Rava Coconut Burfi Recipe: ಕೇವಲ 3 ಸಾಮಾಗ್ರಿಗಳಿಂದ ಸಂಜೆ 15 ನಿಮಿಷದಲ್ಲಿ ರುಚಿಕರವಾದ ಸಿಹಿ ತಯಾರಿಸಿ...
ಸಾಮಾನ್ಯವಾಗಿ ಬಹುತೇಕ ಮನೆಗಳಲ್ಲಿ ಹಬ್ಬಕ್ಕೆ ಮಾತ್ರ ಸಿಹಿ ತಿಂಡಿಗಳನ್ನು ಮಾಡಲಾಗುತ್ತದೆ. ಆದರೆ ಮನೆಯಲ್ಲಿ ಮಕ್ಕಳಿದ್ದರೆ ಆಗಾಗ ಸಿಹಿ ತಿಂಡಿ ತಿನ್ನಲು ಬಯಸುತ್ತಾರೆ. ಆಗ ಹೊರಗಿನ ಸಿಹಿ ತಿಂಡಿಗಳಿಗಿಂತ ಮನೆಯಲ್ಲಿ ಮಾಡುವ ಸಿಹಿ ತಿಂಡಿಗಳನ್ನು ಮಕ್ಕಳಿಗೆ ಕೊಡುವುದು ಸೂಕ್ತ. ಹೀಗಾಗಿ ಇಂದು ನಾವು ನಿಮಗೆ ರವಾ ತೆಂಗಿನಕಾಯಿ ಬರ್ಫಿ ತಯಾರಿಸುವ ವಿಧಾನವನ್ನು ಹೇಳಿಕೊಡುತ್ತೇವೆ.
ಇದು ಹೆಚ್ಚು ರುಚಿಯಾಗಿರುತ್ತದೆ. ಅಲ್ಲದೆ ಮನೆಯಲ್ಲಿರುವ ಮೂರೇ ಪದಾರ್ಥಗಳಿಂದ ಸುಲಭವಾಗಿ ಇದನ್ನು ತಯಾರಿಸಬಹುದು. ಹಾಗಾದರೆ ತಡ ಮಾಡುವುದು ಬೇಡ ರವಾ ತೆಂಗಿನಕಾಯಿ ಬರ್ಫಿ ತಯಾರಿಸುವುದು ಹೇಗೆ ಎನ್ನುವುದನ್ನು ತಿಳಿಯೋಣ. ನೀವು ಕೂಡ ಮನೆಯಲ್ಲಿ ಇದನ್ನು ಒಮ್ಮೆ ಟ್ರೈ ಮಾಡಿ. ನಿಮ್ಮ ಅನುಭವವನ್ನು ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

ಅಗತ್ಯವಿರುವ ವಸ್ತುಗಳು:
* ತೆಂಗಿನ ತುರಿ - 1 ಕಪ್
* ರವೆ - 1/2 ಕಪ್
* ಸಕ್ಕರೆ - 1 1/4 ಕಪ್
* ನೀರು - 1/2 ಕಪ್
* ಉಪ್ಪು - 1 ಚಿಟಿಕೆ
* ಏಲಕ್ಕಿ - 1/4 ಟೀಸ್ಪೂನ್
* ತುಪ್ಪ - 2 ಟೀಸ್ಪೂನ್

ರವಾ ತೆಂಗಿನಕಾಯಿ ಬರ್ಫಿ ತಯಾರಿಸುವ ವಿಧಾನ:
* ಮೊದಲು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ತೆಂಗಿನ ತುರಿಯನ್ನು ಹಾಕಿ ಸ್ವಲ್ಪ ಹುರಿದು ತಟ್ಟೆಯಲ್ಲಿ ಇಟ್ಟುಕೊಳ್ಳಿ.
* ನಂತರ ರವೆ ಹಾಕಿ ಸ್ವಲ್ಪ ಬಣ್ಣ ಬದಲಾಗುವವರೆಗೆ ಹುರಿಯಿರಿ ಮತ್ತು ತೆಂಗಿನಕಾಯಿಯೊಂದಿಗೆ ಬೆರೆಸಿ ತೆಗೆದಿಟ್ಟುಕೊಳ್ಳಿ.
* ನಂತರ ಅದೇ ಬಾಣಲೆಯಲ್ಲಿ ಸಕ್ಕರೆ ಹಾಕಿ ನೀರು ಸುರಿದು ಅದಕ್ಕೆ 1 ಚಿಟಿಕೆ ಉಪ್ಪು ಮತ್ತು ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಕಿ. ಸಕ್ಕರೆ ಪಾಕ ಮಾಡಿಕೊಳ್ಳಿ.
* ನಂತರ ಅದಕ್ಕೆ 1 ಚಮಚ ತುಪ್ಪ ಹಾಕಿ ಚೆನ್ನಾಗಿ ಕಲಕಿ ಮಧ್ಯಮ ಉರಿಯಲ್ಲಿ ಇಟ್ಟು ನೊರೆ ಬರುವವರೆಗೆ ಕುದಿಸಿ.
* ನಂತರ ಅದಕ್ಕೆ ಹುರಿದ ಕೊಬ್ಬರಿ ಮತ್ತು ರವೆ ಹಾಕಿ
* ಇದು ಬಾಣಲೆಗೆ ಅಂಟಿಕೊಳ್ಳದಂತೆ ಚೆನ್ನಾಗಿ ಕಲಿಸಬೇಕು
* ನಂತರ ತಟ್ಟೆಗೆ ತುಪ್ಪ ಸವರಿ ಈ ಮಿಶ್ರಣವನ್ನು ಹರಡಿ ತಣ್ಣಗಾಗಲು ಬಿಡಿ. ನಂತರ ಅದನ್ನು ಚಾಕುವಿನಿಂದ ಚೌಕಾಕಾರದ ತುಂಡುಗಳಾಗಿ ಕತ್ತರಿಸಿದರೆ ರುಚಿಕರವಾದ ರವಾ ತೆಂಗಿನಕಾಯಿ ಬರ್ಪಿ ರೆಡಿ.
-
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications