Water Melon Juice: ಬೇಸಿಗೆಯಲ್ಲಿ ದೇಹ ತಂಪಾಗಿಸಲು ಪೆಪ್ಪರ್ ಕಲ್ಲಂಗಡಿ ಜ್ಯೂಸ್ ಸೇವಿಸಿ
ಬೇಸಿಗೆ ಐಳ, ಸೆಕೆಗೆ ಆಗಾಗ ನೀರು ಜ್ಯೂಸ್ ಕುಡಿಯಬೇಕೆನಿಸುವುದು ಸಾಮಾನ್ಯ. ಈ ಬಾರಿಯ ಬೇಸಿಗೆ ಬಿಸಿಲು ಕೂಡ ಜಾಸ್ತಿಯಿದ್ದು, ಇದು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಹೆಚ್ಚೆಚ್ಚು ನೀರು ಹಾಗೂ ಜ್ಯೂಸ್ಗಳನ್ನು ಕುಡಿಯುವ ಮೂಲಕ ದೇಹ ನಿರ್ಜಲೀಕರಣವಾಗದಂತೆ ನೋಡಿಕೊಳ್ಳಬೇಕು.
ಈ ಬೇಸಿಗೆ ಸಮಯದಲ್ಲಿ ಜ್ಯೂಸ್ ಮಾಡಲು ಕೆಲವೊಂದು ಹಣ್ಣುಗಳು ಬೇಸಿಗೆಯ ಸಮಯದಲ್ಲಿ ಮಾತ್ರ ಹೆಚ್ಚು ಲಭ್ಯವಿರುತ್ತದೆ. ಅದರಲ್ಲಿ ಪ್ರಮುಖವಾಗಿ ಕಲ್ಲಂಗಡಿ ಹಣ್ಣು. ಬೇಸಗೆ ಸಮಯದಲ್ಲಿ ಎಲ್ಲಿ ಹೋದರೂ ಕಲ್ಲಂಗಡಿ ಹಣ್ಣು ಹಾಗೂ ಅದರ ಜ್ಯೂಸ್ ಸಿಗುತ್ತದೆ. ದೇಹವನ್ನು ತಂಪಾಗಿರಿಸಲು ಕಲ್ಲಂಗಡಿ ಹಣ್ಣು ಸಹಾಯ ಮಾಡುತ್ತದೆ. ಜೊತೆಗೆ ಈ ಹಣ್ಣು ರುಚಿ ಕೂಡ ಹೌದು. ಹೀಗಾಗಿ ಹೆಚ್ಚೆಚ್ಚು ಸೇವಿಸಬಹುದು.

ಕಲ್ಲಂಗಡಿ ಹಣ್ಣಿನಲ್ಲಿ ಎಲ್ಲಾ ರೀತಿಯ ಪ್ರೋಟೀನ್, ವಿಟಮಿನ್ಗಳು ಮತ್ತು ನಾರಿನಾಶ ಇರುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಆಯಾಸ ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ ಜೊತೆಗೆ ತೂಕ ಇಳಿಸಲು ಕೂಡ ಸಹಾಯಕಾರಿ.
ಇಷ್ಟೆಲ್ಲಾ ಉಪಯೋಗ ಇರುವ ಕಲ್ಲಂಗಡಿ ಹಣ್ಣು ಹಾಗೂ ಹಣ್ಣಿನ ಜ್ಯೂಸ್ ಸೇವಿಸುದರಿಂದ ಕೆಲವರಿಗೆ ಗಂಟಲಿನಲ್ಲಿ ನೋವು, ನೆಗಡಿಯಂತಹ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಅಂತವರು ಕಲ್ಲಂಗಡಿ ಜ್ಯೂಸ್ ಮಾಡುವ ಪೆಪ್ಪರ್ ಅಂದರೆ ಕಾಳುಮೆಣಸಿನ ಪುಡಿ ಬಳಸುವುದು ಉತ್ತಮ. ಹಾಗಾದರೆ ಕಾಳುಮೆಣಸಿನ ಪುಡಿ ಬಳಸಿ ಕಲ್ಲಂಗಡಿ ಜ್ಯೂಸ್ ಮಾಡುವುದು ಹೇಗೆ ತಿಳಿಯಿರಿ.

ಕಲ್ಲಂಗಡಿ ಜ್ಯೂಸ್ ಮಾಡಲು ಬೇಕಾಗುವ ಸಾಮಾಗ್ರಿಗಳು
ಕಲ್ಲಂಗಡಿ ಹಣ್ಣು- 1 ಕಪ್
ಸಕ್ಕರೆ-2 ಚಮಚ ಅಥವಾ ರುಚಿಗೆ ತಕ್ಕಷ್ಟು
ಕಾಳು ಮೆಣಸಿನ ಪುಡಿ-ಒಂದು ಚಿಟಿಕೆ
ಉಪ್ಪು-ಒಂದು ಚಿಟಿಕೆ
ಕಲ್ಲಂಗಡಿ ಜ್ಯೂಸ್ ಮಾಡುವ ವಿಧಾನ
ಮೊದಲು ಕಲ್ಲಂಗಡಿ ಹಣ್ಣನ್ನು ತೊಳೆದು ಸಿಪ್ಪೆ ತೆಗೆದು ಚಿಕ್ಕ ತುಂಡುಗಳಾಗಿ ಕತ್ತರಿಸಿಕೊಳ್ಳಿ. ಬಳಿಕ ಅದರಲ್ಲಿರುವ ಬೀಜಗಳನ್ನು ತೆಗೆದು ಬರೀ ಹಣ್ಣು ಇರುವಂತೆ ಬೇರ್ಪಡಿಸಿ. ನಂತರ ಈ ಕಲ್ಲಂಗಡಿ ಹಣ್ಣಿನ ತುಂಡುಗಳನ್ನು ಮಿಕ್ಸಿ್ ಜಾರಿಗೆ ವರ್ಗಾಯಿಸಿ, ಸಕ್ಕರೆ, ಒಂದು ಚಿಟಿಕೆ ಕಾಳು ಮೆಣಸಿನ ಪುಡಿ, ಒಂದು ಚಿಟಿಕೆ ಉಪ್ಪು ಸೇರಿಸಿ ರುಬ್ಬಿಕೊಳ್ಳಿ. ಬಳಿಕ ಈ ಮಿಶ್ರಣವನ್ನು ಬೇರೆ ಪಾತ್ರೆಗೆ ವರ್ಗಾಯಿಸಿ, ರುಚಿಗೆ ಬೇಕಾದರೆ ಮತ್ತೆ ಸಕ್ಕರೆ ಸೇರಿಸಿ. ಕೊನೆಯಲ್ಲಿ ಉಳಿದ ಕೆಲವು ಕಲ್ಲಂಗಡಿ ಹಣ್ಣಿನ ತುಂಡುಗಳನ್ನು ಜ್ಯೂಸ್ಗೆ ಸೇರಿಸಿ. ಅಗತ್ಯವಿದ್ದರೆ ಐಸ್ ಕ್ಯೂಬ್ಗಳನ್ನು ಸೇರಿಸಿ ಸವಿಯಿರಿ.
-
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ










Click it and Unblock the Notifications