Lakshmi Puja: ಶುಕ್ರವಾರ ಲಕ್ಷ್ಮಿ ದೇವಿಯನ್ನು ಯಾವಾಗ ಪೂಜಿಸುವುದು ಸರಿ?
ಶುಕ್ರವಾರ ಲಕ್ಷ್ಮಿ ದೇವಿಗೆ ಅರ್ಪಿತವಾಗಿದೆ. ಈ ದಿನದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗಿದೆ. ಶುಕ್ರವಾರದಂದು ಮಾಡುವ ಪೂಜೆ ಮತ್ತು ಉಪವಾಸ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಧರ್ಮ ಗ್ರಂಥಗಳ ಪ್ರಕಾರ ಶುಕ್ರವಾರ ಲಕ್ಷ್ಮೀ ದೇವಿಯ ಹೆಸರಿನಲ್ಲಿ ಮಾಡುವ ಉಪವಾಸದ ವ್ರತ ನಮ್ಮನ್ನು ಹಣದ ಸಮಸ್ಯೆಗಳಿಂದ ಪಾರು ಮಾಡುವುದು ಮಾತ್ರವಲ್ಲದೆ ಧನಾಗಮನವಾಗುವಂತೆ ಮಾಡುತ್ತದೆ.
ಹಿಂದೂ ಧರ್ಮದಲ್ಲಿ ಪೂಜೆಯ ಜೊತೆಗೆ ಶುಭ ಮುಹೂರ್ತಕ್ಕೆ ಒತ್ತು ನೀಡಲಾಗುತ್ತದೆ. ಏಕೆಂದರೆ ಸರಿಯಾದ ಸಮಯದಲ್ಲಿ ಮಾಡಿದ ಪೂಜೆ ಮಾತ್ರ ಪ್ರಯೋಜನಗಳನ್ನು ನೀಡುತ್ತದೆ. ಆದ್ದರಿಂದ ಶುಕ್ರವಾರ ಬೆಳಿಗ್ಗೆ ಅಥವಾ ಸಂಜೆ ಯಾವ ಸಮಯದಲ್ಲಿ ಲಕ್ಷ್ಮಿಯನ್ನು ಪೂಜಿಸಿದರೆ ಹೆಚ್ಚು ಶುಭಕಾರಿಯಾಗಿದೆ ಎಂದು ಈಗ ತಿಳಿಯೋಣ.

ಶುಕ್ರವಾರ ಬೆಳಗ್ಗೆ ಲಕ್ಷ್ಮೀ ದೇವಿಯನ್ನು ಯಾವ ಸಮಯದಲ್ಲಿ ಪೂಜಿಸಬೇಕು?
ನೀವು ಬೆಳಿಗ್ಗೆ ಮತ್ತು ಸಂಜೆ ಎರಡೂ ಹೊತ್ತು ಲಕ್ಷ್ಮಿ ದೇವಿಯನ್ನು ಪೂಜಿಸಬಹುದು. ಆದರೆ ಬೆಳಿಗ್ಗೆ ಮತ್ತು ಸಂಜೆ ಪೂಜಾ ಸಮಯದಲ್ಲಿ ಸ್ವಲ್ಪ ವ್ಯತ್ಯಾಸವಿದೆ. ಬೆಳಿಗ್ಗೆ 6 ರಿಂದ 8 ಗಂಟೆಯ ನಡುವಿನ ಸಮಯವು ಪೂಜೆ ಮಾಡಲು ಶುಭವಾಗಿದೆ. ಪೂಜೆಗಾಗಿ ಮೊದಲು ಸ್ನಾನ ಮಾಡಿ ನಂತರ ವಿಧಿವಿಧಾನಗಳ ಪ್ರಕಾರ ಲಕ್ಷ್ಮಿ ದೇವಿಯನ್ನು ಪೂಜಿಸಬೇಕು.
ಶುಕ್ರವಾರ ಸಂಜೆ ಲಕ್ಷ್ಮೀ ದೇವಿಯನ್ನು ಯಾವ ಸಮಯದಲ್ಲಿ ಪೂಜಿಸಬೇಕು?
ಸಂಜೆ ಲಕ್ಷ್ಮಿ ದೇವಿಯನ್ನು ಪೂಜಿಸುವುದು ಸಹ ಉತ್ತಮ. ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದ ಸಂಜೆ ಮಾತ್ರ ಸಿಗುತ್ತದೆ. ಏಕೆಂದರೆ ಇದು ಹಗಲು ಮತ್ತು ರಾತ್ರಿಯ ನಡುವಿನ ಪರಿವರ್ತನೆಯ ಸಮಯ, ಇದು ಆಧ್ಯಾತ್ಮಿಕವಾಗಿ ಹೆಚ್ಚು ಶಕ್ತಿಶಾಲಿಯಾಗಿದೆ. ಸಂಜೆ ಲಕ್ಷ್ಮಿ ದೇವಿಯನ್ನು ಪೂಜಿಸಲು ಶುಭ ಸಮಯ ಸಂಜೆ 6:00 ರಿಂದ 7:30 ರವರೆಗೆ. ಶುಕ್ರವಾರ ಸಂಜೆ ಪ್ರಾರ್ಥನೆಯ ಸಮಯದಲ್ಲಿ ಲಕ್ಷ್ಮಿ ದೇವಿಗೆ ಕಮಲ ಅಥವಾ ಗುಲಾಬಿ ಹೂವುಗಳನ್ನು ಅರ್ಪಿಸಿ ಮತ್ತು ದೀಪವನ್ನು ಬೆಳಗಿಸಿ. ಜೊತೆಗೆ ಯಾವುದಾದರೂ ಸಹಿಯನ್ನು ಅರ್ಪಿಸಲು ಮರೆಯಬೇಡಿ.

ನೀವು ನಿಯಮಿತವಾಗಿ ಲಕ್ಷ್ಮಿ ದೇವಿಯನ್ನು ಪೂಜಿಸುವುದು ತುಂಬಾ ಶುಭವಾಗಿದೆ. ಆದರೆ ವಿಶೇಷವಾಗಿ ಸಂಜೆಯ ಸಮಯದಲ್ಲಿ ಲಕ್ಷ್ಮಿ ದೇವಿಯನ್ನು ಪೂಜಿಸುವುದು ಸೂಕ್ತ ಸಮಯವೆಂದು ಪರಿಗಣಿಸಲಾಗುತ್ತದೆ. ಸಂಜೆ ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಸಂಪತ್ತು, ಸಂತೋಷ ಮತ್ತು ಸಮೃದ್ಧಿ ಬರುತ್ತದೆ.
ಲಕ್ಷ್ಮೀ ದೇವಿ ಪೂಜಾ ಮಹತ್ವ
ಶುಕ್ರವಾರದ ದಿನದಂದು ಸಂಪತ್ತಿನ ದೇವಿಯಾದ ಲಕ್ಷ್ಮಿ ದೇವಿಯನ್ನು ಅಚ್ಚುಕಟ್ಟಾದ ಧಾರ್ಮಿಕ ವಿಧಿ - ವಿಧಾನಗಳೊಂದಿಗೆ ಪೂಜಿಸಿದರೆ ತುಂಬಾ ಒಳ್ಳೆಯ ಫಲ ಸಿಗಲಿದೆ. ಲಕ್ಷ್ಮಿ ದೇವಿಯನ್ನು ಪೂಜಿಸುವ ಸಮಯದಲ್ಲಿ ಕಮಲದ ಹೂವುಗಳನ್ನು ಅರ್ಪಿಸಿದರೆ ತುಂಬಾ ಒಳ್ಳೆಯದು. ಇದರಿಂದ ಆಕೆ ಬಹುಬೇಗನೆ ಸಂತುಷ್ಟಳಾಗಿ ನಮ್ಮೆಲ್ಲಾ ಇಷ್ಟಾರ್ಥಗಳನ್ನು ಈಡೇರಿಸುತ್ತಾಳೆ.
ತನ್ನ ಆಶೀರ್ವಾದವನ್ನು ಸುರಿ ಮಳೆಯಂತೆ ಸುರಿಸುತ್ತಾಳೆ. ಹೀಗಾಗಿ ಜೀವನದಲ್ಲಿ ಹಣದ ಸಮಸ್ಯೆಗಳಿಂದ ಮುಕ್ತರಾಗಲು ಬಯಸಿದರೆ ಲಕ್ಷ್ಮಿ ದೇವಿಯನ್ನು ಪೂಜಿಸುವ ಸಮಯದಲ್ಲಿ ಆಕೆಗೆ ಕಡ್ಡಾಯವಾಗಿ ಕಮಲದ ಹೂವನ್ನು ಅರ್ಪಿಸುವುದು ತುಂಬಾ ಒಳ್ಳೆಯದು. ಇದು ಮನೆಯಲ್ಲಿ ಕಚೇರಿಯಲ್ಲಿ ಧನಾಗಮನವಾಗುವಂತೆ ಮಾಡುತ್ತದೆ ಮತ್ತು ಹಣದ ಸಮಸ್ಯೆಯಿಂದ ನಿಮ್ಮನ್ನು ಮುಕ್ತಗೊಳಿಸುತ್ತದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications