Shunti Chutney Recipe: ಮನೆಯಲ್ಲೇ ಖಡಕ್ ಶುಂಠಿ ಚಟ್ನಿ ತಯಾರಿಸುವುದು ಹೇಗೆ..?
ಇನ್ನೇನು ಮಳೆ ಆರಂಭವಾಯ್ತು..ಮಳೆಯ ಜೊತೆಗೆ ಕೆಲವು ಆರೋಗ್ಯ ಸಮಸ್ಯೆಗಳು ಕೂಡ ಆರಂಭವಾಗುತ್ತದೆ. ಒಮ್ಮೆ ಬಿಸಿಲು ಒಮ್ಮೆ ಮಳೆ ಈ ವಾತಾವರಣ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಶೀತ, ಕೆಮ್ಮು ಮತ್ತು ಜ್ವರದಂತಹ ಕಾಯಿಲೆಗಳು ಆರಂಭವಾಗುತ್ತದೆ. ಹೀಗಾಗಿ ಇಂತಹ ಸಮಯದಲ್ಲಿ ಆರೋಗ್ಯವನ್ನು ಕಾಪಾಡುವ ಆಹಾರವನ್ನು ಸೇವಿಸಬೇಕಾಗುತ್ತದೆ. ಈ ಸಮಯದಲ್ಲಿ ಶುಂಠಿ ಸೇವನೆ ಆರೋಗ್ಯಕ್ಕೆ ಒಳ್ಳೆಯದು.
ಶುಂಠಿಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಶುಂಠಿ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೇಹದ ಉಷ್ಣತೆಯನ್ನು ಸಹ ಕಡಿಮೆ ಮಾಡುತ್ತದೆ. ಹೀಗಾಗಿ ಆಹಾರದಲ್ಲಿ ಶುಂಠಿ ಸೇವನೆಯನ್ನು ಅಭ್ಯಾಸ ಮಾಡಿಕೊಳ್ಳಿ. ಆರೋಗ್ಯಕ್ಕೆ ಉಪಯುಕ್ತವಾಗಿರುವ ಶುಂಠಿಯಿಂದ ಸರಳವಾಗಿ ತಯಾರಿಸುವ ಚಟ್ನಿಯ ವಿವರ ಇಲ್ಲಿದೆ.

ಶುಂಠಿ ಚಟ್ನಿ ತಯಾರಿಸಲು ಬೇಕಾಗುವ ಸಾಮಾಗ್ರಿಗಳು
ಕತ್ತರಿಸಿದ ಶುಂಠಿ-1/4 ಕಪ್
ಕೆಂಪು ಮೆಣಸಿನಕಾಯಿ-5-8
ದಾಲ್-1 ಚಮಚ
ಉದ್ದಿನ ಬೇಳೆ-1 ಚಮಚ
ಹುಣಸೆಹಣ್ಣು
ಕರಿಬೇವಿನ ಎಲೆಗಳು
ಅರಿಶಿನ- ಒಂದು ದೊಡ್ಡ ಚಿಟಿಕೆ
ಇಂಗು
ಬೆಲ್ಲ-1/2 ಕಪ್
ಅಡುಗೆ ಎಣ್ಣೆ-2 ಚಮಚ
ಉಪ್ಪು- ನಿಮ್ಮ ರುಚಿಗೆ ತಕ್ಕಷ್ಟು
ಒಗ್ಗರಣೆಗೆ ಬೇಕಾಗುವ ಸಾಮಾಗ್ರಿಗಳು
ಅಡುಗೆ ಎಣ್ಣೆ-1 ಚಮಚ
ಸಾಸಿವೆ- 1/2 ಚಮಚ
ಜೀರಿಗೆ-1/2 ಚಮಚ
ಎಳ್ಳು-1/2 ಚಮಚ
ಕರಿಬೇವಿನ ಎಲೆಗಳು

ಶುಂಠಿ ಚಟ್ನಿ ತಯಾರಿಸುವ ಕ್ರಮ
ಮೊದಲು ಶುಂಠಿಯನ್ನು ತೆಗೆದುಕೊಂಡು ಸಿಪ್ಪೆ ತೆಗೆದು ತೊಳೆದು ಕತ್ತರಿಸಿಕೊಳ್ಳಿ. ಒಂದು ಬಾಣಲೆಯಲ್ಲಿ 2 ಚಮಚ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಕೆಂಪು ಮೆಣಸಿನಕಾಯಿಯನ್ನು ಸೇರಿಸಿ ಸ್ವಲ್ಪ ಸಮಯದವರೆಗೆ ಹುರಿಯಿರಿ. ಕಡಲೆಬೇಳೆ ಮತ್ತು ಉದ್ದಿನಬೇಳೆ ಸೇರಿಸಿ ಮತ್ತು ಕಡಿಮೆ ಉರಿಯಲ್ಲಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಕತ್ತರಿಸಿದ ಶುಂಠಿಯನ್ನು ಸೇರಿಸಿ ಕಡಿಮೆ ಉರಿಯಲ್ಲಿ ಹುರಿಯಲು ಪ್ರಾರಂಭಿಸಿ. ಬಳಿಕ ಹುಣಸೆಹಣ್ಣು ಸೇರಿಸಿ. ನಂತರ ಕರಿಬೇವಿನ ಎಲೆಗಳು, ಅರಿಶಿನ ಮತ್ತು ಇಂಗು ಸೇರಿಸಿ ಕಡಿಮೆ ಉರಿಯಲ್ಲಿ ಹುರಿಯಿರಿ. ಬಳಿಕ ಬೆಲ್ಲ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಹುರಿದುಕೊಂಡು. ಸ್ವಲ್ಪ ಸಮಯದ ನಂತರ ಸ್ಟೌವ್ ಆಫ್ ಮಾಡಿ. ಬಳಿಕ ಈ ಮಿಶ್ರಣ ತಣ್ಣಗಾಗುವರೆಗೂ ಕಾದು ರುಬ್ಬಿಕೊಳ್ಳಿ. ಕೊನೆಯಲ್ಲಿ ಬೇರೆ ಪಾತ್ರೆಗೆ ಈ ಮಿಶ್ರಣವನ್ನು ಹಾಕಿ ಒಗ್ಗರಣೆ ಹಾಕಿದರೆ ರುಚಿ-ರುಚಿಯಾದ ಶುಂಠಿ ಚಟ್ನಿ ಸವಿಯಲು ಸಿದ್ಧವಾಗುತ್ತದೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications