ಸೋಲು-ಗೆಲುವಿನ ಹೋರಾಟದ ಬದುಕಿನಲ್ಲಿ ನೆಮ್ಮದಿ ಶೂನ್ಯ!
ಹಿಂದಿನ ಕಾಲದಲ್ಲಿ ಹೊಟ್ಟೆಬಟ್ಟೆಗಿದ್ದರೆ ಸಾಕು. ಅಷ್ಟಕ್ಕೆ ಸಂಪಾದನೆ ಮಾಡಿಕೊಂಡು ನೆಮ್ಮದಿಯಾಗಿರುತ್ತಿದ್ದರು. ಬೇರೆಯವರನ್ನು ನೋಡಿ ಹಲಬುವ ಬದಲು ಅವರನ್ನು ಪ್ರೋತ್ಸಾಹಿಸುತ್ತಿದ್ದರು. ಈಗ ಹಾಗಿಲ್ಲ ಕಾಲ ಬದಲಾಗಿದೆ. ಎಲ್ಲ ಕ್ಷೇತ್ರದಲ್ಲೂ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಸದಾ ಗೆಲುವಿನತ್ತಲೇ ಗುರಿಯಿಟ್ಟುಕೊಂಡು ಮುನ್ನಡೆಯುವುದು ಅನಿವಾರ್ಯವಾಗಿದೆ. ಗೆಲುವಿಗಾಗಿ ತಂತ್ರ, ಕುತಂತ್ರ, ಅನ್ಯಾಯ, ಭ್ರಷ್ಟಾಚಾರ ಹೀಗೆ ನಮ್ಮಿಂದ ಏನೆಲ್ಲಾ ಮಾಡಲು ಸಾಧ್ಯವೋ ಅದೆಲ್ಲವನ್ನು ಮಾಡುತ್ತಾ ಸಾಗುತ್ತಿದ್ದೇವೆ.
ಆದರೆ ಇದರಿಂದ ಹೇರಳ ಹಣವನ್ನು ಸಂಪಾದಿಸಿ ಕೂಡಿಡುತ್ತಿದ್ದರೂ ಅದರಿಂದ ದೈಹಿಕ ಮತ್ತು ಮಾನಸಿಕ ಎರಡು ಆರೋಗ್ಯವೂ ಇಲ್ಲದಾಗಿದೆ. ನಾವು ಏನೇ ಮಾಡಿದರೂ ನಮಗೊಬ್ಬ ಪ್ರತಿಸ್ಪರ್ಧಿ ಎಲ್ಲಿ ಹುಟ್ಟಿಬಿಡುತ್ತಾನೋ ಎಂಬ ಭಯ ನಮ್ಮನ್ನು ಸದಾ ಕಾಡುತ್ತಲೇ ಇರುತ್ತದೆ. ಹೀಗಾಗಿ ನೆಮ್ಮದಿಯಿಲ್ಲದ ಹೋರಾಟದ ಬದುಕಿಗೆ ಹೊಂದಿಕೊಂಡು ಸಾಗುತ್ತಿದ್ದೇವೆ. ಇಷ್ಟಕ್ಕೂ ನಾವು ಸಂಪಾದನೆಗಾಗಿ ಅನ್ಯ ಮಾರ್ಗವನ್ನಿಡಿದು ಸಂಪಾದಿಸಿದ್ದರೂ ಮಾನಸಿಕ ನೆಮ್ಮದಿ ಸಿಕ್ಕಿದೆಯಾ? ಆರೋಗ್ಯವಾಗಿದ್ದೇವೆಯೇ? ನೆಮ್ಮದಿಯ ನಿದ್ದೆ ಬಂದಿದೆಯಾ ಹೀಗೆ ಪ್ರಶ್ನೆಗಳನ್ನು ಕೇಳುತ್ತಾ ಹೋದರೆ ಹೆಚ್ಚಿನವುಗಳಿಗೆ ಇಲ್ಲ ಎಂಬ ಉತ್ತರವೇ ಬರುತ್ತದೆ.

ಈಗಿನ ತೋರಿಕೆಯ ಬದುಕಿನಲ್ಲಿ ನಾಲ್ಕು ಜನರ ಮುಂದೆ ತಮ್ಮ ಐಶ್ವರ್ಯ, ಸಂಪತ್ತು, ಐಷಾರಾಮಿ ಜೀವನವನ್ನು ತೋರ್ಪಡಿಸಬೇಕು. ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂಬ ಒಂದೇ ಒಂದು ಕಾರಣಕ್ಕೆ ಅಥವಾ ಅಕ್ರಮವಾಗಿ ಮಾಡಿದ ಸಂಪಾದನೆಯಲ್ಲಿ ಒಂದಷ್ಟನ್ನು ಸಮಾಜಕ್ಕೆ ದಾನ ಮಾಡಿ ಅಲ್ಲೂ ಪ್ರಚಾರ ಗಿಟ್ಟಿಸಿಕೊಳ್ಳುವ ಕಾರ್ಯವನ್ನು ಮಾಡುವ ಹಲವರು ತಮ್ಮೊಂದಿಗಿದ್ದಾರೆ. ಅವರು ಮಾಡುತ್ತಿರುವುದು ನಿಜಕ್ಕೂ ಸ್ವಾರ್ಥ ರಹಿತ ಸಮಾಜ ಸೇವೆನಾ? ಖಂಡಿತಾ ಅಲ್ಲ. ಅದು ತಮ್ಮ ಬೇಳೆ ಬೇಯಿಸಿಕೊಳ್ಳುವ ಮತ್ತು ತಮ್ಮ ಗೆಲುವಿಗಾಗಿ ಮಾಡಿಕೊಳ್ಳುತ್ತಿರುವ ಭದ್ರತೆ ಅಷ್ಟೆ.
ಜೀವನದಲ್ಲಿ ಸೋಲು ಗೆಲುವು ಸಹಜ
ಮನುಷ್ಯ ಜೀವನದಲ್ಲಿ ಸೋಲು ಗೆಲುವು ಸಹಜ. ಗೆಲುವಿಗೆ ಹಿಗ್ಗದೆ ಸೋಲಿಗೆ ಕುಗ್ಗದೆ ಎರಡನ್ನೂ ಸಮನಾಗಿ ಸ್ವೀಕರಿಸುವ ಮನಸ್ಥಿತಿ ತಮ್ಮದಾಗಿರಬೇಕು. ಸದಾ ಗೆಲುವೇ ನಮ್ಮದಾಗಿರುತ್ತೆ ಎಂಬ ಭ್ರಮೆಯಿಂದ ಹೊರಬರಬೇಕು. ಏಕೆಂದರೆ ತಲೆಗೆ ಹಾಕಿದ ನೀರು ಕಾಲಿಗೆ ಬರುತ್ತೆ ವಿನಃ ಕಾಲಿಗೆ ಹಾಕಿದ ನೀರು ತಲೆಗೆ ಬರುವುದಿಲ್ಲ. ಇದನ್ನು ಅರ್ಥ ಮಾಡಿಕೊಂಡು ಜೀವನ ನಡೆಸುವುದು ಅಗತ್ಯವಿದೆ. ಒಬ್ಬ ಗೆದ್ದಿದ್ದಾನೆ ಎಂದಾದರೆ ಮತ್ತೊಬ್ಬ ಸೋತಿದ್ದಾನೆ ಎಂದರ್ಥ. ಆಧ್ಯಾತ್ಮದಲ್ಲಿ ಚಿಂತಕರು ಹೇಳುತ್ತಾರೆ. ನಾವು ಬೇರೆಯವರನ್ನು ಗೆಲ್ಲುವುದರಲ್ಲಿ ಯಾವ ಶೂರತ್ವವೂ ಇಲ್ಲ. ನಾವು ನಮ್ಮನ್ನು ಗೆಲ್ಲುವುದರಲ್ಲಿ ನಿಜವಾದ ಶೂರತ್ವ ಅಡಗಿದೆ.

ಸೋತವನೂ ಮಾತ್ರ ಗೆಲುವನ್ನು ಅರ್ಥ ಮಾಡಿಕೊಳ್ಳಬಲ್ಲ. ಅಷ್ಟೇ ಅಲ್ಲ ಅದನ್ನು ಕಾಪಾಡಿಕೊಳ್ಳಬಲ್ಲ. ಆದರೆ ಗೆದ್ದವನು ಸೋತರೆ ಕಂಗಾಲಾಗಿ ಬಿಡುತ್ತಾನೆ. ಇಲ್ಲಿಗೆ ಬದುಕೇ ಮುಗಿದು ಹೋಯಿತು ಎಂದುಕೊಳ್ಳುತ್ತಾನೆ. ಹಾಗಾಗಿ ಗೆಲುವಿನ ಹಿಂದೆಯೇ ಸೋಲಿನ ನೆರಳಿದೆ ಎಂಬ ಎಚ್ಚರಿಕೆಯನ್ನು, ಸೋತವನು ನಾಳೆ ನಮಗೂ ಗೆಲುವಿದೆ ಎಂಬ ಭರವಸೆಯ ಬೆಳಕಲ್ಲಿ ಬದುಕಬೇಕು. ಸೋಲು ಗೆಲುವು ಎರಡನ್ನು ಸಮಾನವಾಗಿ ಎದುರಿಸಲು ಮಾನಸಿಕವಾಗಿ ತಯಾರಿ ಮಾಡಿಕೊಳ್ಳಬೇಕು.
ಗೆಲುವಿನ ಖುಷಿಯಲ್ಲಿ ಮೈಮರೆಯ ಬಾರದು
ಗೆಲುವು ಒಂದೇ ಆದರೂ ಅದನ್ನು ಅನುಭವಿಸುವ ಮನಸ್ಥಿತಿ ಮಾತ್ರ ವಿಭಿನ್ನವಾಗಿರುತ್ತದೆ. ಜೂಜಿನಲ್ಲಿ ಗೆದ್ದವನಿಗೂ, ಕಷ್ಟಪಟ್ಟು ಆಟವಾಡಿ ಗೆದ್ದ ಕ್ರೀಡಾಪಟುವಿಗೂ ಗೆಲುವು ಒಂದೇ ಆದರೂ ಮನಸ್ಥಿತಿ ಬೇರೆಯಾಗಿರುತ್ತದೆ. ಇಬ್ಬರಿಗೂ ಗೆಲುವು ಹಣದ ರೂಪದಲ್ಲೇ ಬಂದಿದ್ದರೂ ಒಂದರಲ್ಲಿ ಸಿಕ್ಕ ತೃಪ್ತಿ, ಸಾರ್ಥಕ್ಯ ಮತ್ತೊಂದರಲ್ಲಿ ಇಲ್ಲ.
ಕೆಲವೊಮ್ಮೆ ಗೆದ್ದವನು ಗೆಲುವಿನ ಖುಷಿಯಲ್ಲಿ ಮೈಮರೆತು ತಟಸ್ಥನಾಗಿಬಿಡಬಹುದು. ಆದರೆ ಸೋತವನು ಚಲನಶೀಲನಾಗಿರುತ್ತಾನೆ. ಆತ ಗೆಲುವಿಗಾಗಿ ಶ್ರಮಪಡುತ್ತಿರುತ್ತಾನೆ. ಅವನಲ್ಲಿ ಒಂದೇ ಒಂದು ಗುರಿ ಅದು ಗೆಲುವು. ಆ ಗೆಲುವಿಗಾಗಿ ಅವನು ಅವಿರತ ಶ್ರಮಿಸುತ್ತಿರುತ್ತಾನೆ. ಹಾಗಾಗಿ ಮುಂದೆ ಗೆದ್ದರೂ ಆ ಗೆಲುವನ್ನು ಜತನದಿಂದ ಕಾಯ್ದುಕೊಳ್ಳುತ್ತಾನೆ. ಏಕೆಂದರೆ ಸೋಲು ಅವನಿಗೆ ಗೆಲುವಿನ ಪಾಠ ಕಲಿಸಿರುತ್ತದೆ ಎನ್ನುವುದಂತು ಸತ್ಯ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications