Get Updates
Get notified of breaking news, exclusive insights, and must-see stories!

ನಿಮ್ಮ ಮಕ್ಕಳು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳಿ: ಯಾಕೆ ಗೊತ್ತೇ?

ಇವತ್ತು ಮಕ್ಕಳು ಹಾದಿ ತಪ್ಪಿದ ಬಗ್ಗೆ ನೋವು ತೋಡಿಕೊಳ್ಳುವ ಪೋಷಕರನ್ನು ಅಲ್ಲಲ್ಲಿ ಕಾಣುತ್ತಿರುತ್ತೇವೆ. ಮಕ್ಕಳು ಕಷ್ಟಬಾರದೆಂದು ತಾವೇ ಕಷ್ಟಪಟ್ಟು ದುಡಿದು ಅವರಿಗೆ ಯಾವುದೇ ತೊಂದರೆ ಆಗದಂತೆ ಕೇಳಿದ್ದನ್ನೆಲ್ಲ ಕೊಟ್ಟು ಕಷ್ಟವೇ ಇಲ್ಲದಂತೆ ಸಾಕಿ ಸಲಹಿ ಕೊನೆ ಗಳಿಗೆಯಲ್ಲಿ ಮಕ್ಕಳು ಹಾದಿ ತಪ್ಪಿದರೆ ಮಕ್ಕಳಿದ್ದೂ ಪ್ರಯೋಜನವೇನು ಎಂಬ ಆಲೋಚನೆ ಬಾರದಿರದು. ಸಮಸ್ಯೆ ಎಲ್ಲಿದೆ ಎಂದು ಹುಡುಕುತ್ತಾ ಹೋದರೆ ಮೂಲ ಮಕ್ಕಳಿಗೆ ಸಂಸ್ಕಾರ ಕಲಿಸದಿರುವುದೇ ಆಗಿದೆ.

ಬೆತ್ತಲೆಯಾಗಿ ಭೂಮಿಗೆ ಬರುವ ಮಗು ನಂತರ ಹೆತ್ತವರ ಆರೈಕೆಯಲ್ಲಿ ಬೆಳೆದು ಅವರ ಆಚಾರ, ವಿಚಾರ, ನಡೆ, ನುಡಿಯನ್ನು ಅನುಕರಣೆ ಮಾಡುವುದು ಸಾಮಾನ್ಯ. ಮಗು ಬೆಳೆಯುತ್ತಿದ್ದಂತೆಯೇ ಸುತ್ತಲಿನ ಪರಿಸರ, ಬೆಳೆಯುತ್ತಿರುವ ವಾತಾವರಣ ಎಲ್ಲವೂ ಅದರ ಮೇಲೆ ಪರಿಣಾಮ ಬೀರುತ್ತದೆ. ಪೋಷಕರ ಹಿಡಿತದಲ್ಲಿ ಬೆಳೆಯುವ ಮಗು ನಂತರ ಪ್ರೌಢಾವಸ್ಥೆಗೆ ಕಾಲಿಟ್ಟಾಗ ಅಥವಾ ಆ ನಂತರದ ಬದುಕನ್ನು ಸಾಗಿಸುವಾಗ ಧರ್ಮದ ಮಾರ್ಗಕ್ಕಿಂತ ಅಧರ್ಮದ ಬಾಗಿಲು ಬಹಬೇಗ ತೆರೆದುಕೊಳ್ಳುತ್ತದೆ.

Photo credit This is an AI generated article image through WISE

ಬಾಲ್ಯದಿಂದಲೇ ಧರ್ಮದ ಬಗ್ಗೆ ಅರಿತು ಸುಸಂಸ್ಕೃತ ಮನೆತನದಲ್ಲಿಯೇ ಬೆಳೆದಿದ್ದರೂ ಕೆಲವೊಮ್ಮೆ ಸಹವಾಸ ದೋಷದಿಂದಲೋ ಏನೋ ಅಧರ್ಮದ ಹಾದಿ ಹಿಡಿಯಬಹುದು. ನಂತರ ಮನವರಿಕೆಯಾಗಿ ತಾನು ಮಾಡಿದ್ದು ತಪ್ಪು ಎಂಬುದು ಅರಿವಾದಾಗ ಅದನ್ನು ದೂರ ತಳ್ಳಿ ಸನ್ಮಾರ್ಗದತ್ತ ನಡೆಯುವುದು ಜಾಣತನ. ಒಮ್ಮೆ ಅಧರ್ಮದ ಹಾದಿ ಹಿಡಿದವನು ಅದರ ಹಿಡಿತದಿಂದ ಅಷ್ಟು ಸುಲಭವಾಗಿ ಹೊರ ಬರಲಾರ. ಏಕೆಂದರೆ ಅದು ನೀಡುವ ಸುಖ ಮತ್ತಿನ ಸುಖ. ಆದರೆ ಅದು ಹೆಚ್ಚು ದಿನ ಉಳಿಯದ, ಬದುಕನ್ನೇ ನಾಶಗೊಳಿಸುವ ಸುಖ ಎಂಬುದು ಆ ಕ್ಷಣಕ್ಕೆ ನಮಗೆ ತಿಳಿಯಲಾರದು. ಹಾಗೆ ತಿಳಿಯುವ ವೇಳೆಗೆ ಬದುಕು ಸರ್ವ ನಾಶದ ಅಂಚಿಗೆ ತಲುಪಿರುತ್ತದೆ.

ಅನೈತಿಕ ಮಾರ್ಗದಿಂದ ಪಡೆದ ಸಂಪತ್ತು ಉಳಿಯಲ್ಲ!

ಹಾಗೆ ನೋಡಿದರೆ ಪ್ರತಿ ವ್ಯಕ್ತಿಯೂ ಏಳು-ಬೀಳುಗಳನ್ನು ಬದುಕಿನಲ್ಲಿ ಕಂಡಿರುತ್ತಾನೆ. ಧರ್ಮದ ಹಾದಿಯಲ್ಲಿ ಹೊರಟವನಿಗೆ ತಕ್ಷಣಕ್ಕೆ ಜಯವಾಗಲೀ, ಸುಖವಾಗಲೀ ಸಿಗಲಾರದು. ಆದರೆ ನೆಮ್ಮದಿಗೆ ಎಂದೂ ಕೊರತೆ ಬಾರದು. ಬಹಳಷ್ಟು ಮಂದಿ ಸುತ್ತಲಿನವರು ಏಳಿಗೆಯಾದ ಬಗ್ಗೆ ತಮ್ಮಲ್ಲಿಯೇ ಹೀಗಳೆದುಕೊಳ್ಳುತ್ತಾರೆ. ನಾನೇನು ಮಾಡಿದ್ದೇನೆ? ಧರ್ಮದ ಹಾದಿ ಹಿಡಿದು ನಾನು ಸಾಧಿಸಿದ್ದೇನು? ಹೀಗೆ ಸಮಯ ಸಿಕ್ಕಾಗ ತಮ್ಮಷ್ಟಕ್ಕೆ ತಾವೇ ಅಂದುಕೊಳ್ಳುತ್ತಾರೆ. ತಮ್ಮ ಬದುಕಿನಾವಧಿಯಲ್ಲಿ ಏನು ಸಂಪಾದಿಸಿದ್ದೇವೆ ಎನ್ನುವುದು ಮುಖ್ಯವಲ್ಲ. ಹೇಗೆ ಬದುಕಿದ್ದೇವೆ ಎನ್ನುವುದೇ ಮುಖ್ಯವಾಗಿರುತ್ತದೆ.

ಅನೈತಿಕ ಮಾರ್ಗದಿಂದ ಗಳಿಸಿದ ಸಂಪತ್ತಿಗೆ ಕ್ರಮೇಣ ದೊಡ್ಡ ಮೊತ್ತದ ಕಂದಾಯ ಕಟ್ಟಬೇಕಾಗಬಹುದು ಎಂಬುದನ್ನು ನಾವು ಮರೆಯಬಾರದು. ಸತ್ಯಮೇವ ಜಯತೇ ಎಂಬ ವಾಕ್ಯದ ಪರಿಪಾಲನೆಯಲ್ಲಿ ನಡೆದರೆ ಶೀಘ್ರವಾಗಿ ಪ್ರಾಪ್ತಿ ದೊರೆಯದಿದ್ದರೂ, ಮಂದಗತಿಯ ಬರಡು ಬದುಕು ಸಿಕ್ಕರೂ ಆತ್ಮ ಸಂತೋಷ ಸದಾ ಉಳಿದಿರುತ್ತದೆ. ದುರ್ಮಾರ್ಗದಲ್ಲಿ ಹೊರಟವನಿಗೆ ಹೊರಗಿನ ಬೆಡಗಿನ ಪ್ರಪಂಚದ ಎಲ್ಲ ಸುಖಗಳು ದೊರೆತರೂ ಅಂತರಂಗದ ಅತೃಪ್ತಿ ಸದಾ ತಾಂಡವವಾಡುತ್ತಿರುತ್ತದೆ. ಹೀಗಾಗಿ ಮನಃಶಾಂತಿಯಿಲ್ಲದೆ, ಕೊರಗಿನಲ್ಲಿಯೇ ದಿನ ಕಳೆಯಬೇಕಾಗುತ್ತದೆ.

Photo credit This is an AI generated article image through WISE

ಸನ್ಮಾರ್ಗದ ಹಾದಿಯಲ್ಲಷ್ಟೆ ಸುಖ, ನೆಮ್ಮದಿ

ನಾವು ಹಿಡಿದ ಮಾರ್ಗ ಸನ್ಮಾರ್ಗದಾಗಿದ್ದು, ಅದರಿಂದಲೇ ಸಾಧಿಸಬೇಕು. ಸಾಧಿಸಿದ್ದು, ಅದು ವಿದ್ಯೆಯೂ ಅಥವಾ ಇನ್ಯಾವುದೋ ಆಗಿರಲಿ ಅದನ್ನು ತುಂಬಾ ಜಾಗ್ರತೆಯಿಂದ ರಕ್ಷಿಸಿಕೊಳ್ಳಬೇಕು. ಹಾಗಿದ್ದರೆ ಮಾತ್ರ ಹೆಚ್ಚು ಕಾಲ ನಮ್ಮೊಂದಿಗಿದ್ದು, ನಮ್ಮನ್ನು ಕಾಪಾಡುತ್ತವೆ. ಇಲ್ಲಾಂದ್ರೆ ಸಾಧನೆ, ಯಶಸ್ಸು, ಶ್ರೇಯಸ್ಸು, ಹಣ, ಸಂಪತ್ತು, ಎಲ್ಲವೂ ನಮ್ಮಿಂದ ನಿರ್ಗಮಿಸಲು ಹೆಚ್ಚು ಕಾಲವಿರಲಾರದು. ಆದ್ದರಿಂದ ಇವತ್ತು ಇದ್ದದ್ದು ನಾಳೆಯೂ ಇರುತ್ತದೆ ಎನ್ನಲಾಗುವುದಿಲ್ಲ. ಮೇಲೇರಿದವರು ಕೆಳಗಿಳಿಯಲೇ ಬೇಕಾಗುತ್ತದೆ. ಆದ್ದರಿಂದ ಸಿರಿತನ ಬಂದಾಗ ಹಿಗ್ಗದೆ, ಬಡತನದಲ್ಲಿ ಕುಗ್ಗದೆ ಬದುವುದನ್ನು ಕಲಿಯಬೇಕಾಗುತ್ತದೆ. ಮತ್ತು ಅದೇ ನಮ್ಮ ಬದುಕು ಎನ್ನುವುದರಲ್ಲಿ ಎರಡು ಮಾತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+