ಬಿರು ಬೇಸಿಗೆಯಲ್ಲಿ ಈ ಆಹಾರಗಳನ್ನು ಒಂದೇ ಸಮನೆ ತಿನ್ನಬೇಡಿ... ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ...!
ದೇಶದಾದ್ಯಂತ ಇತಿಹಾಸದಲ್ಲಿ ಹಿಂದೆಂದಿಗಿಂತಲೂ ಈಗ ಶಾಖದ ಅಲೆ ಕೆಟ್ಟದಾಗಿದೆ. ತಾಪಮಾನ ಹೆಚ್ಚಾದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅತಿಯಾದ ಬಿಸಿಲು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಬಿಸಿ ವಾತಾವರಣದಲ್ಲಿ ನಾವು ಏನು ತಿನ್ನುತ್ತೇವೆ ಎಂಬುದರ ಬಗ್ಗೆ ಗಮನ ಹರಿಸುವುದು ಮುಖ್ಯವಾಗಿದೆ.
ಈ ಋತುವಿನಲ್ಲಿ ಕೆಲ ಆಹಾರ ಸಂಯೋಜನೆಗಳು ಹಾಗೂ ಬಿಡುವಿಲ್ಲದೆ ತಿನ್ನುವುದು ನಮ್ಮ ಜೀರ್ಣಾಂಗ ವ್ಯವಸ್ಥೆಗೆ ತೊಂದರೆಯನ್ನುಂಟು ಮಾಡಬಹುದು. ಇದು ಆಲಸ್ಯ ಮತ್ತು ಅನಾನುಕೂಲತೆಯನ್ನು ಹೆಚ್ಚಿಸಬಹುದು. ಈ ಆಹಾರ ಪದ್ಧತಿ ಹೊಟ್ಟೆ ಉಬ್ಬುವುದು ಮತ್ತು ಇತರ ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತರಬಹುದು. ಹಾಗಾದರೆ ಸರಿಯಾದ ಜೀರ್ಣಕ್ರಿಯೆ ಮತ್ತು ಉತ್ತಮ ಆರೋಗ್ಯ ಯೋಗಕ್ಷೇಮಕ್ಕಾಗಿ ಬೇಸಿಗೆಯ ತಿಂಗಳುಗಳಲ್ಲಿ ಯಾವ ಆಹಾರ ಸಂಯೋಜನೆಗಳನ್ನು ಪದೇ ಪದೇ ತಿನ್ನುವುದನ್ನು ತಪ್ಪಿಸಬೇಕು ಎಂಬುದನ್ನು ತಿಳಿಯೋಣ.

ಪೌಷ್ಠಿಕ ಅಪೌಷ್ಠಿಕ ಆಹಾರ
ಹೆಚ್ಚಿನ ಪ್ರೋಟೀನ್ ಹಣ್ಣುಗಳನ್ನು ಸೇವಿಸುವುದು ಬೇಸಿಗೆಯಲ್ಲಿ ಆರೋಗ್ಯಕರ ಆಯ್ಕೆಯಾಗಿದೆ. ಆದರೆ ಹಣ್ಣುಗಳನ್ನು ಅಪೌಷ್ಠಿಕ ಆಹಾರ ಅಂದರೆ ಜಂಕ್ ಫುಡ್ ನೊಂದಿಗೆ ಸಂಯೋಜಿಸಿ ಸೇವಿಸುವುದು ಉತ್ತಮ ಆಯ್ಕೆ ಅಲ್ಲ. ಇದು ಜೀರ್ಣಕ್ರಿಯೆಗೆ ಒತ್ತಡವನ್ನು ನೀಡಬಹುದು. ಹಣ್ಣುಗಳು ತ್ವರಿತವಾಗಿ ಜೀರ್ಣವಾಗುವ ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತವೆ.
ಆದರೆ ಚೀಸ್ ಹಾಗೂ ಜಂಕ್ ಫುಡ್ಗಳು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ. ಈ ಎರಡನ್ನು ಒಟ್ಟಿಗೆ ಸೇವಿಸಿದಾಗ ಅವು ಹೊಟ್ಟೆ ಊತ ಮತ್ತು ಅಸ್ವಸ್ಥತೆಯನ್ನು ಉಂಟುಮಾಡಬಹುದು. ಹೀಗಾಗಿ ಆರೋಗ್ಯಕರ ಹಣ್ಣುಗಳನ್ನು ತಿಂದು ಜಂಕ್ ಫುಡ್ ತಿಂದರೆ ಸಮತೋಲವಾಗುತ್ತದೆ ಎಂದು ಭಾವಿಸುವುದು ತಪ್ಪು.

ಹಣ್ಣು ಮತ್ತು ಪ್ಯಾಕ್ ಮಾಡಿದ ಜ್ಯೂಸ್
ಹಣ್ಣು ಅಥವಾ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಆದರೆ ಈ ರಸಕ್ಕೆ ಪರಿಮಳವನ್ನು ಸೇರಿಸಿದರೆ ಅಥವಾ ಪ್ಯಾಕ್ ಮಾಡಿದ ಜ್ಯೂಸ್ ಸೇವಿಸುವುದು ಬೇಸಿಗೆಯಲ್ಲಿ ಜೀರ್ಣಕ್ರಿಯೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೇಲಿಂದ ಮೇಲೆ ಯಾವುದೇ ಆಹಾರ ತಿನ್ನುವುದು ಅದರೊಂದಿಗೆ ಪ್ಯಾಕ್ ಮಾಡಿದ ಜ್ಯೂಸ್ ಕುಡಿಯುವುದನ್ನು ತಪ್ಪಿಸಿ.
ಕಲ್ಲಂಗಡಿ ಮತ್ತು ಹಾಲು
ಕಲ್ಲಂಗಡಿ ಬೇಸಿಗೆಯಲ್ಲಿ ತಿನ್ನಲೇಬೇಕಾದ ಹಣ್ಣುಗಳಲ್ಲಿ ಒಂದಾಗಿದೆ. ಆದರೆ ಡೈರಿ ಉತ್ಪನ್ನಗಳೊಂದಿಗೆ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ಅಸಮಾಧಾನಗೊಳಿಸುತ್ತದೆ. ಇದು ಗ್ಯಾಸ್ ಮತ್ತು ಉಬ್ಬುವಿಕೆಯನ್ನು ಉಂಟುಮಾಡುತ್ತದೆ.
ಆಹಾರ ಮತ್ತು ತಂಪು ಪಾನೀಯಗಳು
ಬೇಸಿಗೆಯಲ್ಲಿ ತಂಪಾಗಿರಲು ತಂಪು ಪಾನೀಯ ಸುಲಭವಾದ ಮಾರ್ಗವಾಗಿದೆ. ಆದರೆ ಆಹಾರದೊಂದಿಗೆ ತಂಪು ಪಾನೀಯಗಳನ್ನು ಕುಡಿಯುವುದು ಜೀರ್ಣಕ್ರಿಯೆಗೆ ಅಡ್ಡಿಯಾಗುತ್ತದೆ. ಜೀರ್ಣಕ್ರಿಯೆಯನ್ನು ಬೆಂಬಲಿಸಲು, ಊಟದ ನಂತರ ಕೊಂಚ ಬೆಚ್ಚಗಿನ ಪಾನೀಯಗಳನ್ನು ಆಯ್ಕೆಮಾಡುವುದು ಉತ್ತಮ. ಜೊತೆಗೆ ಊಟದ ನಡುವೆ ತಂಪು ಪಾನೀಯಗಳನ್ನು ತಪ್ಪಿಸುವುದು ಪ್ರಯೋಜನಕಾರಿಯಾಗಿದೆ.
ಆಮ್ಲೀಯ ಹಣ್ಣುಗಳು ಮತ್ತು ಸಿಹಿ ಹಣ್ಣುಗಳು
ಬಾಳೆಹಣ್ಣಿನಂತಹ ಸಿಹಿ ಹಣ್ಣುಗಳೊಂದಿಗೆ ಕಿತ್ತಳೆ ಅಥವಾ ಅನಾನಸ್ನಂತಹ ಆಮ್ಲೀಯ ಹಣ್ಣುಗಳನ್ನು ತಿನ್ನುವುದು ಜೀರ್ಣಕಾರಿ ಅಸ್ವಸ್ಥತೆಗಳಿಗೆ ಕಾರಣವಾಗಬಹುದು. ಬೇಸಿಗೆಯಲ್ಲಿ ಹಣ್ಣುಗಳ ಪ್ರಯೋಜನಗಳನ್ನು ಪಡೆಯಲು ಆಮ್ಲೀಯತೆ ಹೊಂದಿರುವ ಹಣ್ಣುಗಳನ್ನು ಹೆಚ್ಚಾಗಿ ತಿನ್ನಿರಿ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications