ಮಜಾ ಎನಿಸಿರುವ ಸಿಗರೇಟ್ ಜೀವನವನ್ನೇ ವಜಾ ಮಾಡುತ್ತೆ: ಈ ಚಟ ಬಿಡುವುದು ಹೇಗೆ?
ಈಗಿನ ಯುವಜನತೆಗೆ ಸಿಗರೇಟ್ ಸೇದುವುದು ಫ್ಯಾಷನ್ ಆಗಿದೆ.. ಒಬ್ಬೊಬ್ಬರು ಒಂದೊಂದು ಕಾರಣಗಳನ್ನು ಮುಂದಿಟ್ಟುಕೊಂಡು ಸಿಗರೇಟ್ ಸೇದುವುದು ನಮಗೆ ಕಾಣಿಸುತ್ತದೆ. ಸಿಗರೇಟ್ ಬೆಲೆ ಗಗನಕ್ಕೇರಿದರೂ ಅದನ್ನು ಖರೀದಿ ಮಾಡುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಎಲ್ಲರಿಗೂ ಸಿಗರೇಟ್ ಸೇವನೆ ಆರೋಗ್ಯಕ್ಕೆ ಮಾರಕ ಎಂಬುದು ಗೊತ್ತಿದ್ದರೂ ಅದನ್ನು ಮಾತ್ರ ಬಿಡುತ್ತಿಲ್ಲ.
ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಈ ಚಟಕ್ಕೆ ಹೆಚ್ಚಾಗಿ ಒಳಗಾಗುತ್ತಿರುವುದು ಒಂದಡೆಯಾದರೆ, ಯುವತಿಯರು ಚಟಕ್ಕೆ ಬೀಳುತ್ತಿರುವುದು ಮತ್ತೊಂದು ದುರಂತವಾಗಿದೆ. ಮೊದ ಮೊದಲು ಅದು ಖಷಿಗಾಗಿಯೇ ಆರಂಭವಾದರೂ ಕ್ರಮೇಣ ಚಟವಾಗಿ ಪರಿವರ್ತನೆಗೊಳ್ಳುತ್ತದೆ. ಆ ನಂತರ ಸಿಗರೇಟ್ ಇಲ್ಲವೆಂದರೆ ಜಗತ್ತೇ ಶೂನ್ಯವಾಗಿ ಬಿಡುತ್ತದೆ. ಏಕೆಂದರೆ ಸಿಗರೇಟಿನಲ್ಲಿರುವ ನಿಕೋಟಿನ್ ಮತ್ತೆ ಮತ್ತೆ ಸೇದುವಂತೆ ಮಾಡಿ ಸಿಗರೇಟಿಗೆ ದಾಸರಾಗುವಂತೆ ಮಾಡಿಬಿಡುತ್ತದೆ.

ಸಿಗರೇಟ್ ನಿಂದ ಆರೋಗ್ಯಕ್ಕೂ ಒಳ್ಳೆಯದಾಗುವುದಿಲ್ಲ. ಜತೆಗೆ ಜೇಬಿಗೂ ಕತ್ತರಿ. ಈ ವಿಚಾರ ನಮಗೆಲ್ಲರಿಗೂ ಗೊತ್ತಿದ್ದರೂ ಮತ್ತೆ, ಮತ್ತೆ ಅದನ್ನೇ ಮಾಡುತ್ತಿದ್ದೇವೆ. ಈಗೀಗ ಸಿಗರೇಟ್ ಸೇದುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾನ್ಸರ್ ಕಾಣಿಸುತ್ತಿದೆ. ಇನ್ನು ಉಸಿರಾಟಕ್ಕೆ ಅಡಚಣೆ, ಕೆಮ್ಮು, ಕಫ, ಶ್ವಾಸಕೋಸದ ತೊಂದರೆ, ದೈಹಿಕ ಅಸಮರ್ಥತೆ ಹೀಗೆ ಹತ್ತು ಹಲವು ಸಮಸ್ಯೆಗಳಿವೆ ಎಂಬುದು ಗೊತ್ತಿದ್ದರೂ ಅದನ್ನು ಬಿಟ್ಟು ಬದುಕಲು ಸಾಧ್ಯವಾಗುತ್ತಿಲ್ಲ.
ಸಿಗರೇಟ್ ಬಿಡುವುದು ಅಷ್ಟೊಂದು ಕಷ್ಟವೇ?
ಯೌವನದಲ್ಲಿ ಏನೇ ಮಾಡಿದರೂ ಅದು ಮಜಾವಾಗಿ ಕಾಣಿಸುತ್ತದೆ. ಆದರೆ ವಯಸ್ಸಾಗುತ್ತಾ ಅದರ ಪರಿಣಾಮಗಳು ನಮ್ಮ ಆರೋಗ್ಯದಲ್ಲಿ ಗೋಚರಿಸುತ್ತದೆ. ಆರೋಗ್ಯ ಕೈಕೊಟ್ಟು ಆಸ್ಪತ್ರೆ ಸೇರಿದಾಗ ಸಿಗರೇಟ್ನ ಕರಾಮತ್ತು ಗೊತ್ತಾಗಿ ಬಿಡುತ್ತದೆ. ನಮ್ಮ ಕಾಯಿಲೆಯಲ್ಲಿ ಅದರ ಪಾತ್ರ ಎಷ್ಟಿದೆ ಎಂಬುದು ಅರಿವಿಗೆ ಬರುತ್ತದೆ. ಆದರೆ ಅದರಿಂದ ಹೊರ ಬರಲಾರದೆ ಒದ್ದಾಡುತ್ತಾರೆ.
ಬಹಳಷ್ಟು ಜನರು ಸಿಗರೇಟ್ ಬಿಟ್ಟೇ ಬಿಡುತ್ತೇವೆ ಎಂದು ಒಂದೆರಡು ದಿನ ಕಷ್ಟಪಟ್ಟು ಕಣ್ಮುಚ್ಚಿ ಕುಳಿತು ಕೊಳ್ಳುತ್ತಾರೆಯಾದರೂ ಮತ್ತೆ ಮನಸ್ಸು ತಡೆಯದೆ ಸೇದಿ ಬಿಡುತ್ತಾರೆ. ಇಷ್ಟಕ್ಕೂ ಸಿಗರೇಟ್ ಬಿಡುವುದು ಅಷ್ಟೊಂದು ಕಷ್ಟವೇ? ಮನಸ್ಸು ದೃಢವಾಗಿದ್ದರೆ ಯಾವುದೂ ಕಷ್ಟವಲ್ಲ ಅಂತಹದೊಂದು ಸಂಕಲ್ಪವನ್ನು ಮಾಡಬೇಕಷ್ಟೆ. ಇವತ್ತಿನ ದಿನಗಳಲ್ಲಿ ಬೀಡಿ ಸಿಗರೇಟ್ ದುಬಾರಿಯಾಗಿದೆ. ಅದನ್ನು ಬಿಟ್ಟರೆ ಆರೋಗ್ಯ ಮಾತ್ರವಲ್ಲ, ಆರ್ಥಿಕವಾಗಿಯೂ ಸದೃಢರಾಗಲು ಸಾಧ್ಯವಿದೆ. ದುಶ್ಚಟಗಳನ್ನು ಕಲಿಯುವುದು ಸುಲಭ ಆದರೆ ಅದನ್ನು ತ್ಯಜಿಸುವುದು ಕಷ್ಟದ ಕೆಲಸ. ಆದರೆ ಗಟ್ಟಿ ಮನಸ್ಸು ಮಾಡಿ ಅದಕ್ಕೆ ತಿಲಾಂಜಲಿ ಹೇಳುವ ಪ್ರಯತ್ನ ಮಾಡಬೇಕಷ್ಟೆ.

ತಜ್ಞರು ಹೇಳುವ ಆ ಸಂಗತಿ ಏನು?
ತಜ್ಞರು ಹೇಳುವ ಪ್ರಕಾರ ಧೂಮಪಾನ ಮಾಡುವುದನ್ನು ಬಿಟ್ಟರೆ, ಆ ನಂತರ ವಿಟಮಿನ್- ಇ ಮಾತ್ರೆಗಳನ್ನು ಒಂದಷ್ಟು ಪ್ರಮಾಣದಲ್ಲಿ ಸೇವಿಸಬೇಕಂತೆ. ಇದರಿಂದ ಹೃದಯದ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವಂತೆ. ಈ ಸಂಗತಿಯನ್ನು ಅಮೆರಿಕದಲ್ಲಿರುವ ಓಹಿಯೋ ಸ್ಟೇಟ್ ಯೂನಿವರ್ಸಿಟಿ ಸಂಶೋಧಕರು ತಿಳಿಸಿದ್ದಾರೆ.
ಇದರ ಜೊತೆಗೆ ಇ ವಿಟಮಿನ್ ನಿಂದ ಹೃದಯಕ್ಕೆ ಯಾವುದೇ ಸಮಸ್ಯೆ ಉಂಟಾಗದು. ರಕ್ತ ಪ್ರಸಾರ ಸುಗಮವಾಗಿರುತ್ತದೆ ಎಂದು ಅಧ್ಯಯನ ಸಂದರ್ಭದಲ್ಲಿ ಗಮನಿಸಿದ್ದಾರೆ. ಅಲ್ಲದೇ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಶೇ. 19ರಷ್ಟು ಕಡಿಮೆಯಾಗುತ್ತದೆಯಂತೆ. ಒಂದು ವಾರದಷ್ಟು ಸಮಯ ಧೂಮಪಾನ ಮಾಡದೆ ಇದ್ದವರಲ್ಲಿ ಶೇ.2.8 ರಷ್ಟು ರಕ್ತ ಪ್ರಸಾರದ ವ್ಯವಸ್ಥೆ ಸುಗಮವಾಗಿರುತ್ತಂತೆ. ವಿಟಮಿನ್ 'ಇ' ಯನ್ನು ಗಾಮ ಟೋಕೋಫೆರಾಲ್ ರೂಪದಲ್ಲಿ ಸೇವಿಸಿದರಲ್ಲಿ ಶೇ.1.5ರಷ್ಟು ವೃದ್ಧಿ ಕಂಡು ಬಂದ ಸಂಗತಿಯನ್ನು ವಿಜ್ಞಾನಿಗಳು ಹೊರಗೆಡವಿದ್ದಾರೆ.
ಧೂಮಪಾನ ಆರೋಗ್ಯಕ್ಕೆ ಹಾನಿಕರ
ಇವತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದು ಎಂಬ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದರೂ, ಬೀಡಿ ಸಿಗರೇಟಿನ ಬೆಲೆ ಗಗನಕ್ಕೇರಿದ್ದರೂ ಅದರ ಬಳಕೆ ಮಾಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಅದನ್ನು ಬಿಟ್ಟು ಬದುಕುವವರು ಕಡಿಮೆಯೇ. ಅದರಲ್ಲೂ ಯುವಕರಂತು ಸಿಗರೇಟ್ ಹಿಡಿದುಕೊಂಡು ಕುಳಿತುಕೊಳ್ಳುತ್ತಿರುವ ದೃಶ್ಯಗಳು ಟೀ ಅಂಗಡಿಗಳಲ್ಲಿ ಕಂಡು ಬರುತ್ತಿವೆ.
ಸಿಗರೇಟಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟು ತೊಂದರೆಯಿದೆ ಎಂದು ಗೊತ್ತಿದ್ದರೂ ಅದನ್ನೇ ಮಾಡುವುದು ಕಂಡು ಬರುತ್ತಿದೆ. ಹೀಗಾಗಿ ಮೊದಲಿಗೆ ಯುವ ಜನತೆ ಸಿಗರೇಟಿನ ಚಟಕ್ಕೆ ಬೀಳದಂತೆ ತಡೆಯಬೇಕಾಗಿದೆ. ಸಿಗರೇಟಿನಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಕೆಲಸವೂ ನಡೆಯಬೇಕಾಗಿದೆ. ಇಲ್ಲದೆ ಹೋದರೆ ಯುವ ಜನತೆ ಸಿಗರೇಟಿನಿಂದಲೇ ಜೀವನವನ್ನು ಹಾಳುಮಾಡಿಕೊಳ್ಳುವುದರಲ್ಲಿ ಎರಡು ಮಾತಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications