ಗಣನಾಯಕನ ಕೃಪೆಗೆ ಪಾತ್ರರಾಗಲು ಬುಧವಾರ ಈ ವಸ್ತುಗಳನ್ನು ಖರೀದಿಸಬೇಡಿ, ಇಲ್ಲದಿದ್ದರೆ ದುರಾದೃಷ್ಟ ಹೆಗಲೇರುತ್ತೆ!
ಇಂದು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಚತುರ್ಥಿ ತಿಥಿ ಬುಧವಾರ. ಹಿಂದೂ ಧರ್ಮದಲ್ಲಿ ಈ ದಿನವನ್ನು ಗಣೇಶನಿಗೆ ಸಮರ್ಪಿಸಲಾಗಿದೆ. ಈ ದಿನ ಶ್ರದ್ಧಾ ಭಕ್ತಿಯಿಂದ ಗಣೇಶನನ್ನು ಪೂಜಿಸಲಾಗುತ್ತದೆ. ಗಣಪತಿಗೆ ವಿಘ್ನಹರ್ತ, ಲಂಬೋದರ, ಏಕದಂತ ಸೇರಿದಂತೆ ಹಲವು ಹೆಸರುಗಳಿವೆ.
ಭಕ್ತರನ್ನು ಗಣೇಶನನ್ನು ಮೆಚ್ಚಿದರೆ ಆತ ಅವರಿಗೆ ಸಂತೋಷ ಮತ್ತು ಸಮೃದ್ಧಿಯನ್ನು ಅನುಗ್ರಹಿಸುತ್ತಾನೆ ಎಂದು ನಂಬಲಾಗಿದೆ. ಹೀಗಾಗಿ ಆತನ ಪೂಜೆಯನ್ನು ತುಂಬಾ ಅಚ್ಚುಕಟ್ಟಾಗಿ ಮಾಡಿ ಗಣನಾಯಕನ ಮೆಚ್ಚುಗೆಗೆ ಪಾತ್ರಾಗುತ್ತಾರೆ ಭಕ್ತರು. ಇದರಿಂದಾಗಿ ಬುಧವಾರ ಕೆಲವು ಕೆಲಸಗಳನ್ನು ಮಾಡಬಾರದು. ಅಂತಹ ನಿಷೇಧಿತ ಕಾರ್ಯಗಳು ಯಾವುವು ಎಂದು ತಿಳಿಯೋಣ.

ಬುಧವಾರ ಈ ವಸ್ತುಗಳನ್ನು ಖರೀದಿಸಬೇಡಿ
1. ಬುಧವಾರದಂದು ಪಾಲಕ್, ಸಾಸಿವೆ ಸೊಪ್ಪು, ಕೊತ್ತಂಬರಿ, ಹಸಿರು ಮೆಣಸಿನಕಾಯಿ, ಪಪ್ಪಾಯಿ, ಪೇರಲ, ಹಸಿರು ಮೂಂಗ್ ದಾಲ್ ಖರೀದಿಸಬೇಡಿ.
2. ಈ ದಿನ ಪಾತ್ರೆಗಳು, ಅಕ್ವೇರಿಯಂ ಮತ್ತು ಔಷಧಿಗಳನ್ನು ಖರೀದಿಸಬೇಡಿ.
3. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧವಾರದಂದು, ಹಾಲಿನಿಂದ ಮಾಡಿದ ಖೀರ್, ಸಿಹಿತಿಂಡಿ ಇತ್ಯಾದಿಗಳನ್ನು ಖರೀದಿಸಬಾರದು ಅಥವಾ ಮನೆಗೆ ತರಬಾರದು ಅಥವಾ ಮನೆಯಲ್ಲಿ ಮಾಡಬಾರದು.
4. ಬುಧವಾರದಂದು ಬಾಚಣಿಗೆ, ಎಣ್ಣೆ, ಹೊಸ ಬೂಟುಗಳು, ಬಟ್ಟೆ ಮುಂತಾದ ಕೂದಲಿಗೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಖರೀದಿಸಬಾರದು.
ಬುಧವಾರದಂದು ಈ ವಸ್ತುಗಳನ್ನು ಖರೀದಿಸುವುದು ಅಶುಭ ಪರಿಣಾಮಗಳನ್ನು ಉಂಟುಮಾಡಬಹುದು ಎನ್ನಲಾಗುತ್ತದೆ. ಹೀಗೆ ಮಾಡುವುದರಿಂದ ಗಣಪತಿ ಕೋಪಗೊಳ್ಳಬಹುದು. ಇದಲ್ಲದೆ ವ್ಯಕ್ತಿಯು ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಎದುರಿಸಬೇಕಾಗಬಹುದು.
ಬುಧವಾರದಂದು ಈ ಕೆಲಸ ಮಾಡಬೇಡಿ
5. ಬುಧವಾರದಂದು ಯಾವುದೇ ರೀತಿಯ ವಹಿವಾಟನ್ನು ತಪ್ಪಿಸಬೇಕು. ಈ ದಿನದಂದು ವಹಿವಾಟು ನಡೆಸುವುದು ಹಣಕಾಸಿನ ಸಮಸ್ಯೆಗಳಿಗೆ ಕಾರಣವಾಗಬಹುದು.
6. ಬುಧವಾರದಂದು ಪಶ್ಚಿಮದ ಕಡೆಗೆ ಪ್ರಯಾಣಿಸುವುದನ್ನು ತಪ್ಪಿಸಬೇಕು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧವಾರ ಈ ದಿಕ್ಕಿನಲ್ಲಿ ಪ್ರಯಾಣ ಮಾಡುವುದು ಅಶುಭ.
7. ಬುಧವಾರದಂದು ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಬಾರದು. ಇದರೊಂದಿಗೆ ಕಪ್ಪು ಬಣ್ಣದ ಆಭರಣಗಳನ್ನು ಧರಿಸಬಾರದು. ಹೀಗೆ ಮಾಡುವುದರಿಂದ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುತ್ತದೆ ಎಂದು ನಂಬಲಾಗಿದೆ.
ಗ್ರಹ ದೋಷಗಳಿಂದ ರಕ್ಷಣೆಗಾಗಿ ಗಣೇಶ ಮಂತ್ರ:-
''ಓಂ ಗಂ ಗಣಪತಯೇ ನಮಃ''
ಗಜಾನಂದ ಏಕಾಕ್ಷರ ಮಂತ್ರವು ಗಣೇಶನ ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಂತ್ರಗಳಲ್ಲಿ ಒಂದಾಗಿದೆ. ಈ ಮಂತ್ರವನ್ನು ಜಪಿಸುವುದರಿಂದ ಭಕ್ತರ ಎಲ್ಲಾ ತೊಂದರೆಗಳು ದೂರವಾಗುತ್ತವೆ. ಬುಧವಾರದಂದು ಪೂಜೆಯ ಸಮಯದಲ್ಲಿ ಕನಿಷ್ಠ 108 ಬಾರಿ ಈ ಮಂತ್ರವನ್ನು ಪಠಿಸಿ. ಇದರಿಂದ ನಿಮ್ಮ ಪ್ರತಿಯೊಂದು ಕೆಲಸವೂ ಯಶಸ್ವಿಯಾಗುತ್ತದೆ ಮತ್ತು ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ.
''ಓಂ ವಕ್ರತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭ
ನಿರ್ವಿಘ್ನಂ ಕುರು ಮೇ ದೇವ, ಸರ್ವ ಕಾರ್ಯೇಷು ಸರ್ವದಾ''
ಗಣೇಶನ ಎಲ್ಲಾ ಪೂಜೆಗಳಲ್ಲಿ ಈ ಮಂತ್ರವನ್ನು ಪಠಿಸಿ. ಇದು ಬಪ್ಪನನ್ನು ಮೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಎಲ್ಲಾ ಆಸೆಗಳನ್ನು ಪೂರೈಸುತ್ತದೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಕಾರ್ಯಗತಗೊಳಿಸುವ ಮೊದಲು ಸಂಬಂಧಿಸಿದ ವೃತ್ತಿಪರರನ್ನು ಸಂಪರ್ಕಿಸಿ.)
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications