Cancer:ಗರ್ಭಕಂಠ ಕ್ಯಾನ್ಸರ್ನ ಲಕ್ಷಣಗಳೇನು? ಮುಟ್ಟಿನ ಸಮಯದಲ್ಲಿ ಮಹಿಳೆಯರು ಗಮನಿಸಬೇಕಾಗಿದ್ದೇನು?
ಇತ್ತೀಚೆಗೆ ನಟಿ, ಮಾಡೆಲ್ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಹೋಗಿ ತಮ್ಮ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದು ಹಲವರ ಕೋಪಕ್ಕೆ ಕಾರಣವಾದರೂ, ಈ ಘಟನೆ ಬಳಿಕ ಗರ್ಭಕಂಠದ ಕ್ಯಾನ್ಸರ್ ಮುನ್ನೆಲೆಗೆ ಬಂದಿದೆ. ಈ ಕಾಯಿಲೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಜೋರಾಗಿದೆ.
ಈ ವರ್ಷದ ಮಧ್ಯಂತರ ಬಜೆಟ್ನಲ್ಲಿ 9 ರಿಂದ 14 ವರ್ಷ ವಯಸ್ಸಿನ ಹುಡುಗಿಯರಿಗೆ ಗರ್ಭಕಂಠದ ಕ್ಯಾನ್ಸರ್ ವಿರುದ್ಧ ವ್ಯಾಕ್ಸಿನೇಷನ್ ಬಗ್ಗೆ ಉಲ್ಲೇಖಿಸಿರುವುದು ಗಮನಾರ್ಹವಾಗಿತ್ತು. ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರನ್ನು ಬಾಧಿಸುವ ಎರಡನೇ ಸಾಮಾನ್ಯ ಕ್ಯಾನ್ಸರ್ ಆಗಿದ್ದು, ಪ್ರಪಂಚದಾದ್ಯಂತ ಇದು ನಾಲ್ಕನೇ ಸ್ಥಾನದಲ್ಲಿದೆ.

ಇತಂಹ ಮಾರಾಣಾಂತಿಕ ಕಾಯಿಲೆಗಳ ಬಗ್ಗೆ ಚರ್ಚೆ ಹೆಚ್ಚುತ್ತಿದ್ದು, ಈ ಕ್ಯಾನ್ಸರ್ ಹೇಗೆ ಬರುತ್ತದೆ, ಇದರ ಲಕ್ಷಣಗಳೇನು..? ಗರ್ಭಕಂಠದ ಕ್ಯಾನ್ಸರ್ ಬಂದ ಬಳಿಕ ಚಿಕಿತ್ಸೆ ಏನು..? ಹೀಗೆ ಹಲವು ಪ್ರಶ್ನೆಗಳು ಮಹಿಳೆಯರನ್ನು ಕಾಡುತ್ತಿದ್ದು, ಬೆಂಗಳೂರಿನ ವೈದ್ಯರ ಸಲಹೆಗಾರರಾದ ಡಾ. ರಾಜೀವ್ ವಿಜಯಕುಮಾರ್ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ವಿವರಿಸಿದ್ದಾರೆ.
'ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ' ಎಂಬ ಹಳೆಯ ಗಾದೆಯು ಇದೆ. ಅದೇ ರೀತಿ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ತಕ್ಷಣ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು. ಈ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲಾಗುತ್ತಿದೆ. ದೇಶದಾದ್ಯಂತ ಅನೇಕ ಭಾಗಗಳಲ್ಲಿ ಸ್ಕ್ರೀನಿಂಗ್ ಕಾರ್ಯಕ್ರಮಗಳು ಅನೇಕ ಮಹಿಳೆಯರಿಗೆ ಇದು ವರದಾನವಾಗಿದೆ.

ಗರ್ಭಕಂಠದ ಕ್ಯಾನ್ಸರ್ ಮತ್ತು ಇತರ HPV-ಸಂಬಂಧಿತ ಕ್ಯಾನ್ಸರ್ಗಳನ್ನು ತಡೆಗಟ್ಟಲು 9-14 ವರ್ಷಗಳ ವಯಸ್ಸಿನಲ್ಲಿ ಲಸಿಕೆಯನ್ನು ನೀಡುವುದು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯಾವುದೇ ವಯಸ್ಸಿನಲ್ಲಿ, ಆರಂಭಿಕ ಪತ್ತೆ ಮತ್ತು ತ್ವರಿತ ಚಿಕಿತ್ಸೆಯು ಗರ್ಭಕಂಠದ ಕ್ಯಾನ್ಸರ್ ಅನ್ನು ಗುಣಪಡಿಸಬಹುದು.
ಲಭ್ಯವಿರುವ ಚಿಕಿತ್ಸಾ ಆಯ್ಕೆಗಳು ಯಾವುವು?
ಗರ್ಭಕಂಠದ ಕ್ಯಾನ್ಸರ್ ಚಿಕಿತ್ಸೆಯು ಕ್ಯಾನ್ಸರ್ನ ಹಂತವನ್ನು ಅವಲಂಬಿಸಿರುತ್ತದೆ. ಗರ್ಭಕಂಠದ ಕ್ಯಾನ್ಸರ್ ಹೊಂದಿರುವ ರೋಗಿಗಳಿಗೆ (ಹಂತ IIb-IVa), ಏಕಕಾಲೀನ ಕಿಮೊರಾಡಿಯೊಥೆರಪಿಯು ಆರೈಕೆಯ ಗುಣಮಟ್ಟವಾಗಿದೆ. ಪದೇ ಪದೇ ಬರುವ ಮೆಟಾಸ್ಟ್ಯಾಟಿಕ್ ಗರ್ಭಕಂಠದ ಕ್ಯಾನ್ಸರ್ಗೆ, 17 ತಿಂಗಳ ಕೀಮೋಥೆರಪಿ + ಬೆವಾಸಿಝುಮಾಬ್ (ಉದ್ದೇಶಿತ ಕ್ಯಾನ್ಸರ್ ಔಷಧ) ಆರೈಕೆಯು ಮುಖ್ಯವಾಗಿರುತ್ತದೆ.
ಮಹಿಳೆಯರು ಯಾವ ಲಕ್ಷಣಗಳನ್ನು ಗಮನಿಸಬೇಕು?
ಮಹಿಳೆಯರು ಮುಟ್ಟಿನ ಅವಧಿಯಲ್ಲಿ ರಕ್ತಸ್ರಾವ, ಲೈಂಗಿಕ ಸಂಭೋಗದ ನಂತರ ರಕ್ತಸ್ರಾವದ ಬಗ್ಗೆ ಗಮನ ಹರಿಸಬೇಕು. ದುರ್ವಾಸನೆಯಿಂದ ಕೂಡಿದ ಬಿಳಿ ಡಿಸ್ಚಾರ್ಜ್ ಅಥವಾ ನಿರಂತರ ಬೆನ್ನು ನೋವು ಇದ್ದಲ್ಲಿ ಕೂಡಲೇ ವೈದ್ಯರ ಸಹಾಯ ಪಡೆಯಬೇಕು. ಗರ್ಭಕಂಠದ ಕ್ಯಾನ್ಸರ್ ಚಿಕಿತ್ಸೆಗಳು ಕಳೆದ ದಶಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸಿದೆ. ಇದಕ್ಕೆ ಆರಂಭಿಕ ಪತ್ತೆ ಪ್ರಮುಖವಾಗಿದೆ.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral









Click it and Unblock the Notifications