Watermelon Dosa: ಕಲ್ಲಂಗಡಿ ಸಿಪ್ಪೆ ಕಸವಲ್ಲ..ರಸ; ಚಟ್ ಪಟ್ ಅಂತ ಮಾಡಿ ಟೇಸ್ಟಿ ದೋಸೆ
ಕೆಲವೊಂದು ಹಣ್ಣುಗಳು ಬೇಸಿಗೆಯ ಸಮಯದಲ್ಲಿ ಮಾತ್ರ ಹೆಚ್ಚು ಲಭ್ಯವಿರುತ್ತದೆ. ಅದರಲ್ಲಿ ಪ್ರಮುಖವಾಗಿ ಕಲ್ಲಂಗಡಿ ಹಣ್ಣು. ಬೇಸಗೆ ಸಮಯದಲ್ಲಿ ಎಲ್ಲಿ ಹೋದರೂ, ಎಲ್ಲಿ ನೋಡಿದರೂ ಕಲ್ಲಂಗಡಿ ಹಣ್ಣು. ಬೇರೆ ದಿನಗಳಿಗೆ ಹೋಲಿಸಿದರೆ ಬೇಸಿಗೆಯಲ್ಲೇ ಕೊಂಚ ಅಗ್ಗದಲ್ಲೇ ಕಲ್ಲಂಗಡಿ ಹಣ್ಣು ಸಿಗುತ್ತದೆ. ದೇಹವನ್ನು ತಂಪಾಗಿರಿಸಲು ಕಲ್ಲಂಗಡಿ ಹಣ್ಣು ಸಹಾಯ ಮಾಡುತ್ತದೆ. ಜೊತೆಗೆ ಈ ಹಣ್ಣು ರುಚಿ ಕೂಡ ಹೌದು. ಹೀಗಾಗಿ ಹೆಚ್ಚೆಚ್ಚು ಸೇವಿಸಬಹುದು.
ಕಲ್ಲಂಗಡಿ ಹಣ್ಣಿನಲ್ಲಿ ಎಲ್ಲಾ ರೀತಿಯ ಪ್ರೋಟೀನ್, ವಿಟಮಿನ್ಗಳು ಮತ್ತು ನಾರಿನಾಶ ಇರುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಆಯಾಸ ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ ಜೊತೆಗೆ ತೂಕ ಇಳಿಸಲು ಕೂಡ ಸಹಾಯಕಾರಿ. ಉಪಯೋಗ ಇರುವ ಕಲ್ಲಂಗಡಿ ಹಣ್ಣು ಹಾಗೂ ಹಣ್ಣಿನ ಜ್ಯೂಸ್ ಅನ್ನು ಹೆಚ್ಚಾಗಿ ಸೇವಿಸಲಾಗುತ್ತದೆ. ಆದರೆ ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದ ಕೂಡ ಉಪಯೋಗವಿದೆ.

ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಕೆಂಪು ಭಾಗ ಸಿಹಿಯಾಗಿದ್ದು, ಎಲ್ಲರೂ ಅದನ್ನು ಚಪ್ಪರಿಸಿ ತಿನ್ನುತ್ತಾರೆ. ಆದರೆ ಕೆಂಪು ಪದರ ಹಾಗೂ ಹಣ್ಣಿನ ಸಿಪ್ಪೆಯ ತೊಗಟೆ ಮಧ್ಯ ಮತ್ತೊಂದು ಬಳಿ ಭಾಗದ ಪದರವಿರುತ್ತದೆ. ಇದು ಅಷ್ಟೊಂದು ರುಚಿಯಾಗಿರದಿದ್ದರೂ, ಹೆಚ್ಚಿನ ನೀರಿನಾಂಶ ಇರುತ್ತದೆ. ಹೀಗಾಗಿ ಇದು ಆರೋಗ್ಯಕ್ಕೆ ಒಳ್ಳೆಯದು. ಆದ್ದರಿಂದ ಕಲ್ಲಂಗಡಿ ಹಣ್ಣಿನ ಬಿಳಿ ಸಿಪ್ಪೆಯನ್ನು ಬಳಸಿಕೊಂಡು ಮಾಡಬಹುದಾದ ರುಚಿಕರವಾದ ದೊಸೆಯನ್ನು ತಯಾರಿಸುವ ವಿಧಾನ ಇಲ್ಲಿದೆ.
ಕಲ್ಲಂಗಡಿ ತೊಗಟೆ ದೋಸೆಗೆ ಬೇಕಾಗುವ ಸಾಮಾಗ್ರಿಗಳು
ಅಕ್ಕಿ-1 ಕಪ್
ಕಲ್ಲಂಗಡಿ ಸಿಪ್ಪೆ-1 ಕಪ್
ಉದ್ದಿನ ಬೇಳೆ-2 ಚಮಚ
ಮೆಂತ್ಯ ಬೀಜಗಳು-1 ಚಮಚ
ಅವಲಕ್ಕಿ- 1/4 ಕಪ್
ಅಡುಗೆಗೆ ತುಪ್ಪ ಅಥವಾ ಎಣ್ಣೆ
ನಿಮ್ಮ ರುಚಿಗೆ ತಕ್ಕಷ್ಟು ಉಪ್ಪು
ಕಲ್ಲಂಗಡಿ ತೊಗಟೆ ದೋಸೆ ಮಾಡುವ ವಿಧಾನ
ಮೊದಲು ಅಕ್ಕಿಯನ್ನು ತೆಗೆದುಕೊಂಡು ಚೆನ್ನಾಗಿ ತೊಳೆದು 4-5 ಗಂಟೆಗಳ ಕಾಲ ನೆನೆಸಿಡಿ. ಮತ್ತೊಂದು ಪಾತ್ರೆಗೆ ಉದ್ದಿನಬೇಳೆ, ಅವಲಕ್ಕಿ, ಮೆಂತ್ಯ ಬೀಜಗಳನ್ನು ಹಾಕಿ 4-5 ಗಂಟೆಗಳ ಕಾಲ ನೆನೆಸಿಡಿ. ಬಳಿಕ ಕಲ್ಲಂಗಡಿ ಹಣ್ಣಿನ ಸಿಪ್ಪೆ ಅಥವಾ ಬಿಳಿ ಭಾಗವನ್ನು ಸಂಗ್ರಹಿಸಿಟ್ಟುಕೊಳ್ಳಿ. ನೆನೆದ ಬಳಿಕ ಮೊದಲು ಉದ್ದಿನಬೇಳೆ, ಅವಲಕ್ಕಿ, ಮೆಂತ್ಯ ಬೀಜಗಳ ಮಿಶ್ರಣವನ್ನು ರುಬ್ಬಿಕೊಳ್ಳಿ. ಅದಕ್ಕೆ ಕತ್ತರಿಸಿದ ಕಲ್ಲಂಗಡಿ ಹಣ್ಣಿನ ಸಿಪ್ಪೆಯನ್ನು ಸೇರಿಸಿ. ಸ್ವಲ್ಪ ನೀರನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ.

ಬಳಿಕ ನೆನೆಸಿದ ಅಕ್ಕಿಯನ್ನು ಅಗತ್ಯ ನೀರು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಸಹ ಮೊದಲ ಮಿಶ್ರಣದ ಅದೇ ಪಾತ್ರೆಗೆ ಸೇರಿಸಿ. ನಂತರ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಮುಚ್ಚಳವನ್ನು ಮುಚ್ಚಿ ಬೆಚ್ಚಗಿನ ಸ್ಥಳದಲ್ಲಿ 8-10 ಗಂಟೆಗಳ ಕಾಲ ಇಡಿ. ಬಳಿಕ ಹಿಟ್ಟು ಹದವಾದ ನಂತರ ಮತ್ತೆ ಮಿಶ್ರಣ ಮಾಡಿ, ಎಣ್ಣೆ ಅಥವಾ ತುಪ್ಪ ಬಳಸಿ ದೋಸೆ ಮಾಡಿ, ನಿಮ್ಮಿಷ್ಟದ ಚಟ್ನಿ ಅಥವಾ ಪಲ್ಯದೊಂದಿಗೆ ಸವಿಯಿರಿ.
-
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications