Get Updates
Get notified of breaking news, exclusive insights, and must-see stories!

Depression: ನಿರಾಸೆಯಿಂದ ಹೊರಬರಲು ನಮ್ಮಲ್ಲೇ ಇದೆ ಪ್ರಬಲ ಅಸ್ತ್ರ: ಏನದು?

ನಮ್ಮೆಲ್ಲರ ಜೀವನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ನಿರಾಸಭಾವ ಕಾಡಿರುತ್ತದೆ. ಆದರೆ ಕೆಲವರು ಅದರಿಂದ ಬಹುಬೇಗ ಹೊರಗೆ ಬಂದಿದ್ದರೆ, ಮತ್ತೆ ಕೆಲವರು ನಿರಾಸಭಾವರಾಗಿ ಕುಗ್ಗಿ ಹೋಗಿ ಬದುಕನ್ನೇ ಕಳೆದುಕೊಂಡು ಬಿಡುತ್ತಾರೆ. ಇದು ಆಗಬಾರದೆಂದಾದರೆ ನಾವು ಸದಾ ಆಶಾಭಾವನೆಯಿಂದ ಬದುಕುವುದನ್ನು ಕರಗತ ಮಾಡಿಕೊಳ್ಳಬೇಕಾಗುತ್ತದೆ.

ಬದುಕಿನಲ್ಲಿ ಮೇಲಿಂದ ಮೇಲೆ ಬರುವ ಸೋಲು.. ಕಷ್ಟ ಕಾರ್ಪಣ್ಯಗಳು.. ಹಲವರ ಬದುಕನ್ನೇ ಮೂರಾಬಟ್ಟೆ ಮಾಡಿಬಿಡುತ್ತದೆ. ಈ ವೇಳೆ ಏನು ಮಾಡಿದರೂ ಯಶಸ್ಸು ಸಿಗುತ್ತಿಲ್ಲ. ಗೆಲುವಿಗಿಂತ ಹೆಚ್ಚಾಗಿ ಸೋಲೇ ಅಪ್ಪಿಕೊಳ್ಳುತ್ತಾ ಹೋದರೆ ಮುಂದೇನಾಪ್ಪಾ ಎಂಬ ಭಯ ಕಾಡುವುದಂತು ನಿಜ. ಜತೆಗೆ ಏನು ಮಾಡಿದರೂ ಕೈಗೂಡುತ್ತಿಲ್ಲವಲ್ಲ ಎಂಬ ನಿರಾಸಭಾವ ಮನಸ್ಸನ್ನು ಆವರಿಸಿ ಬಿಡುತ್ತದೆ. ಆಗ ಬದುಕು ಸಾಕು ಎಂಬ ತೀರ್ಮಾನಕ್ಕೂ ಬಂದು ಬಿಡುತ್ತೇವೆ.

Hope Is Our Weapon To Overcome Depression

ನಿಜವಾಗಿ ಹೇಳಬೇಕೆಂದರೆ, ಒಮ್ಮೆ ನಮ್ಮನ್ನು ನಿರಾಸೆ ಕಾಡಿತೆಂದರೆ ಮತ್ತೆ ನಾವು ಮೇಲೇಳುವುದು ಕಷ್ಟ ಸಾಧ್ಯ. ಬಹಳಷ್ಟು ಮಂದಿಯ ಬದುಕಿನ ಇತಿಶ್ರೀಗೂ ನಿರಾಸೆ ಕಾರಣವಾಗಿ ಬಿಡುತ್ತದೆ. ಬದುಕಿನಲ್ಲಿ ನಿರಾಸೆ ಇಣುಕಿತೆಂದರೆ ಏನೇನು ಮಾಡಲು ಸಾಧ್ಯವಾಗುವುದಿಲ್ಲ. ಒಂದೊಂದು ಕ್ಷಣವೂ ನರಕವಾಗಿ ಪರಿಣಮಿಸುತ್ತದೆ. ಮುಂದೆ ನಡೆಯಲು ಮಾರ್ಗ ಇಲ್ಲವೇನೋ ಎಂಬ ಭಾವ ಕಾಡುತ್ತದೆ.

ನಿರಾಸೆ ಕಾಡಲು ಅಜ್ಞಾನವೇ ಕಾರಣವಂತೆ

ಹಾಗಾದರೆ ನಿರಾಸೆಗೆ ಕಾರಣವಾದರೂ ಏನು ಎಂಬ ಪ್ರಶ್ನೆಗೆ ಆಧ್ಯಾತ್ಮಿಕ ಚಿಂತಕರು ಅಜ್ಞಾನವೇ ಕಾರಣ ಎಂಬ ಉತ್ತರವನ್ನು ನೀಡುತ್ತಾರೆ. ಅಷ್ಟೇ ಅಲ್ಲ. ನಮ್ಮಲ್ಲಿರುವ ಅಪಾರವಾದ ಪ್ರತಿಭೆ, ಸೃಜನಶೀಲತೆ ಇವುಗಳನ್ನು ಗುರುತಿಸಿಕೊಳ್ಳದಿರುವುದು ನಿರಾಸೆಗೆ ಕಾರಣವಾಗಿ ಬಿಡುತ್ತದೆ. ನಮ್ಮನ್ನು ಅನಾರೋಗ್ಯ ಕಾಡಬಹುದು. ಅದು ಭಯಂಕರ ರೋಗವೂ ಆಗಿರಬಹುದು. ರೋಗ ಬಂದಿದೆ ಎಂದ ತಕ್ಷಣ ಜೀವನದಲ್ಲೇನಿದೆ? ನಾನು ಸಾಯುವುದು ಖಂಡಿತಾ ಎಂಬ ನಿರಾಸೆ ನಮ್ಮನ್ನು ಕಾಡಿದರೆ ಬಹಳಷ್ಟು ಬೇಗನೇ ಆರೋಗ್ಯ ಹದಗೆಟ್ಟು ಸಾವಿಗೆ ಶರಣಾಗಿ ಬಿಡುತ್ತೇವೆ.

ಇದರ ಬದಲಿಗೆ ಆ ಬಗ್ಗೆ ಯೋಚಿಸದೆ ನಗು ನಗುತ್ತಾ ಇರಬೇಕು. ಏಕೆಂದರೆ ಆರೋಗ್ಯ ಹದಗೆಟ್ಟಿದ್ದರೂ ಜೀವನದಲ್ಲಿ ನಗು ನಗುತ್ತಾ ಬದುಕುತ್ತಿರುವವರು ಇದ್ದಾರೆ ಎಂಬುದನ್ನು ನಾವು ಮರೆಯಬಾರದು. ಬದುಕೆಂದ ಮೇಲೆ ಕಷ್ಟಗಳು ಬರುತ್ತವೆ. ನೋವುಗಳಿರುತ್ತವೆ. ಆತಂಕ, ತಂಟೆ, ತಕರಾರು, ಸಮಸ್ಯೆ ಎಲ್ಲವೂ ಇದ್ದೇ ಇರುತ್ತದೆ. ಆದರೆ ಅದನ್ನೇ ಯೋಚಿಸುತ್ತಾ ನರಳಾಡಿದರೆ ಯಾವುದೇ ಪರಿಹಾರ ಸಿಗದು.

ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇದೆ

ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಬೆಳಕಿನ ದಾರಿ ಇದ್ದೇ ಇದೆ. ಬುದ್ದಿವಂತರು ತಮ್ಮ ಬುದ್ದಿವಂತಿಕೆಯನ್ನು ಬಳಸಿಕೊಂಡು ಬೆಳಕಿನ ದಾರಿ ಹಿಡಿಯುತ್ತಾರೆ, ಮುನ್ನಡೆಯುತ್ತಾರೆ, ಸಮಸ್ಯೆ ಪರಿಹರಿಸಿಕೊಳ್ಳುತ್ತಾರೆ. ಬುದ್ದಿವಂತನಾದವನು, ವಿವೇಕಿಯಾದವನು, ಚತುರನಾದವನು, ಕ್ರಿಯಾಶೀಲನಾದವನು, ಜ್ಞಾನಿಯಾದವನು ಒಂದು ಸಮಸ್ಯೆಗೆ ನೂರಾರು ಪರಿಹಾರದ ದಾರಿಗಳನ್ನು ಕಂಡು ಹಿಡಿಯುತ್ತಾನೆ. ಆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳುತ್ತಾನೆ.

Hope Is Our Weapon To Overcome Depression

ಜೀವನದಲ್ಲಿ ಆಶಾಭಾವನೆ ಬೇಕು. ಏಕೆಂದರೆ ಬದುಕಿನಲ್ಲಿ ಆಶಾಕಿರಣಗಳ ಹೊಂಬಿಸಿಲು ತುಂಬಿರಬೇಕು. ನಿರಾಶವಾದಿಯಾಗಬಾರದು. ಆಶಾಭಾವನೆಯೇ ಜೀವನ, ನಿರಾಸಭಾವನೆಯೇ ಮರಣ ಎಂದರೆ ತಪ್ಪಾಗಲಾರದು. ಏನೇ ಬಂದರೂ ಹೆಜ್ಜೆ ಮುಂದಿಡುತ್ತೇನೆ. ಸೋಲನ್ನು ಗೆಲ್ಲುತ್ತೇನೆ. ಸೋಲು ಗೆಲುವಿಗೆ ಪ್ರೇರಣೆಯಾಗುತ್ತದೆ. ಸೋಲಿಗೆ ಕಾರಣವನ್ನು ಅವಲೋಕಿಸಿ ಗೆಲುವಿನ ಗುರಿಯನ್ನು ತಲುಪುತ್ತೇನೆ. 'ಸಾಧಿಸಿದರೆ ಸಿದ್ದಿ' ಎಂಬ ಗೆಲುವನ್ನು ಪಡೆದೇ ತೀರುತ್ತೇನೆ ಎಂಬ ಆತ್ಮವಿಶ್ವಾಸದಿಂದ ಬದುಕನ್ನು ಸವಾಲಾಗಿ ಸ್ವೀಕರಿಸಿದರೆ ನಿರಾಸೆಗೆ ಸ್ಥಳವಿಲ್ಲದೆ ಅದು ಪಲಾಯನಗೈಯ್ಯುತ್ತದೆ.

ನಿರಂತರ ಕ್ರಿಯಾಶೀಲರಾಗಿರುವುದು ಅಗತ್ಯ

ಯಾವ ರೀತಿಯ ವ್ಯಕ್ತಿತ್ವವುಳ್ಳವರು ನಿರಾಸೆಗೆ ಶರಣಾಗುವುದಿಲ್ಲ ಎಂಬುವುದನ್ನು ಆಧ್ಯಾತ್ಮಿಕ ಚಿಂತಕರು ಹೀಗೆಯೇ ವಿವರಿಸಿದ್ದಾರೆ. ಸಮಯ ಪರಿಪಾಲನೆ ಮಾಡುವವರಿಗೆ ನಿರಾಸೆಗೆ ಅವಕಾಶವಿಲ್ಲ. ಸಮಸ್ಯೆಗಳು ವಕ್ಕರಿಸಿದರೂ ಸಮಯ ಪರಿಪಾಲನಾಶೀಲವುಳ್ಳವರು ಸಮಸ್ಯೆಯನ್ನು ಪರಿಹರಿಸಿಕೊಳ್ಳುತ್ತಾರೆ. ಸಮಯ ನಿಯೋಜನೆಯ ಗುಣಶೀಲನು ಉನ್ನತ ಮನೋಬಲವುಳ್ಳವನಾಗಿರುತ್ತಾನೆ. ಸಮಯಶೀಲನಿಗೆ ಜೀವನದಲ್ಲಿ ಆತ್ಮವಿಶ್ವಾಸದ ಭರವಸೆಯಿರುತ್ತದೆ.

ಆಶಾಭಾವನೆಯು ರೂಪುಗೊಳ್ಳಲು ಸಮಯಪ್ರಜ್ಞೆ ಮುಖ್ಯವಾಗಿದ್ದು, ಸಮಯ ಪರಿಪಾಲನೆ, ಸದುಪಯೋಗ ಕಾಪಾಡುತ್ತದೆ. ಸಮಯ ಪ್ರಜ್ಞೆಯು ಆಶಾಜ್ಯೋತಿಯನ್ನು ಬೆಳಗಿಸುತ್ತದೆ. ಸೋಮಾರಿಯಾಗಿರದೆ ನಿರಂತರ ಕ್ರಿಯಾಶೀಲ ಚಟುವಟಿಕೆಯಿಂದ ಆಸಕ್ತಿಯಿಂದ ಎಲ್ಲರೊಂದಿಗೆ ಬೆರೆಯುವವರು ನಿರಾಸೆಗೆ ಬಲಿಯಾಗುವುದಿಲ್ಲ. ನೆನಪಿರಲಿ ನಮ್ಮ ದೈಹಿಕ ಶಕ್ತಿಯನ್ನು ಮನೋಬಲದೊಂದಿಗೆ ಬಳಸಿಕೊಂಡರೆ ಸೋಲು ಖಂಡಿತಾ ಬರಲಾರದು. ಸೋಲೇ ಇಲ್ಲ ಎಂದ ಮೇಲೆ ನಿರಾಸೆ ತಾನೆ ಹೇಗೆ ಕಾಡುತ್ತದೆ ಅಲ್ವಾ?.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+