ಸಾವನ್ನು ಮೀರಿ ಬದುಕುವುದು ನಮಗೆ ಸಾಧ್ಯನಾ? ನಮ್ಮ ಬದುಕು ಸಾರ್ಥಕ ಹೇಗೆ?
ನಮಗೆ ನಿಮಗೆ ಎಲ್ಲರಿಗೂ ಗೊತ್ತಿರುವ ವಿಚಾರ ಏನೆಂದರೆ ನಮ್ಮೆಲ್ಲ ಹುಟ್ಟು ಅನಿರೀಕ್ಷಿತವಾಗಿದ್ದರೂ ಸಾವು ಅಂತು ಖಚಿತವೇ... ನಾವು ಸತ್ತೇ ಸಾಯುತ್ತೇವೆ ಎನ್ನುವುದು ಗೊತ್ತಿದ್ದರೂ ಸಾಯುವುದೇ ಇಲ್ಲವೇನೋ ಎಂಬ ನಡವಳಿಕೆಯಿಂದಲೇ ಪ್ರತಿದಿನವೂ ಬದುಕುತ್ತೇವೆ. ಮತ್ತು ನಾವು ಬದುಕಲು ಮತ್ತೊಬ್ಬರನ್ನು ಬಲಿ ತೆಗೆದುಕೊಳ್ಳುತ್ತೇವೆ. ಪ್ರಪಂಚದ ಎಲ್ಲ ರೀತಿಯ ಸುಖಭೋಗಗಳು ನಮಗೆ ಬೇಕೆಂಬ ಧೋರಣೆಯಲ್ಲಿಯೇ ಸದಾ ಬದುಕುತ್ತೇವೆ.
ನಮಗೆ ಇನ್ನಷ್ಟು ಬೇಕೆಂಬ ಬಯಕೆಯಿಂದ ಒಂದಲ್ಲ ಒಂದು ಸವಾಲ್ ಎಳೆದುಕೊಂಡು ಬದುಕುತ್ತಾ ಹೋಗುತ್ತೇವೆ. ದಿನನಿತ್ಯವೂ ಒಂದಲ್ಲ ಒಂದು ರೀತಿಯ ಹೋರಾಟಕ್ಕೆ ನಾವು ಸಜ್ಜಾಗುತ್ತಿರುತ್ತೇವೆ. ಆದರೆ ಇದೆಲ್ಲದರ ನಡುವೆ ಸಾವು ಎಂಬುವುದು ನಮ್ಮ ಬೆನ್ನ ಹಿಂದೆಯೇ ಇದೆ ಎಂಬುವುದನ್ನು ಮರೆತು ಬಿಡುತ್ತೇವೆ. ಹೀಗಾಗಿಯೇ ಹಲವು ಸಂಕಷ್ಟಗಳನ್ನು ನಮ್ಮಿಂದಾಗಿ ನಮ್ಮ ಕುಟುಂಬ ಎದುರಿಸಬೇಕಾಗುತ್ತದೆ.

ಭೂಮಿಯ ಮೇಲೆ ಜನ್ಮ ತಾಳಿದ ಪ್ರತಿ ಜೀವಿ ಸಾಯಲೇ ಬೇಕು. ಇದು ಪ್ರಕೃತಿ ನಿಯಮ. ಹಾಗಿರುವಾಗ ಹುಟ್ಟು ಸಾವು ನಡುವಿನ ಅಂತರದಲ್ಲಿ ನಮ್ಮ ಬದುಕು ಹೇಗಿದ್ದರೆ ಚೆನ್ನ? ಎಂಬ ಪ್ರಶ್ನೆೇ ಹುಟ್ಟಿಕೊಳ್ಳುತ್ತದೆ. ಆಧುನಿಕ ಬದುಕಿನಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕು ಹೀಗೆಯೇ ಇರಬೇಕೆಂದು ಬಯಸುತ್ತಾರೆ. ಆದರೆ ಈ ಬದುಕನ್ನು ಸವೆಸಿದವರು ಅದರಿಂದ ಹಲವು ಅನುಭವವಗಳನ್ನು ಪಡೆದವರು ಹೇಳುವುದೇ ಬೇರೆ. ಇವತ್ತಿನದು ವೈಜ್ಞಾನಿಕ ಯುಗದಲ್ಲಿ ನಮ್ಮ ಆಲೋಚನೆಗಳೆಲ್ಲವೂ ವೈಜ್ಞಾನಿಕವಾಗಿಯೇ ಇದೆ. ಹಾಗೆಂದು ಸಾವನ್ನು ಗೆಲ್ಲಲು ಸಾಧ್ಯವೆ? ಖಂಡಿತಾ ಸಾಧ್ಯವಿಲ್ಲ.
ಆಧ್ಯಾತ್ಮಿಕ ಚಿಂತಕರು ಸಾವಿನ ಬಗ್ಗೆ ಹೇಳುವುದೇನು?
ಪ್ರತಿನಿತ್ಯ ಸಾಯುವವರನ್ನು ನೋಡುತ್ತಿರುತ್ತೇವೆ. ಸತ್ತವರ ಅಂತ್ಯಕ್ರಿಯೆಗಳಲ್ಲಿಯೂ ಪಾಲ್ಗೊಳ್ಳುತ್ತೇವೆ. ಬದುಕೆಂದರೆ ಇಷ್ಟೆ. ಇವತ್ತು ಅವನು ಸತ್ತ. ನಾಳೆ ನಾವು ಸಾಯುತ್ತೇವೆ ಎಂಬುವುದು ಮನಸ್ಸಿಗೆ ನಾಟುವುದೇ ಇಲ್ಲ. ನಮ್ಮ ಇವತ್ತಿನ ಬದುಕಿಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಮಾಡುತ್ತೇವೆ. ಅದರಿಂದ ಮತ್ತೊಬ್ಬನ ಬದುಕಿಗೆ ತೊಂದರೆಯಾದರೂ ಪರ್ವಾಗಿಲ್ಲ. ನಾವು ಚೆನ್ನಾಗಿರಬೇಕೆಂಬ ಸಿದ್ಧಾಂತಕ್ಕೆ ನೇತುಕೊಳ್ಳುತ್ತೇವೆ. ಬಹುಶಃ ಈ ಮನೋಭಾವದ ಮಂದಿ ತಕ್ಷಣಕ್ಕೆ ಸುಖಿಗಳಂತೆ ಕಂಡರೂ ಒಳಗೊಳಗೆ ಯಾತನೆ ಅನುಭವಿಸುತ್ತಾರೆ. ಒಂದು ಕ್ಷಣ ಸಾವಿನ ಬಗ್ಗೆ ಯೋಚನೆ ಮಾಡಿದ್ದೇ ಆದರೆ ನಾವ್ಯಾಕೆ ಇಂತಹ ನರಕದಲ್ಲಿ ಬದುಕಬೇಕು ಅನಿಸದಿರದು.

ಆಧ್ಯಾತ್ಮಿಕ ಚಿಂತಕರು ಸಾವಿನ ಬಗ್ಗೆ ಕುರಿತು ಹೀಗೆಯೇ ಹೇಳುತ್ತಾರೆ. ಸಾವಿನ ಬಗ್ಗೆ ಕುರಿತು ಚಿಂತನೆ ಮಾಡುವವರು ಪರಮಾತ್ಮನ ಸನಿಹವೇ ಇರುತ್ತಾರಂತೆ. ನೀಜ ಹೇಳಬೇಕೆಂದರೆ ಮನುಷ್ಯನ ಜೀವನ ಎಂಬುವುದು ನೀರ ಮೇಲಿನ ಗುಳ್ಳೆಯಂತೆ ಕ್ಷಣಿಕವಾದುದು. ಅದು ಚೆನ್ನಾಗಿ ಗೊತ್ತಿದ್ದರೂ ಇಂದ್ರಿಯಗಳ ಸುಖಗಳ ಬೆನ್ನೇರಿ ಹೋಗಿ ದುಃಖದಲ್ಲಿ ನರಳಾಡುತ್ತೇವೆ. ಇರುವಷ್ಟು ದಿವಸ ಸುಖವಾಗಿ ಬದುಕಲಾಗದೆ ದುಃಖದ ಮಡುವಿನಲ್ಲಿಯೇ ದಿನ ಕಳೆಯುತ್ತೇವೆ.
ಬುದ್ಧ ಮಾಡುತ್ತಿದ್ದ ಆ ಕೆಲಸ ಏನು?
ಲೋಕ ಪರಿತ್ಯಾಗಿಯಾಗಿದ್ದ ಬುದ್ಧನ ಬಳಿಗೆ ಜೀವನದಲ್ಲಿ ವೈರಾಗ್ಯಗೊಂಡ ರಾಜ ಮಹಾರಾಜರು ಬರುತ್ತಿದ್ದರಂತೆ. ಈ ಸಂದರ್ಭ ಭಿಕ್ಷುಗಳಾಗಿ ಬಂದಂತಹ ಅವರನ್ನು ಬುದ್ಧನು ಸ್ಮಶಾನಕ್ಕೆ ಕಳುಹಿಸುತ್ತಿದ್ದನಂತೆ. ಅಲ್ಲಿಗೆ ಹೋದ ಭಿಕ್ಷುಗಳು ಹೆಣಸುಡುವವರನ್ನು ನೋಡುತ್ತಿದ್ದಂತೆ. ಹೀಗೆ ಅದನ್ನು ನೋಡುತ್ತಾ ನೋಡುತ್ತಾ ಅವರಲ್ಲಿ ಬದುಕೆಂದರೆ ಇಷ್ಟೆನಾ ಎಂಬ ಅರಿವು ಮೂಡುತ್ತಿತ್ತಂತೆ. ದೇಹದ ಮೂಳೆ, ಮಾಂಸಗಳೆಲ್ಲವೂ ಸುಟ್ಟು ಬೂದಿಯಾಗುತ್ತದೆ. ಹಾಗಿದ್ದ ಮೇಲೆ ಈ ಶರೀರ ಶಾಶ್ವತವಲ್ಲ. ಇದು ನಿಜವಾದ ಆನಂದ ನೀಡದು.

ಹಾಗಾದರೆ ನಾವು ಸುಟ್ಟು ಬೂದಿಯಾದ ಮೇಲೂ ಇಲ್ಲಿಯೇ ನೆಲೆಸಬೇಕು. ಅದು ಹೇಗೆಂದರೆ ನಾವು ಇಲ್ಲಿರುವಷ್ಟು ದಿನ ಒಳ್ಳೆಯದನ್ನೇ ಮಾಡಬೇಕು. ಆ ಒಳ್ಳೆತನ ಜಗತ್ತಿನಿಂದ ಕಣ್ಮರೆಯಾದ ನಂತರವೂ ಮತ್ತೊಬ್ಬರಿಗೆ ಸಹಕಾರಿಯಾಗಬೇಕು ಎಂಬುವುದು ಅರಿವಿಗೆ ಬರುತ್ತಿತ್ತು. ಹುಟ್ಟಿದ್ದೇವೆ ಎಂಬುವುದು ಎಷ್ಟು ಸತ್ಯವೋ ಸಾವು ಕೂಡ ಅಷ್ಟೇ ಸತ್ಯ. ಅದು ಈಗಲೋ.. ಆಗಲೋ ಯಾವ ಕ್ಷಣಕ್ಕೂ ಬರಬಹುದು. ಅದು ನಮ್ಮ ಸುತ್ತಲೂ ಸುತ್ತಾಡುತ್ತಲೇ ಇರುತ್ತದೆ.
ಮನುಷ್ಯ ಮನುಷ್ಯನ ಅರಿತು ಬದುಕಬೇಕು
ನಾವು ಮತ್ತೊಬ್ಬರಿಗೆ ಉಪಕಾರಿಯಾಗಿರಬೇಕೇ ವಿನಃ ಉಪದ್ರವಿಯಾಗಬಾರದು. ಹಿರಿಯರು ಹೇಳುತ್ತಾರೆ. ಸಾಧ್ಯವಾದರೆ ನೀನು ಉಪಕಾರ ಮಾಡು. ಇಲ್ಲಾಂದ್ರೆ ತೆಪ್ಪಗಿರು. ಆದರೆ ಉಪದ್ರವಿಯಂತು ಆಗಲೇ ಬೇಡ. ಹುಟ್ಟು ಸಾವಿನ ನಡುವೆ ಅಲ್ಪ ಜೀವಿತಾವಧಿಯಲ್ಲಿ ಸಾಧ್ಯವಾದಷ್ಟು ಪರಮಾತ್ಮನ ದಯೆ, ಕರುಣೆ, ಸಹಾನುಭೂತಿ, ಪರೋಪಕಾರಗಳಲ್ಲಿ ಮನಸ್ಸನ್ನು, ದೇಹವನ್ನು ತೊಡಗಿಸಿಕೊಳ್ಳುವುದು ಒಳ್ಳೆಯದು.
ಪರಮಾರ್ಥ ಸತ್ಯವನ್ನು ಅರಿಯುತ್ತಾ ಆಧ್ಯಾತ್ಮವನ್ನು ಬೆಳೆಸಿಕೊಳ್ಳುವುದು ಮನುಷ್ಯನ ಬುದ್ದಿವಂತಿಕೆ. ಅದು ಬಿಟ್ಟು ಲೌಕಿಕ ಸುಖಕ್ಕೋಸ್ಕರ ಜಂಜಾಟಗಳೊಂದಿಗೆ ಬಡಿದಾಡುತ್ತಾ ಬದುಕುವುದರಲ್ಲಿ ಪುರುಷಾರ್ಥವಿಲ್ಲ. ಯಾವ ಸಾಧನೆಯೂ ಅಲ್ಲ. ಮನುಷ್ಯ ಮನುಷ್ಯನ ಸಂಬಂಧಗಳನ್ನು ಅರಿತು ಮತ್ತೊಬ್ಬರಿಗೆ ತೊಂದರೆ ಮಾಡದೆ ಸಾಧ್ಯವಾದಷ್ಟು ಪರರ ಒಳಿತಿಗಾಗಿ ಸೇವೆ ಮಾಡುತ್ತಾ ಬದುಕುವುದೇ ಮಾನವ ಧರ್ಮ. ಮನುಷ್ಯನಾಗಿ ಹುಟ್ಟಿದಕ್ಕೂ ಸಾರ್ಥಕ.
-
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications