Get Updates
Get notified of breaking news, exclusive insights, and must-see stories!

ದೇಹವನ್ನು ಮನಸ್ಸಿನ ಗುಲಾಮನಾಗಲು ಬಿಡಬೇಡಿ: ಯಾಕೆ ಗೊತ್ತಾ?

ನಾವು ಒಂದಲ್ಲ ಒಂದು ರೀತಿಯಲ್ಲಿ ನಮ್ಮೊಳಗಿನ ಮನಸ್ಸಿಗೆ ಸೋತು ಬಿಡುತ್ತೇವೆ. ಅಷ್ಟೇ ಅಲ್ಲದೆ ಅದು ಹೇಳಿದಂತೆಯೇ ನಡೆದುಕೊಂಡು ಬಿಡುತ್ತೇವೆ. ಹೀಗಾಗಿಯೇ ಮೇಲ್ನೋಟಕ್ಕೆ ಕಾಣುವ ಮನುಷ್ಯನ ದೇಹ ಮನಸ್ಸಿನ ಗುಲಾಮನಾಗಿದ್ದು, ಮನಸ್ಸು ಹೇಳಿದಂತೆ ಕೇಳುತ್ತಾ ಒಳ್ಳೆಯದೋ ಮತ್ತು ಕೆಟ್ಟದೋ ಎರಡನ್ನು ಮಾಡಿ ಒಳಿತು ಕೆಡಕು ಎರಡಕ್ಕೂ ಹಲವು ಬಾರಿ ಸಾಕ್ಷಿಯಾಗಿ ಬಿಡುತ್ತೇವೆ. ಒಳಗಿನ ಮನಸ್ಸು ಏನೇ ಮಾಡಿದರೂ ಅನುಭವಿಸಬೇಕಾಗಿ ಬರುವುದು ಹೊರಗಿನ ದೇಹ ಮಾತ್ರ.

ಒಬ್ಬ ವ್ಯಕ್ತಿಯನ್ನು ನಾವು ದೇಹದಿಂದ ಗುರುತಿಸುತ್ತೇವೆ. ಅವನಲ್ಲಿರುವ ಎಲ್ಲ ಗುಣಗಳಿಗೆ ದೇಹ ಸಾಕ್ಷಿಯಾಗುತ್ತದೆ. ನಮಗೆ ಒಬ್ಬ ವ್ಯಕ್ತಿಯ ಮನಸ್ಸಾಗಲೀ, ಆತನ ಗುಣವಾಗಲೀ ತಕ್ಷಣಕ್ಕೆ ಕಾಣುವುದಿಲ್ಲ. ಮೇಲ್ನೋಟಕ್ಕೆ ಕಾಣುವುದು ದೇಹ ಮಾತ್ರ. ಆ ದೇಹದ ಮುಖಚರ್ಯೆ, ರೂಪ, ಆಕಾರ, ಬಣ್ಣದಿಂದ ವ್ಯಕಿಯನ್ನು ಗುರುತಿಸುತ್ತೇವೆ, ನೆನಪಿಟ್ಟುಕೊಳ್ಳುತ್ತೇವೆ. ಮೇಲ್ನೋಟಕ್ಕೆ ಆತನ ದೇಹವಷ್ಟೆ ಕಾಣಿಸುತ್ತದೆ. ಒಳಗಿನ ಮನಸ್ಸು ಕಾಣಿಸುವುದಿಲ್ಲ. ಅದು ನಮ್ಮ ಬಗ್ಗೆ ಏನು ಯೋಚಿಸುತ್ತಿದೆ ಎಂಬುದು ಕೂಡ ಗೊತ್ತಾಗುವುದಿಲ್ಲ.

Health tips Don t Let The Body Become A Slave Of The Mind

ದೇಹದ ಒಡನಾಟಕ್ಕೆ ಬಂದಾಗ ಮಾತ್ರ ಆ ದೇಹದ ಮನಸ್ಸಿನ ಬಗ್ಗೆ ಮತ್ತು ಅದರೊಳಗಿನ ಗುಣದ ಬಗ್ಗೆ ತಿಳಿಯುತ್ತದೆ. ಇಷ್ಟಕ್ಕೂ ನಾವು ದೇಹವನ್ನು ನೋಡಿ ಯಾವತ್ತೂ ಒಬ್ಬ ವ್ಯಕ್ತಿಯೊಂದಿಗೆ ಗೆಳೆತನ ಮಾಡುವುದಿಲ್ಲ. ಪರಿಚಯವಾದ ಬಳಿಕ ಆತನಲ್ಲಿರುವ ಗುಣ ನೋಡುತ್ತೇವೆ. ನಮಗೆ ಇಷ್ಟವಾದರೆ ಮಾತ್ರ ಸಂಬಂಧ ಮುಂದುವರೆಸುತ್ತೇವೆ. ಇಷ್ಟಕ್ಕೂ ಈ ಜಗತ್ತಿನಲ್ಲಿ ಎಲ್ಲರೂ ಎಲ್ಲರಿಗೆ ಇಷ್ಟವಾಗುವುದಿಲ್ಲ ಎಂಬುದು ನಮಗೆ ಗೊತ್ತಿರುವ ವಿಚಾರವೇ.. ಹೀಗಾಗಿಯೇ ಹಲವರ ಸಂಪರ್ಕದಲ್ಲಿದ್ದರೂ ಸಂಬಂಧವನ್ನು ಮಾತ್ರ ಆಯ್ದ ಕೆಲವರೊಂದಿಗೆ ಮಾತ್ರ ಮುಂದುವರೆಸುತ್ತೇವೆ.

ಮಾತು ಮಾತಿಗೂ ತಲೆಬಿಸಿ ಎನ್ನುವುದೇಕೆ?

ನಮ್ಮ ದೇಹ ಹೇಗೆಯೇ ಇರಲಿ. ಅದನ್ನು ಮನಸ್ಸು ನಿಯಂತ್ರಿಸುತ್ತದೆ. ಅದು ಹೇಗೆ ಬೇಕೋ ಹಾಗೆ ಆಡಿಸುತ್ತದೆ. ಶಿರ, ಮುಂಡ, ಕೈಕಾಲು, ಕಣ್ಣು, ಕಿವಿ, ಮೂಗು, ಚರ್ಮ, ನಾಲಿಗೆ, ರಕ್ತ ಮಾಂಸವನ್ನು ಹೊಂದಿರುವ ದೇಹವನ್ನು ಕಾಪಾಡಲು ನಾವು ಕಾಳಜಿ ವಹಿಸುತ್ತೇವೆ. ದೇಹದ ಯಾವುದೇ ಭಾಗಕ್ಕೆ ತೊಂದರೆಯಾದರೂ ಇಡೀ ದೇಹ ಕಂಪಿಸುತ್ತದೆ. ಬಹಳಷ್ಟು ಸಾರಿ ದೇಹಕ್ಕಾಗಿರುವ ನೋವನ್ನು ಚಿಕಿತ್ಸೆ ಮೂಲಕ ಗುಣಪಡಿಸಿಕೊಳ್ಳಬಹುದು.

Health tips Don t Let The Body Become A Slave Of The Mind

ಮನಸ್ಸಿನ ಮೇಲಾಗುವ ನೋವಿಗೆ ಚಿಕಿತ್ಸೆ ನೀಡಿದರೆ ಅದು ಶಮನವಾಗುವುದಿಲ್ಲ. ಅದಕ್ಕೆ ನಾವೇ ಚಿಕಿತ್ಸೆ ನೀಡಿಕೊಳ್ಳಬೇಕು. ಕೆಲವರು ಮಾತು ಮಾತಿಗೂ ತಲೆಬಿಸಿಯಾಗುತ್ತೆ ಎನ್ನುತ್ತಾರೆ. ತಲೆಬಿಸಿ ಎನ್ನುವುದು ಜ್ವರ ಬಂದಾಗ ಆಗುವ ಬೆಚ್ಚಗೆ ಅಲ್ಲ. ಅದು ಒಂದು ರೀತಿಯಲ್ಲಿ ಏನು ಮಾಡಬೇಕೆಂದು ತೋಚದ ಸ್ಥಿತಿ. ಕೆಲವು ಅನಗತ್ಯ ವಿಚಾರಗಳನ್ನು ಮೈಗೆ ಎಳೆದುಕೊಂಡಾಗ, ಯಾವುದೋ ವಿಚಾರದ ಬಗ್ಗೆ ಹೆಚ್ಚು ಹೆಚ್ಚಾಗಿ ಯೋಚಿಸಿದಾಗಲೂ ತಲೆಬಿಸಿಯಾದ ಅನುಭವವಾಗುತ್ತದೆ.

ಇಷ್ಟಕ್ಕೂ ಮನಸ್ಸು ಎಂದರೇನು ಗೊತ್ತಾ?

ಇಂತಹ ತಲೆಬಿಸಿಗಳಿಂದ ತೊಂದರೆಯೇ ಜಾಸ್ತಿ. ಆದ್ದರಿಂದ ಮನಸ್ಸಿಗೆ ಹೆಚ್ಚಿನ ಒತ್ತಡ ನೀಡಬಾರದು. ಆದಷ್ಟು ಪ್ರಶಾಂತವಾಗಿರುವಂತೆ ನೋಡಿಕೊಳ್ಳಬೇಕು. ನಮಗೆ ಖುಷಿ ಕೊಡುವ ವಿಚಾರಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಮನಸ್ಸು ಮತ್ತು ದೇಹ ಎರಡೂ ಆರೋಗ್ಯಕರವಾಗಿರಬೇಕು. ಮನಸ್ಸಿನ ಮೇಲೆ ಆಗುವ ಒತ್ತಡ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆಯೋ ಹಾಗೆಯೇ ದೇಹದ ಮೇಲಿನ ಆಗುವ ನೋವುಗಳು ಕೂಡ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ.

ಇಷ್ಟಕ್ಕೂ ಮನಸ್ಸು ಕಣ್ಣಿಗೆ ಕಾಣುವಂತಹದಲ್ಲ. ದೇಹದ ಮೇಲೆ ಇಂತಹದ್ದೇ ಜಾಗದಲ್ಲಿದೆ ಎಂದು ಗುರುತಿಸಲೂ ಸಾಧ್ಯವಿಲ್ಲ. ಅದು ಅದ್ಭುತ ಶಕ್ತಿಯಾಗಿದ್ದು, ಇಡೀ ಶರೀರವನ್ನು ಆವರಿಸುವ ಸಂವೇದನೆಯಾಗಿದೆ. ಮನ್ ಧಾತುವಿನಿಂದ ಮನಸ್ಸು. ಮನ್ ಎಂದರೆ ಚಿಂತಿಸು, ಯೋಚಿಸು, ತರ್ಕಿಸು ಎಂಬಂತಹ ಅರ್ಥವನ್ನು ನೀಡುತ್ತದೆ. ಇಷ್ಟಕ್ಕೂ ಮನಸ್ಸು ಒಂದೆಡೆ ನಿಲ್ಲುವಂತದಲ್ಲ. ಅದು ಸದಾ ಸಂಚಲನದಲ್ಲಿರುತ್ತದೆ. ಅದು ಕೆಟ್ಟದರತ್ತವೂ ಹರಿಯಬಹುದು. ಇಂಥ ಸಂದರ್ಭ ಅದಕ್ಕೆ ದೇಹ ಗುಲಾಮನಾಗಿ ಮುನ್ನಡೆದಾಗ ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದಲೇ ಆಧ್ಯಾತ್ಮಿಕ ಚಿಂತಕರು ಮನಸ್ಸಿಗೆ ಲಗಾಮು ಹಾಕಿ ಹಿಡಿದಿಟ್ಟುಕೊಳ್ಳಿ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+