Coconut Chutney Recipe: ಇಡ್ಲಿಗೆ ತೆಂಗಿನಕಾಯಿ ಚಟ್ನಿ ಒಮ್ಮೆ ಹೀಗೆ ಮಾಡಿ.. ಆಗಾಗ ಈ ರೀತಿ ಮಾಡ್ತೀರಾ...
ಮನೆಯಲ್ಲಿ ನಿತ್ಯ ಬೆಳಗಿನ ಉಪಾಹಾರಕ್ಕಾಗಿ ಇಡ್ಲಿ ಅಥವಾ ದೋಸೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ನಿತ್ಯ ಒಂದೇ ಬಗೆಯ ಚಟ್ನಿ ತಿನ್ನಲು ಮನಸ್ಸಾಗದೇ ಇರಬಹುದು. ಹೀಗಾಗಿ ನೀವೇನಾದರೂ ಇದರೊಂದಿಗೆ ಯಾವ ಸೈಡ್ ಡಿಶ್ ಮಾಡಬೇಕೆಂದು ಯೋಚಿಸುತ್ತಿದ್ದರೆ. ಇಲ್ಲಿದೆ ಸಲಹೆ. ನಿಮ್ಮ ಮನೆಯಲ್ಲಿರುವವರಿಗೆ ಚಟ್ನಿ ಇಷ್ಟವಾಗಿದ್ದರೆ ಇದನ್ನು ಒಮ್ಮೆ ಟ್ರೈ ಮಾಡಿ.
ನೀವು ಆಗಾಗ್ಗೆ ಮನೆಯಲ್ಲಿ ತೆಂಗಿನಕಾಯಿ ಚಟ್ನಿ ಮಾಡಿರುತ್ತೀರಿ. ಹಾಗಾದರೆ ಒಮ್ಮೆ ಈ ಶೈಲಿಯಲ್ಲಿ ತೆಂಗಿನಕಾಯಿ ಚಟ್ನಿ ಮಾಡಿ. ಇದು ರುಚಿಯನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ. ಹಾಗೆನೇ ಮನೆಯಲ್ಲಿದ್ದ ಎಲ್ಲರೂ ಕೂಡ ಇದನ್ನು ತಿನ್ನಲು ಇಷ್ಟಪಡುತ್ತಾರೆ.

ಹಾಗಾದರೆ ತಡ ಮಾಡುವುದು ಬೇಡ ತೆಂಗಿನ ಚಟ್ನಿ ಮಾಡುವುದು ಹೇಗೆಂದು ತಿಳಿಯೋಣ. ನೀವು ಕೂಡ ಮನೆಯಲ್ಲಿ ಒಂದು ಬಾರಿ ಇದನ್ನು ಟ್ರೈ ಮಾಡಿ. ನಿಮ್ಮ ಅನುಭವವನ್ನು ಕಾಮೆಮಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ. ತೆಂಗಿನ ಕಾಯಿ ಚಟ್ನಿ ಮಾಡುವ ವಿಧಾನ ತಿಳಿಯೋಣ.
ಅಗತ್ಯವಿರುವ ವಸ್ತುಗಳು:
* ಎಣ್ಣೆ - 1/2 ಟೀಸ್ಪೂನ್
* ಬೆಳ್ಳುಳ್ಳಿ - 7
* ಶುಂಠಿ ಸ್ವಲ್ಪ
* ಹಸಿ ಮೆಣಸಿನಕಾಯಿ -10
* ತೆಂಗಿನಕಾಯಿ - 1/4 ಕಪ್ (ತುರಿದ)
* ಶೆಂಗಾ - 1/4 ಕಪ್
* ಉಪ್ಪು - ರುಚಿಗೆ ತಕ್ಕಂತೆ
ಒಗ್ಗರಣೆಗಾಗಿ...
* ಎಣ್ಣೆ - 1 tbsp
* ಸಾಸಿವೆ - 1 tbsp
* ಉದ್ದಿನ ಬೇಳೆ - 1 tbsp
* ಇಂಗು ಪುಡಿ - ಸ್ವಲ್ಪ
* ಕರಿಬೇವಿನ ಎಲೆಗಳು - 1 ಕಟ್ಟು
* ಕೊತ್ತಂಬರಿ - ಸ್ವಲ್ಲಪ
* ಈರುಳ್ಳಿ - 1 (ಸಣ್ಣದಾಗಿ ಹೆಚ್ಚಿದ)
* ಉಪ್ಪು - ಸ್ವಲ್ಪ
ಪಾಕವಿಧಾನ:
* ಮೊದಲು ಬಾಣಲೆಯನ್ನು ಒಲೆಯಲ್ಲಿ ಇಟ್ಟು ಅದಕ್ಕೆ 1 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಬೆಳ್ಳುಳ್ಳಿ ಮತ್ತು ಹಸಿಮೆಣಸಿನಕಾಯಿ ಹಾಕಿ ಸ್ವಲ್ಪ ಹುರಿಯಿರಿ.

* ನಂತರ ಮಿಕ್ಸರ್ ಜಾರ್ ನಲ್ಲಿ ಹುರಿದ ಬೆಳ್ಳುಳ್ಳಿ ಹಸಿಮೆಣಸಿನಕಾಯಿ, ಶುಂಠಿ, ತೆಂಗಿನ ತುರಿ, ಹುರಿದ ಶೇಂಗಾ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಸ್ವಲ್ಪ ನೀರು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ.
* ನಂತರ ರುಬ್ಬಿದ ಚಟ್ನಿಯನ್ನು ಒಂದು ಪಾತ್ರೆಗೆ ತೆಗೆದುಕೊಳ್ಳಿ. ಇದು ಹೆಚ್ಚು ನೀರಿನಂಶವಿರುವ ಚಟ್ನಿಯಾಗಿರುವುದರಿಂದ ಅದರಲ್ಲಿ ಸ್ವಲ್ಪ ಹೆಚ್ಚು ನೀರು ಹಾಕಿ ಕಲಸಬೇಕು.
* ನಂತರ ಒಂದು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಒಗ್ಗರಣೆಗೆ ಬೇಕಾದಷ್ಟು ಎಣ್ಣೆಯನ್ನು ಹಾಕಿ ಬಿಸಿಯಾದಾಗ ಸಾಸಿವೆ ಮತ್ತು ಉದ್ದಿನಬೇಳೆಯನ್ನು ಹಾಕಿ ಒಗ್ಗರಣೆ ಮಾಡಿ.
* ನಂತರ ಅದಕ್ಕೆ ಇಂಗು ಪುಡಿ, ಕರಿಬೇವಿನ ಸೊಪ್ಪು ಮತ್ತು ಕೊತ್ತಂಬರಿ ಸೊಪ್ಪು ಹಾಕಿ ಹುರಿಯಿರಿ.
* ನಂತರ ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಸ್ವಲ್ಪ ಉಪ್ಪು ಹಾಕಿ ಹೊಂಬಣ್ಣ ಬರುವವರೆಗೆ ಹುರಿಯಿರಿ. ಇದನ್ನು ಚಟ್ನಿಯೊಂದಿಗೆ ಬೆರೆಸಿದರೆ, ರುಚಿಕರವಾದ ತೆಂಗಿನಕಾಯಿ ಚಟ್ನಿ ರೆಡಿ.
-
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications