Water Benefits: ಏಳ್ರಿ ಸಾಕು... ಎಷ್ಟು ಕೆಲ್ಸಾ ಮಾಡ್ತೀರಿ.... ಬ್ಯಾಸಗಿ ಐತಿ ಹೆಚ್ಚು ನೀರು ಕುಡಿರಿ... ಇಲ್ಲಂದ್ರ ಮುಗಿತು ಕಥಿ.
ಬೇಸಿಗೆಯಲ್ಲಿ ನೀರಿನ ಅವಶ್ಯಕತೆ ಹೇಳತೀರದು. ಭೂಮಿಯ ಮೇಲ್ಮೈಯು 70 ಪ್ರತಿಶತ ನೀರಿನಿಂದ ಆವೃತವಾಗಿದ್ದರೂ ಎಲ್ಲದು ಕುಡಿಯಲು ಯೋಗ್ಯವಾಗಿಲ್ಲ. ಭಾರತದಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ವಸತಿ ಪ್ರದೇಶಗಳು ಕುಡಿಯುವ ನೀರಿಗಾಗಿ ಸಮಸ್ಯೆಗಳನ್ನು ಎದುರಿಸುತ್ತಿವೆ.
ಹಾಗಂತ ನಾವು ನೀರಿಲ್ಲದೆ ಬದುಕುವುದು ಸಾಧ್ಯವೇ ಇಲ್ಲ. ಯಾಕೆಂದರೆ ನಮ್ಮ ದೇಹದ ಶೇಕಡ 70ರಷ್ಟು ಭಾಗ ನೀರಿನಿಂದ ತುಂಬಿದೆ. ಈ ನೀರು ನಮ್ಮ ದೇಹದಿಂದ ಮೂತ್ರ ಮತ್ತು ಬೆವರಿನ ಮೂಲಕ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಬೇಸಿಗೆಯ ಋತುವಿನಲ್ಲಿ ನಾವು ತುಂಬಾ ಬೆವರುತ್ತೇವೆ. ಬಿಸಿಲಿಗೆ ಕಾಲಿಟ್ಟ ತಕ್ಷಣ ಹಣೆಯಿಂದ ಬೆವರು ಹನಿಯತೊಡಗುತ್ತದೆ. ಇಡೀ ದೇಹ ಬೆವರಲು ಪ್ರಾರಂಭಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿರ್ಜಲೀಕರಣದ ಅಪಾಯ ಹೆಚ್ಚಾಗುತ್ತದೆ.
ನಿರ್ಜಲೀಕರಣ ದೇಹದಲ್ಲಿ ನೀರಿನ ಕೊರತೆಯಾಗಿದೆ. ಅದಕ್ಕಾಗಿಯೇ ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳಲಾಗುತ್ತದೆ. ಬೇಸಿಯಲ್ಲಿ ಹೆಚ್ಚ ನೀರು ಕುಡಿಯಬೇಕು ಎನ್ನಲಾಗುತ್ತದೆಯಾದರೂ ಎಷ್ಟು ನೀರು ಕುಡಿಯಬೇಕು ಎಂದು ಖಚಿತವಾಗಿ ನಮಗೆ ತಿಳಿದಿಲ್ಲ. ಹಾಗಾದರೆ ಬೇಸಿಗೆಯಲ್ಲಿ ಎಷ್ಟು ನೀರು ಕುಡಿಯಬೇಕು.
ವೈದ್ಯರ ಸಲಹೆ ಏನು?
ಬೇಸಿಗೆಯಲ್ಲಿ ಎಷ್ಟು ನೀರು ಕುಡಿಯಬೇಕು ಎಂಬ ವಿಷಯದ ಕುರಿತು ದೆಹಲಿಯ ಸಪ್ತರ್ಜಂಗ್ ಆಸ್ಪತ್ರೆಯ ಡಾ.ಟೀನಾ ಕೌಶಿಕ್ ತಿಳಿಸಿದ್ದಾರೆ. ಬೇಸಿಗೆಯಲ್ಲಿ ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹವು ಆರೋಗ್ಯಕರವಾಗಿರುತ್ತದೆ.

ಸಾಮಾನ್ಯವಾಗಿ ದಿನಕ್ಕೆ 8 ಗ್ಲಾಸ್ ನೀರು ಕುಡಿಯುವುದು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಮಹಿಳೆಯರಿಗೆ 2.7 ಲೀಟರ್ ಮತ್ತು ಪುರುಷರಿಗೆ 3.7 ಲೀಟರ್ ನೀರು ಕುಡಿಯುವುದು ಉತ್ತಮ ಎಂದು ಪರಿಗಣಿಸಲಾಗುತ್ತದೆ. ಆದರೆ ಇದು ಜನರ ಜೀವನಶೈಲಿಗೆ ಅನುಗುಣವಾಗಿ ಬದಲಾಗುತ್ತದೆ.
ಸಾಕಷ್ಟು ನೀರು ಕುಡಿಯುವುದರಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಆದರೆ ನಮ್ಮಲ್ಲಿ ಹೆಚ್ಚಿನವರು ತುಂಬಾ ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯುತ್ತಾರೆ. ಇದು ಸಾಕಷ್ಟು ಪ್ರಯೋಜನಗಳನ್ನು ನೀಡುವುದಿಲ್ಲ. ದಿನಕ್ಕೆ 2 ಲೀಟರ್ನಿಂದ 3 ಲೀಟರ್ ನೀರು ತೆಗೆದುಕೊಳ್ಳುವುದು ಬಹಳ ಮುಖ್ಯ.
ನಿತ್ಯ ಎಷ್ಟು ನೀರು ಕುಡಿಯಬೇಕು?
ಕೆಲವೊಮ್ಮೆ ಈ ಪ್ರಮಾಣವು ಬೇಸಿಗೆಯಲ್ಲಿ ಹೆಚ್ಚು ಮತ್ತು ಕೆಲವೊಮ್ಮೆ ಚಳಿಗಾಲದಲ್ಲಿ ಕಡಿಮೆ ಇರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು ದೇಹದ ಎಲ್ಲಾ ಭಾಗಗಳಿಗೆ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ನಿಮ್ಮ ದೇಹದ ತೂಕಕ್ಕೆ ಅನುಗುಣವಾಗಿ ನೀರು ಕುಡಿಯಬೇಕು ಎಂದು ಟೀನಾ ಕೌಸಿಕ್ ಹೇಳುತ್ತಾರೆ.

ಸಾಮಾನ್ಯವಾಗಿ ಪ್ರತಿಯೊಬ್ಬ ವ್ಯಕ್ತಿಯು ದಿನಕ್ಕೆ 2ರಿಂದ 3 ಲೀಟರ್ ನೀರನ್ನು ಕುಡಿಯಬೇಕು. ಇದು ಕಿಡ್ನಿಯಲ್ಲಿ ಕಲ್ಲಾಗದಂತೆ ನೋಡಿಕೊಳ್ಳುತ್ತದೆ. ಒಬ್ಬ ವ್ಯಕ್ತಿಯು ಮೂತ್ರಪಿಂಡದ ಕಲ್ಲುಗಳನ್ನು ಹೊಂದಿದ್ದರೆ, ಸಾಕಷ್ಟು ನೀರು ಕುಡಿಯುವುದು ಉತ್ತಮ.
ಬೇಸಿಗೆಯಲ್ಲಿ ತಣ್ಣೀರು ಕುಡಿಯಲು ದೇಹ ಪ್ರಚೋದಿಸುತ್ತದೆ. ಆದರೆ ಅದನ್ನು ತಪ್ಪಿಸಲು ಪ್ರಯತ್ನಿಸಿ. ಇದು ಹಸಿವಿನ ಮೇಲೆ ಪರಿಣಾಮ ಬೀರುತ್ತದೆ. ದೇಹವು ಎಂಡೋಟಾಕ್ಸಿನ್ ಅನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ. ಆದ್ದರಿಂದ, ಬೆಚ್ಚಗಿನ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಮಾತ್ರ ಕುಡಿಯಿರಿ.
ಜೀವನಶೈಲಿಯನ್ನು ಅವಲಂಬಿಸಿ ನೀರು ಕುಡಿಯಿರಿ
ನೀವು ಕುಡಿಯುವ ನೀರಿನ ಪ್ರಮಾಣ ನಿಮ್ಮ ಜೀವನಶೈಲಿಯನ್ನು ಅವಲಂಬಿಸಿರುತ್ತದೆ. ಇದು ವ್ಯಕ್ತಿಯ ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಚಟುವಟಿಕೆಯನ್ನು ಅವಲಂಬಿಸಿರುತ್ತದೆ. ಕೆಲವು ಜನರು ತಮ್ಮ ದಿನನಿತ್ಯದ ಹಣ್ಣುಗಳು ಮತ್ತು ತರಕಾರಿಗಳ ಸೇವನೆಯಿಂದ ಹೆಚ್ಚಿನ ನೀರನ್ನು ಪಡೆಯುತ್ತಾರೆ. ಅನೇಕರು ಇದನ್ನು ಮಾಡುವುದಿಲ್ಲ.
ನೀವು ಕೆಲಸ ಮಾಡುವ ವಿಧಾನವನ್ನು ಪರಿಗಣಿಸುವುದು ಸಹ ಮುಖ್ಯವಾಗಿದೆ. ಕೆಲವರು ಕುಳಿತ ಭಂಗಿಯಲ್ಲಿ ಕೆಲಸ ಮಾಡುತ್ತಾರೆ, ಇನ್ನು ಕೆಲವರು ರೆಸ್ಟೊರೆಂಟ್ನಲ್ಲಿ ಸ್ಟೌವ್ ಬಳಿ ನಿಂತು ಕೆಲಸ ಮಾಡುತ್ತಾರೆ. ಗೃಹಿಣಿಯರು ಸಹ ಒಲೆ ಬಳಿ ಅಡುಗೆಮನೆಯಲ್ಲಿ ಕೆಲಸ ಮಾಡುತ್ತಾರೆ. ಅಂತಹ ವ್ಯಕ್ತಿಗಳು ತಮ್ಮ ದೇಹದ ಉಷ್ಣತೆಗೆ ಅನುಗುಣವಾಗಿ ಸಾಕಷ್ಟು ನೀರು ಕುಡಿಯಬೇಕು. ನಿಮ್ಮ ದೇಹವನ್ನು ಹೈಡ್ರೀಕರಿಸಲು ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ. ಇದು ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ.
-
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications