ್ರಹಣ ಕಾಣುವ ಸಮಯ 8.58 ರಿಂದ 12.22 ನಿಮಿಷದವರೆಗೂ ಇರುತ್ತದೆ. ಈ ಮಧ್ಯ ಭಾಗದಲ್ಲಿ ಗ್ರಹಣವನ್ನ ಆಚರಣ ಮಾಡಬೇಕು ಎಂದು ಹೇಳಿದ್ದಾರೆ. ಗ್ರಹಣದ ಸಂದರ್ಭದಲ್ಲಿ ಹೋಮ ಹವನ ಹಾಗೂ ಜಪವನ್ನ ಮಾಡುತ್ತಾರೆ.
ಗ್ರಹಣದ ಸಂದರ್ಭದಲ್ಲಿ ಊಟ ಮಾಡಬಾರದು. ಆದರೂ ಕೆಲವರು ಗ್ರಹಣವನ್ನ ಲೆಕ್ಕಿಸದೇ ಊಟವನ್ನು ಮಾಡುತ್ತಾರೆ. ಆ ಸಂದರ್ಭದಲ್ಲಿ ಊಟ ಮಾಡಿದರೆ ಸರಿಯಾಗಿ ಜೀರ್ಣ ಆಗುವುದಿಲ್ಲ. ಇನ್ನೂ ಗರ್ಭಿಣಿಯರು ಗ್ರಹಣದ ಸಂದರ್ಭದಲ್ಲಿ ಆಚೆ ಓಡಾಡಬಾರದು. ಅದು ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಮಗುವಿನ ಬೆಳವಣಿಗೆಯ ಮೇಲೆಯೂ ಪರಿಣಾಯ ಬೀರುತ್ತದೆ. ಕನಿಷ್ಠಪಕ್ಷ ಒಂದು ಗಂಟೆ ಮುಂಚೆ ಊಟ ಮಾಡಬೇಕು ಎಂದು ಖ್ಯಾತ ಜೋತಿಷ್ಯಿಗಳು ಭಾರತೀಯ ಸಂಪ್ರಾದಾಯ ಟ್ರಸ್ಟ್ ನ ಅಧ್ಯಕ್ಷರು ಡಾ. ಮಹರ್ಷಿ ಗುರೂಜಿ ಅವರು ಹೇಳಿದ್ದಾರೆ.
ಇನ್ನು ಸೆಪ್ಟೆಂಬರ್ 7 ರಂದು ಖಗ್ರಾಸ ಚಂದ್ರ ಗ್ರಹಣ ಭಾರತದಲ್ಲಿ ಕಾಣಿಸ್ಕೊಳ್ಳುತ್ತೆ. ಇದು ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣವಾಗಿದೆ ನಮ್ಮ ದೇಶದಲ್ಲಿ ಕಾಣಿಸ್ಕೊಳ್ಳುವ ಗ್ರಹಣಗಳನ್ನ ಮಾತ್ರ ನಾವು ಆಚರಣೆ ಮಾಡುತ್ತೇವೆ. ಕೆಲವು ಧಾರ್ಮಿಕ ನಿಯಮಗಳನ್ನ ಪಾಲನೆ ಮಾಡುತ್ತೇವೆ. ರಕ್ತ ಚಂದ್ರಗ್ರಹಣ ಭಾರತ, ಚೀನಾ, ಮಂಗೋಲಿಯಾ, ರಷ್ಯಾದ ಕೆಲವು ಭಾಗ, ಮಲೇಷ್ಯಾ, ಸಿಂಗಾಪುರ, ಇಂಡೋನೇಷ್ಯಾ, ಶ್ರೀಲಂಕಾ, ಏಷ್ಯಾಖಂಡದ ವಿವಿಧ ರಾಷ್ಟ್ರಗಳು, ಆಫ್ರಿಕಾ ಖಂಡದ ಪೂರ್ವ ಭಾಗ, ಗಲ್ಫ್ ದೇಶಗಳು, ಆಸ್ಟ್ರೇಲಿಯಾದಲ್ಲೂ ಕಾಣಿಸಿಕೊಳ್ಳುತ್ತಾ ಇದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications