Cancer:ಗರ್ಭಕಂಠ ಕ್ಯಾನ್ಸರ್ನ ಲಕ್ಷಣಗಳೇನು? ಮುಟ್ಟಿನ ಸಮಯದಲ್ಲಿ ಮಹಿಳೆಯರು ಗಮನಿಸಬೇಕಾಗಿದ್ದೇನು?
ಇತ್ತೀಚೆಗೆ ನಟಿ, ಮಾಡೆಲ್ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಹೋಗಿ ತಮ್ಮ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದು ಹಲವರ ಕೋಪಕ್ಕೆ ಕಾರಣವಾದರೂ, ಈ ಘಟನೆ ಬಳಿಕ ಗರ್ಭಕಂಠದ ಕ್ಯಾನ್ಸರ್ ಮುನ್ನೆಲೆಗೆ ಬಂದಿದೆ. ಈ ಕಾಯಿಲೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಜೋರಾಗಿದೆ.
ಈ ವರ್ಷದ ಮಧ್ಯಂತರ ಬಜೆಟ್ನಲ್ಲಿ 9 ರಿಂದ 14 ವರ್ಷ ವಯಸ್ಸಿನ ಹುಡುಗಿಯರಿಗೆ ಗರ್ಭಕಂಠದ ಕ್ಯಾನ್ಸರ್ ವಿರುದ್ಧ ವ್ಯಾಕ್ಸಿನೇಷನ್ ಬಗ್ಗೆ ಉಲ್ಲೇಖಿಸಿರುವುದು ಗಮನಾರ್ಹವಾಗಿತ್ತು. ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರನ್ನು ಬಾಧಿಸುವ ಎರಡನೇ ಸಾಮಾನ್ಯ ಕ್ಯಾನ್ಸರ್ ಆಗಿದ್ದು, ಪ್ರಪಂಚದಾದ್ಯಂತ ಇದು ನಾಲ್ಕನೇ ಸ್ಥಾನದಲ್ಲಿದೆ.

ಇತಂಹ ಮಾರಾಣಾಂತಿಕ ಕಾಯಿಲೆಗಳ ಬಗ್ಗೆ ಚರ್ಚೆ ಹೆಚ್ಚುತ್ತಿದ್ದು, ಈ ಕ್ಯಾನ್ಸರ್ ಹೇಗೆ ಬರುತ್ತದೆ, ಇದರ ಲಕ್ಷಣಗಳೇನು..? ಗರ್ಭಕಂಠದ ಕ್ಯಾನ್ಸರ್ ಬಂದ ಬಳಿಕ ಚಿಕಿತ್ಸೆ ಏನು..? ಹೀಗೆ ಹಲವು ಪ್ರಶ್ನೆಗಳು ಮಹಿಳೆಯರನ್ನು ಕಾಡುತ್ತಿದ್ದು, ಬೆಂಗಳೂರಿನ ವೈದ್ಯರ ಸಲಹೆಗಾರರಾದ ಡಾ. ರಾಜೀವ್ ವಿಜಯಕುಮಾರ್ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ವಿವರಿಸಿದ್ದಾರೆ.
'ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ' ಎಂಬ ಹಳೆಯ ಗಾದೆಯು ಇದೆ. ಅದೇ ರೀತಿ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ತಕ್ಷಣ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು. ಈ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲಾಗುತ್ತಿದೆ. ದೇಶದಾದ್ಯಂತ ಅನೇಕ ಭಾಗಗಳಲ್ಲಿ ಸ್ಕ್ರೀನಿಂಗ್ ಕಾರ್ಯಕ್ರಮಗಳು ಅನೇಕ ಮಹಿಳೆಯರಿಗೆ ಇದು ವರದಾನವಾಗಿದೆ.

ಗರ್ಭಕಂಠದ ಕ್ಯಾನ್ಸರ್ ಮತ್ತು ಇತರ HPV-ಸಂಬಂಧಿತ ಕ್ಯಾನ್ಸರ್ಗಳನ್ನು ತಡೆಗಟ್ಟಲು 9-14 ವರ್ಷಗಳ ವಯಸ್ಸಿನಲ್ಲಿ ಲಸಿಕೆಯನ್ನು ನೀಡುವುದು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯಾವುದೇ ವಯಸ್ಸಿನಲ್ಲಿ, ಆರಂಭಿಕ ಪತ್ತೆ ಮತ್ತು ತ್ವರಿತ ಚಿಕಿತ್ಸೆಯು ಗರ್ಭಕಂಠದ ಕ್ಯಾನ್ಸರ್ ಅನ್ನು ಗುಣಪಡಿಸಬಹುದು.
ಲಭ್ಯವಿರುವ ಚಿಕಿತ್ಸಾ ಆಯ್ಕೆಗಳು ಯಾವುವು?
ಗರ್ಭಕಂಠದ ಕ್ಯಾನ್ಸರ್ ಚಿಕಿತ್ಸೆಯು ಕ್ಯಾನ್ಸರ್ನ ಹಂತವನ್ನು ಅವಲಂಬಿಸಿರುತ್ತದೆ. ಗರ್ಭಕಂಠದ ಕ್ಯಾನ್ಸರ್ ಹೊಂದಿರುವ ರೋಗಿಗಳಿಗೆ (ಹಂತ IIb-IVa), ಏಕಕಾಲೀನ ಕಿಮೊರಾಡಿಯೊಥೆರಪಿಯು ಆರೈಕೆಯ ಗುಣಮಟ್ಟವಾಗಿದೆ. ಪದೇ ಪದೇ ಬರುವ ಮೆಟಾಸ್ಟ್ಯಾಟಿಕ್ ಗರ್ಭಕಂಠದ ಕ್ಯಾನ್ಸರ್ಗೆ, 17 ತಿಂಗಳ ಕೀಮೋಥೆರಪಿ + ಬೆವಾಸಿಝುಮಾಬ್ (ಉದ್ದೇಶಿತ ಕ್ಯಾನ್ಸರ್ ಔಷಧ) ಆರೈಕೆಯು ಮುಖ್ಯವಾಗಿರುತ್ತದೆ.
ಮಹಿಳೆಯರು ಯಾವ ಲಕ್ಷಣಗಳನ್ನು ಗಮನಿಸಬೇಕು?
ಮಹಿಳೆಯರು ಮುಟ್ಟಿನ ಅವಧಿಯಲ್ಲಿ ರಕ್ತಸ್ರಾವ, ಲೈಂಗಿಕ ಸಂಭೋಗದ ನಂತರ ರಕ್ತಸ್ರಾವದ ಬಗ್ಗೆ ಗಮನ ಹರಿಸಬೇಕು. ದುರ್ವಾಸನೆಯಿಂದ ಕೂಡಿದ ಬಿಳಿ ಡಿಸ್ಚಾರ್ಜ್ ಅಥವಾ ನಿರಂತರ ಬೆನ್ನು ನೋವು ಇದ್ದಲ್ಲಿ ಕೂಡಲೇ ವೈದ್ಯರ ಸಹಾಯ ಪಡೆಯಬೇಕು. ಗರ್ಭಕಂಠದ ಕ್ಯಾನ್ಸರ್ ಚಿಕಿತ್ಸೆಗಳು ಕಳೆದ ದಶಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸಿದೆ. ಇದಕ್ಕೆ ಆರಂಭಿಕ ಪತ್ತೆ ಪ್ರಮುಖವಾಗಿದೆ.
-
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications