Blood Donation: ರಕ್ತದಾನದ ಬಗೆಗಿನ ಆ ತಪ್ಪು ಕಲ್ಪನೆಗಳನ್ನು ದೂರಮಾಡಿ..!
ರಕ್ತದಾನ ಕೂಡ ನಾವು ಮಾಡುವ ಮಹಾತ್ಕಾರ್ಯಗಳಲ್ಲಿ ಒಂದಾಗಿದೆ. ಹೀಗಾಗಿ ರಕ್ತದಾನ ಕುರಿತಂತೆ ಇರುವ ಕೆಲವೊಂದು ತಪ್ಪು ಕಲ್ಪನೆಗಳನ್ನು ದೂರ ಮಾಡಿಕೊಂಡು ಅಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವದ ಉಳಿವಿಗೆ ಕಾರಣಕರ್ತರಾದ ನೆಮ್ಮದಿಯನ್ನು ಪಡೆಯಲು ಸಾಧ್ಯವಾಗಲಿದೆ.
ಹಾಗೆನೋಡಿದರೆ ಇವತ್ತಿನ ದಿನಗಳಲ್ಲಿ ಹಲವು ಅನಿವಾರ್ಯ ಸಂದರ್ಭಗಳಲ್ಲಿ ಅಗತ್ಯ ರಕ್ತದೊರೆಯದೆ ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳು ಬಹಳಷ್ಟಿವೆ. ಹೀಗಿರುವಾಗ ರಕ್ತದಾನವೇ ಮಹಾದಾನವೆಂದುಕೊಂಡರೂ ಕೆಲವೊಮ್ಮೆ ರಕ್ತ ನೀಡಬೇಕೆಂಬ ಮನಸ್ಸಿದ್ದರೂ ಕೆಲವೊಂದು ತಪ್ಪು ಕಲ್ಪನೆಗಳು ಇರುವುದರಿಂದ ರಕ್ತದಾನ ಮಾಡಲು ಹಿಂದೇಟು ಹಾಕುವವರು ಇಲ್ಲದಿಲ್ಲ.

ಕೆಲವು ತಪ್ಪು ಕಲ್ಪನೆಗಳಿಗೆ ಇತಿಶ್ರೀ ಹಾಡದ ಹೊರತು ಕೆಲವರು ರಕ್ತದಾನ ಮಾಡಬೇಕೆಂಬ ಮನಸ್ಸಿದ್ದರೂ ಭಯದಿಂದಾಗಿ ರಕ್ತದಾನ ಮಾಡಲು ಮುಂದಾಗುತ್ತಿಲ್ಲ. ರಕ್ತದಾನ ಮಾಡುವುದರ ಬಗ್ಗೆ ಮತ್ತು ರಕ್ತವನ್ನು ಪಡೆದುಕೊಳ್ಳುವುದರ ಕುರಿತಂತೆ ಹಲವು ರೀತಿಯ ಆಧಾರ ರಹಿತ ಮಾತುಗಳು ಜನವಲಯದಲ್ಲಿದೆ. ಅವು ಸಂಪೂರ್ಣ ಅಂತೆಕAತೆ ಸುದ್ದಿಗಳು. ಅವುಗಳನ್ನೇ ನಂಬುವ ಹಲವು ಜನ ರಕ್ತದಾನ ಎಂದರೆ ಭಯಪಡುತ್ತಾರೆ.
ರಕ್ತದಾನ ಮಾಡುವ ಬಗ್ಗೆ ಕೆಲವು ತಪ್ಪು ಕಲ್ಪನೆಯಿರುವುದರಿಂದ ಆ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಪಡೆದು ಮುನ್ನಡೆಯುವುದು ಒಳ್ಳೆಯದು. 18 ರಿಂದ 60 ವರ್ಷದೊಳಗಿನ 45 ಕೆ.ಜಿ.ಗಿಂತಲೂ ಹೆಚ್ಚು ತೂಕವಿರುವ, 12.5 ಗ್ರಾಂ.ಗಿAತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲ ಆರೋಗ್ಯವಂತರೂ ರಕ್ತದಾನ ಮಾಡ ಬಹುದಾಗಿದೆ. ದೇಶದಲ್ಲಿ ಪ್ರತಿ 2 ಸೆಕೆಂಡಿಗೆ ಒಬ್ಬ ರೋಗಿಗೆ ರಕ್ತದ ಅವಶ್ಯಕತೆ ಇರುವುದಾಗಿ ಸಮೀಕ್ಷೆಯೊಂದು ಹೇಳಿದೆ. ನಮ್ಮ ದೇಶದಲ್ಲಿ ರಕ್ತದ ಬೇಡಿಕೆ ಸುಮಾರು 4 ಕೋಟಿ ಯೂನಿಟ್ ಗಳಾಗಿದ್ದು, ಕೇವಲ 5 ಲಕ್ಷ ಯೂನಿಟ್ ಗಳಷ್ಟು ಮಾತ್ರ ರಕ್ತದ ಪೂರೈಕೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.
ದೇಹದಲ್ಲಿ 5.5 ರಿಂದ 6 ಲೀಟರ್ ರಕ್ತ
ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್ನಷ್ಟು ರಕ್ತ ಇರುತ್ತದೆ. ರಕ್ತ ಕೊಡುವ ವ್ಯಕ್ತಿಯಿಂದ ಕೇವಲ 350 ಮಿಲಿಯಷ್ಟೇ ರಕ್ತವನ್ನು ದಾನಿಯಿಂದ ತೆಗೆದುಕೊಳ್ಳುವುದರಿಂದ ಯಾವುದೇ ಅಪಾಯವಾಗುವುದಿಲ್ಲ. ಆದ್ದರಿಂದ ಎಲ್ಲ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರರಿಂದ ನಾಲ್ಕು ತಿಂಗಳಿಗೊಮ್ಮೆ ನಿರಾತಂಕವಾಗಿ ರಕ್ತದಾನ ಮಾಡಬಹುದು. ಸಾಮಾನ್ಯವಾಗಿ ದಾನಿಯಿಂದ ಪಡೆದ ರಕ್ತವನ್ನು 35 ದಿನಗಳವರೆಗೆ ಅದು ಯಾವುದೇ ರೀತಿಯಲ್ಲಿಯೂ ಹಾಳಾಗದಂತೆ ವಿಶೇಷ ರೆಫ್ರಿಜಿರೇಟರ್ ಗಳಲ್ಲಿ ಶೇಖರಿಸಿಟ್ಟು ಉಪಯೋಗಿಸಲಾಗುತ್ತದೆ.

18 ವರ್ಷಕ್ಕಿಂತ ಕಡಿಮೆ ಇರುವ ಲಿವರ್, ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರು, ಗರ್ಭಿಣಿಯರು, ಋತುಸ್ರಾವದಲ್ಲಿರುವ ಮಹಿಳೆಯರು, ಮಗುವಿಗೆ ಹಾಲುಣಿಸುವ ತಾಯಂದಿರು, ದೊಡ್ಡ ಪ್ರಮಾಣದ ಶಸ್ತç ಚಿಕಿತ್ಸೆಗೆ ಒಳಗಾದವರು, ಒಂದು ವರ್ಷದವರೆಗೆ ರಕ್ತ ವರ್ಗಾವಣೆ ಮಾಡಿಸಿಕೊಂಡವರು, ಆರು ತಿಂಗಳವರೆಗೆ ಯಾವುದಾದರು ಕಾಯಿಲೆಯ ವಿರುದ್ಧ ಲಸಿಕೆಗಳನ್ನು ತೆಗೆದುಕೊಂಡವರು ಮುಂದಿನ ಆರು ತಿಂಗಳವರೆಗೆ ರಕ್ತದಾನ ಮಾಡಬಾರದಾಗಿದೆ.
ರಕ್ತದಾನಿಗಳಲ್ಲಿ ಯಾವುದೇ ಆತಂಕ ಬೇಡ
ಇನ್ನು ರಕ್ತದಾನ ಮಾಡಿದ ವ್ಯಕ್ತಿಗೆ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕಾಗುತ್ತದೆ. ಜೊತೆಗೆ ಯಾವುದೇ ರೀತಿ ಔಷಧದ ಅಗತ್ಯವಿರುವುದಿಲ್ಲ, ವ್ಯಕ್ತಿಯು ರಕ್ತದಾನ ಮಾಡಿದ ಆ ದಿನ ನೀರನ್ನು ಹೆಚ್ಚಾಗಿ ಕುಡಿಯಬೇಕು. ರಕ್ತದಾನದ ಕೆಲವು ತಾಸುಗಳೊಳಗಾಗಿ ದಾನಿಯ ದೇಹದಲ್ಲಿ ಹೊಸ ರಕ್ತಕಣಗಳನ್ನು ಉತ್ವಾದಿಸಲು ಪ್ರಾರಂಭಿಸುತ್ತದೆ. ಮುಂದಿನ ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ಮರು ರಕ್ತ ತಯಾರಾಗುತ್ತದೆ.
ಇನ್ನೂ ರಕ್ತ ವರ್ಗಾವಣೆಯಿಂದ ಯಾವುದಾದರೂ ರೋಗ ಅಥವಾ ಸೋಂಕು ತಗಲುತ್ತದೆ ಎಂಬ ಭಯವೂ ಕೆಲವರಲ್ಲಿದೆ. ರಕ್ತದಾನ ಮಾಡುವ ದಾನಿಯಿಂದ ಸ್ವೀಕರಿಸಿದ ರಕ್ತವನ್ನು ರಕ್ತನಿಧಿಗಳಲ್ಲಿ ಹೆಪಟೈಟಿಸ್ ಬಿ. ಹೆಪಟೈಟಿಸ್ ಸಿ. ಎಚ್ಐವಿ, ಮಲೇರಿಯಾ, ಸಿಫಿಲಿಸ್ ಮುಂತಾದ ಸೂಕ್ಷಾಣುಗಳಿಗಾಗಿ ಪರೀಕ್ಷಿಸಿ. ರೋಗಾಣುಗಳಿಂದ ಮುಕ್ತವಾದ ರಕ್ತವನ್ನು ಮಾತ್ರವೇ ಅವಶ್ಯಕತೆ ಇರುವರಿಗೆ ವರ್ಗಾಯಿಸುತ್ತಾರೆ.
ದಾನಿಯಿಂದ ರಕ್ತವನ್ನು ಸ್ವೀಕರಿಸುವಾಗಲೂ ಸಂಸ್ಕರಿಸಿದ ಶುದ್ಧವಾದ ಉಪಕರಣಗಳನ್ನು ಬಳಸುತ್ತಾರೆ ಹಾಗಾಗಿ ರಕ್ತದಾನ ಪ್ರಕ್ರಿಯೆಯಲ್ಲಿ ದಾನಿಗಾಗಲೀ, ರಕ್ತ ವಗಾವಣೆ ಮಾಡಿಸಿಕೊಂಡವರಿಗಾಗಲಿ ಸೋಂಕಿನ ಭಯ ಬೇಡ. ಯಾವುದೇ ಭಯ ಆತಂಕಗಳಿಲ್ಲದೆ ಪ್ರತಿಯೊಬ್ಬ ವ್ಯಕ್ತಿಯೂ ಸ್ವ ಇಚ್ಛೆಯಿಂದ ರಕ್ತದಾನವನ್ನು ಮಾಡಬಹುದಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications