ಹೆಚ್ಚುತ್ತಿದೆ ಹಾರ್ಟ್ ಅಟ್ಯಾಕ್: ಹೃದಯ ಆರೋಗ್ಯಕ್ಕೆ ಯಾವ್ಯಾವ ಆಹಾರ ಸೇವಿಸಬೇಕು?
ಇವತ್ತು ನಮ್ಮ ಆರೋಗ್ಯ ನಾವು ಸೇವಿಸುವ ಆಹಾರದ ಮೇಲೆ ನಿಂತಿದೆ. ಅದರಲ್ಲೂ ಇತ್ತೀಚೆಗೆ ಹೆಚ್ಚಿನವರು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ನಮ್ಮ ಹೃದಯ ಆರೋಗ್ಯವಾಗಿರಬೇಕಾದರೆ ನಾವು ಸೇವಿಸುವ ಆರೋಗ್ಯದ ಬಗ್ಗೆ ಎಚ್ಚರ ಮತ್ತು ಆಹಾರ ಸೇವನೆಯಲ್ಲಿ ಶಿಸ್ತು ಅಳವಡಿಸಿಕೊಳ್ಳುವುದು ಬಹು ಮುಖ್ಯವಾಗಿದೆ.
ಸಾಮಾನ್ಯವಾಗಿ ನಮ್ಮಲ್ಲಿ ಹೆಚ್ಚಿನವರು ಬಾಯಿ ರುಚಿಗೆ ಆದ್ಯತೆ ನೀಡುತ್ತೇವೆ ವಿನಃ ಅದು ಎಷ್ಟರ ಮಟ್ಟಿಗೆ ನಮ್ಮ ದೇಹಕ್ಕೆ ಹಿತಕರ ಎಂಬುದನ್ನು ಯೋಚಿಸುವುದೇ ಇಲ್ಲ. ಬಾಯಿ ರುಚಿಗೆ ತಕ್ಕಂತೆ ನಮಗೆ ಬೇಕಾದ ಆಹಾರಗಳನ್ನು ಸೇವಿಸಿ ಹಸಿವು ನೀಗಿಸಿಕೊಳ್ಳುತ್ತಿದ್ದೇವೆ. ಆದರೆ ನಾವು ಸೇವಿಸುವ ಆಹಾರ ಬಾಯಿಗೆ ರುಚಿಯಾಗಿ ಹೊಟ್ಟೆ ತುಂಬಿದರೆ ಸಾಲದು ಅದು ಆರೋಗ್ಯಕ್ಕೆ ಪೂರಕವಾಗಿರಬೇಕು ಎನ್ನುವುದನ್ನು ಮರೆತು ಬಿಡುತ್ತೇವೆ.

ಇದರ ಪರಿಣಾಮದಿಂದಾಗಿ ಇವತ್ತು ಬಹಳಷ್ಟು ಮಂದಿ ವಿವಿಧ ರೋಗಗಳಿಂದ ಬಳಲುವಂತಾಗಿದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯಕ್ಕೆ ಅನುಕೂಲವಾಗುವ ಆಹಾರವನ್ನು ಸೇವಿಸುವುದನ್ನು ರೂಢಿಸಿಕೊಂಡರೆ ರೋಗ ಉಲ್ಭಣವಾಗದಂತೆ ತಡೆದು ನಿಯಂತ್ರಣಲ್ಲಿಡಲು ಸಹಕಾರಿಯಾಗುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿರುವ ಕಾರಣ ನಾವು ಹೃದಯದ ಆರೋಗ್ಯಕ್ಕೆ ಸಹಕಾರಿಯಾದ ಆಹಾರವನ್ನು ಸೇವಿಸುವುದನ್ನು ರೂಢಿಸಿಕೊಂಡರೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ.
ಹೃದಯದ ಸಮಸ್ಯೆಗೆ ಆಹಾರ ಕಾರಣ
ಹಾಗೆನೋಡಿದರೆ ಹೃದಯದ ತೊಂದರೆಗೆ ದೇಹ ಮತ್ತು ರಕ್ತದಲ್ಲಿ ಶೇಖರಣೆಯಾಗುವ ಕೊಬ್ಬು, ಕೊಲೆಸ್ಟ್ರಾಲ್, ಅತಿರಕ್ತದೊತ್ತಡ, ಅತಿತೂಕವೂ ಮಾರಕವಾಗಿದೆ. ಬಹಳಷ್ಟು ಕಾಯಿಲೆಗೆ ನಾವು ಸೇವಿಸುವ ಆಹಾರದಲ್ಲಿರುವ ಕೆಲವು ಪದಾರ್ಥಗಳು ಕೂಡ ಕಾರಣವಾಗಿವೆ. ಬಾಯಿ ರುಚಿಗಾಗಿ ಸಿಕ್ಕಿದನೆಲ್ಲ ತಿನ್ನುವುದು ಕಾಯಿಲೆಗಳಿಗೆ ಆಶ್ರಯ ನೀಡುತ್ತವೆ.
ಜಿಡ್ಡು ಕೊಬ್ಬಿನಾಂಶ, ಎಣ್ಣೆಯಲ್ಲಿ ಕರಿದ ತಿಂಡಿಗಳು ಬಾಯಿಗೆ ರುಚಿಯಾಗಿದ್ದರೂ ಅವು ಹೃದಯದ ಆರೋಗ್ಯ ಒಳ್ಳೆಯದಲ್ಲ. ಹೀಗಾಗಿ ಶೇ. 15ರಿಂದ 20ರಷ್ಟು ಮಾತ್ರ ಕೊಬ್ಬು ಆಹಾರದಲ್ಲಿರುವಂತೆ ನೋಡಿಕೊಳ್ಳಬೇಕು. ಹಾಗಾದರೆ ಯಾವುದನ್ನು ಸೇವಿಸಬೇಕು? ಯಾವುದನ್ನು ಸೇವಿಸಬಾರದು ಎಂಬುದರ ಬಗ್ಗೆ ನಾವು ಅರಿತುಕೊಂಡು ಅದರಂತೆ ನಮ್ಮ ಆಹಾರ ಕ್ರಮಗಳನ್ನು ಅಳವಡಿಸಿಕೊಂಡರೆ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ.

ಯಾವ್ಯಾವ ಆಹಾರಗಳನ್ನು ಸೇವಿಸಬಾರದು
ಮುಖ್ಯವಾಗಿ ನಾವು ತುಪ್ಪ, ವನಸ್ಪತಿ, ಕೊಬ್ಬರಿ ಎಣ್ಣೆ, ಬೆಣ್ಣೆ, ಹಾಲಿನ ಉತ್ಪನ್ನಗಳಾದ ಖೋವಾ, ಪನ್ನೀರು, ಐಸ್ಕ್ರೀಮ್, ಗಿಣ್ಣು ಸೇವಿಸಬಾರದು.. ಮೊಟ್ಟೆಯ ಹಳದಿ ಭಾಗ, ಚರ್ಬಿ ಮಾಂಸ, ಕೋಳಿಯ ಚರ್ಮ, ಹಂದಿ ಮಾಂಸ, ದನದ ಮಾಂಸ ಮೊದಲಾದವುಗಳನ್ನು ತಿನ್ನಬಾರದು. ಉಪ್ಪನ್ನು ಆದಷ್ಟು ಕಡಿಮೆ ಮಾಡಬೇಕು.
ಚಿಪ್ಸ್, ಸಾಸ್, ಉಪ್ಪಿನಕಾಯಿ ಉಪ್ಪು ಮಿಶ್ರಿತ ಬಿಸ್ಕೆಟ್, ಸಂಡಿಗೆ ಮೊದಲಾದವುಗಳನ್ನು ತಿನ್ನಬಾರದು. ಧೂಮಪಾನ, ಮದ್ಯಪಾನ ನಿಲ್ಲಿಸಬೇಕು. ಬೊಜ್ಜು ಬಾರದಂತೆ ನೋಡಿಕೊಳ್ಳಬೇಕು. ಒತ್ತಡದ ಬದುಕಿನಿಂದ ಹೊರಬರಬೇಕು. ಕಾಫಿ, ಟೀ ಸೇರಿದಂತೆ ಕೆಲವು ಪಾನೀಯಗಳನ್ನು ಹೆಚ್ಚು ಸೇವಿಸಬಾರದು.

ನಾರಿನ ಅಂಶದ ಆಹಾರಗಳು, ಕಾಳುಗಳು, ಮೊಳಕೆಕಾಳುಗಳು, ಸೊಪ್ಪು, ಹಣ್ಣು ಹಂಪಲುಗಳು, ರಾಗಿ, ಗೋಧಿ, ಜೋಳ, ಅಕ್ಕಿಯನ್ನು ಮಧ್ಯಮ ಪ್ರಮಾಣದಲ್ಲಿ ಸೇವಿಸಬೇಕು. ಎಣ್ಣೆಬೀಜ ಮತ್ತು ಒಣ ಹಣ್ಣುಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು. ವಿಟಮಿನ್ ಸಿ ಯುಕ್ತ ಹಣ್ಣುಗಳಾದ ದ್ರಾಕ್ಷಿ, ಸೀಬೆ, ಕಿತ್ತಲೆ, ಮೋಸಂಬಿ, ನೆಲ್ಲಿಕಾಯಿ ಮಾವಿನ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಬೆಳ್ಳುಳ್ಳಿ ಹಸಿ ಈರುಳ್ಳಿ ಸೇವನೆ ಒಳ್ಳೆಯದು.
ಆರೋಗ್ಯದ ಬಗ್ಗೆ ಸದಾ ಕಾಳಜಿ ಇರಲಿ
ಇತ್ತೀಚೆಗಿನ ದಿನಗಳಲ್ಲಿ ಸದಾ ಒತ್ತಡದ ಬದುಕಿನಲ್ಲಿ ಯಾವುದನ್ನೂ ನಾವು ಸರಿಯಾಗಿ ಮಾಡುತ್ತಿಲ್ಲ. ಶ್ರೀಮಂತಿಕೆ ಇದ್ದರೂ ನೆಮ್ಮದಿಯಾಗಿ ಹೊತ್ತೊತ್ತಿಗೆ ನೆಮ್ಮದಿಯಾಗಿ ಊಟ ಮಾಡಲಾಗುತ್ತಿಲ್ಲ. ಸಿಕ್ಕಿದನ್ನು ತಿಂದು ಹಣ ಸಂಪಾದನೆಯತ್ತ ಹೆಚ್ಚಿನ ಗಮನ ನೀಡುತ್ತಿರುವ ನಾವು ಆರೋಗ್ಯವನ್ನು ಸದ್ದಿಲ್ಲದೆ ಕಳೆದುಕೊಳ್ಳುತ್ತೇವೆ. ಆದ್ದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹು ಮುಖ್ಯವಾಗಿದ್ದು, ಅದರ ಜತೆಗೆ ಆರೋಗ್ಯಕ್ಕೆ ಮಾರಕವಾಗುವ ಆಹಾರವನ್ನು ತ್ಯಜಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications