Skin Care Tips: ಮೊಡವೆ ಸಮಸ್ಯೆಗೆ ಇಲ್ಲಿದೆ 5 ಸರಳ ಮನೆಮದ್ದುಗಳು
ಇತ್ತೀಚಿನ ದಿನಗಳಲ್ಲಿ ಯುವಕರು ಮಾತ್ರವಲ್ಲದೆ ಹಿರಿಯರಲ್ಲಿಯೂ ಮೊಡವೆ ಸಮಸ್ಯೆ ಸಾಮಾನ್ಯವಾಗಿದೆ. ಹಾರ್ಮೋನ್ ಬದಲಾವಣೆ ಧೂಳು, ಮಾಲಿನ್ಯ, ಎಣ್ಣೆಯುಕ್ತ ಚರ್ಮ, ಒತ್ತಡ, ಮತ್ತು ತಪ್ಪಾದ ಆಹಾರ ಪದ್ಧತಿ ಮೊಡವೆಗಳಿಗೆ ಕಾರಣವಾಗುತ್ತವೆ. ಮನೆಯಲ್ಲೇ ಸಿಗುವ ಕೆಲವು ಸರಳ ಪದಾರ್ಥಗಳಿಂದ ಮೊಡವೆ ಸಮಸ್ಯೆಯನ್ನು ಕಡಿಮೆ ಮಾಡಬಹುದು. ನೀವು ಈ ತರಹದ ಸಮಸ್ಯೆ ಎದುರಿಸುತ್ತಿದ್ದರೆ ಅದಕ್ಕೆ ಬೇಕಾದಂತಹ 5 ಹೊಮ್ ರೆಮಿಡೀಸ್ ಬಗ್ಗೆ ತಿಳಿದುಕೋಳಲೆಬೇಕಾದ ಅಂಶಗಳು.
1. ಅರಿಶಿನ ಮತ್ತು ಜೇನುತುಪ್ಪ
ಅರಿಶಿನದಲ್ಲಿ ನೈಸರ್ಗಿಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ ಒಂದು ಚಿಟಿಕೆ ಅರಿಶಿನಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಪೇಸ್ಟ್ ಮಾಡಿ ಮೊಡವೆ ಇರುವ ಜಾಗಕ್ಕೆ ಹಚ್ಚಿ. 15-20 ನಿಮಿಷಗಳ ಬಳಿಕ ತೊಳೆಯಿರಿ. ಇದರಿಂದ ಉರಿಯೂತ ಕಡಿಮೆಯಾಗಲು ಸಹಾಯವಾಗುತ್ತದೆ.

2. ಅಲೋವೆರಾ ಜೆಲ್
ಅಲೋವೆರಾ ಚರ್ಮಕ್ಕೆ ತಂಪು ನಿಡುವ ಗುಣ ಹೊಂದಿದೆ, ತಾಜಾ ಅಲೋವೆರಾ ಜೆಲ್ ಮುಖಕ್ಕೆ ಹಚ್ಚಿ 20 ನಿಮಿಷಗಳ ನಂತರ ತೊಳೆಯಿರಿ. ಇದು ಚರ್ಮಕ್ಕೆ ತಂಪು ನೀಡುವುದರ ಜೊತೆಗೆ ಮೊಡವೆಗಳಿಂದ ಉಂಟಾಗುವ ಕೆಂಪುತನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
3. ಬೇವಿನ ಎಲೆ ಪೇಸ್ಟ್
ಬೇವಿನ ಎಲೆಗಳನ್ನು ರುಬ್ಬಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಬಹುದು, ಬೇವಿನ ಎಲೆಗಳಲ್ಲಿ ಜೀವಾಣು ನಾಶಕ ಗುಣಗಳಿದ್ದು, ಮೊಡವೆಗಳನ್ನು ಕಡಿಮೆ ಮಾಡಲು ಸಹಕಾರಿ. ಇದು ಬ್ಯಾಕ್ಟೀರಿಯಾಗಳನ್ನು ನಾಶ ಮಾಡಿ ಹೊಸ ಮೊಡವೆ ಉಂಟಾಗದಂತ್ತೆ ತಡಿಯುತ್ತೆ.
4. ಟೀ ಟ್ರೀ ಆಯಿಲ್
ಟೀ ಟ್ರೀ ಆಯಿಲ್ ಅನ್ನು ನೇರವಾಗಿ ಬಳಸಬಾರದು ಸ್ವಲ್ಪ ನೀರು ಅಥವಾ ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಮೊಡವೆ ಮೇಲೆ ಹಚ್ಚಬೇಕು ಇದರಿಂದ ಸೋಂಕು ಕಡಿಮೆಯಾಗಲು ಸಹಾಯವಾಗುತ್ತದೆ.
5. ಐಸ್ ಪ್ಯಾಕ್
ಮೊಡವೆ ಉಬ್ಬಿದ್ದರೆ ಐಸ್ ಕ್ಯೂಬ್ ಅನ್ನು ಬಟ್ಟೆಯಲ್ಲಿ ಸುತ್ತಿ ನಿಧಾನವಾಗಿ ಮುಖದ ಮೇಲೆ ಇಡಿ. ಇದರಿಂದ ಉಬ್ಬರ ಮತ್ತು ಕೆಂಪುತನ ಕಡಿಮೆಯಾಗುತ್ತದೆ.
ಗಮನಿಸಬೇಕಾದ ವಿಷಯಗಳು
1.ದಿನಕ್ಕೆ ಕನಿಷ್ಠ ಎರಡು ಬಾರಿ ಮುಖ ತೊಳೆಯಿರಿ.
2. ಹೆಚ್ಚು ನೀರು ಕುಡಿಯಿರಿ.
3. ಜಂಕ್ ಫುಡ್ ಸೇವನೆ ಕಡಿಮೆ ಮಾಡಿ.
4. ಮುಖವನ್ನು ಪದೇ ಪದೇ ಕೈಯಿಂದ ಮುಟ್ಟಬೇಡಿ.
5. ಮೊಡವೆ ಸಮಸ್ಯೆ ದಿರ್ಘಕಾಲ ಮುಂದುವರೆದರೆ ಅಥವಾ ಹೆಚ್ಚು ಇದ್ದರೆ ಚರ್ಮ ತಜ್ಞರ ಸಲಹೆ ಪಡೆಯುವುದು ಉತ್ತಮ.
-
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications