Tricolor Barfi Recipe: ತ್ರಿವರ್ಣ ಬರ್ಫಿ ತಯಾರಿಸಿ ಮನೆಯವರಿಂದ ಮೆಚ್ಚುಗೆ ಪಡೆಯಿರಿ
ನಾವು ಇಂದು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ. ಸಾಮಾನ್ಯವಾಗಿ ಈ ದಿನ ನಾವೆಲ್ಲಾ ಸಿಹಿ ಹಂಚಿ ಸಂಭ್ರಮಿಸುತ್ತೇವೆ. ಸ್ವಾತಂತ್ರ್ಯ ದಿನ ಪ್ರತಿಯೊಬ್ಬ ಭಾರತೀಯನಿಗೂ ಬಹಳ ಮುಖ್ಯವಾದ ದಿನವಾಗಿದೆ. ಈ ದಿನ ನೀವು ನಿಮ್ಮ ಕುಟುಂಬ ಸದಸ್ಯರಿಗೆ ಸಿಹಿತಿಂಡಿಗಳನ್ನು ತಯಾರಿಸಿಕೊಡಲು ಬಯಸಿದ್ದರೆ ತ್ರಿವರ್ಣ ಸಿಹಿಯನ್ನು ತಯಾರಿಸಿ.
ಸಾಮಾನ್ಯವಾಗಿ ಮನೆಯಲ್ಲಿ ವಿಶೇಷ ದಿನಗಳಲ್ಲಿ ಪಾಯಸ, ಕೇಸರಿಬಾತ್ ಮಾಡುವುದು ರೂಢಿ. ಆದರೆ ಅದರ ಬದಲಿಗೆ ಇಂದು ಮನೆಯಲ್ಲಿ ದೇಶಭಕ್ತಿಯನ್ನು ವ್ಯಕ್ತಪಡಿಸಲು ತ್ರಿವರ್ಣ ಬರ್ಫಿ ತಯಾರಿಸಿ. ನೀವು ಇದನ್ನು ಮಾಡಿದಾಗ ಮಕ್ಕಳು ಖುಷಿಯಿಂದ ಅದನ್ನು ಸೇವಿಸುತ್ತಾರೆ. ಜೊತೆಗೆ ಇದರಿಂದ ಮನೆ ಮಂದಿಯೆಲ್ಲರನ್ನು ನೀವು ಖುಷಿ ಪಡಿಸಬಹುದು.

ಹಾಗಾದರೆ ತ್ರಿವರ್ಣ ಬರ್ಪಿಯನ್ನು ಹೇಗೆ ತಯಾರಿಸಬೇಕೆಂದು ತಿಳಿಯೋಣ. ನೀವು ಇದನ್ನು ಮನೆಯಲ್ಲಿ ಒಂದು ಬಾರಿ ಟ್ರೈ ಮಾಡಿ. ಇದರ ಅನುಭವವನ್ನು ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ. ಹಾಗಾದರೆ ತಡ ಮಾಡುವುದು ಬೇಡ ತ್ರಿವರ್ಣ ಬರ್ಫಿ ತಯಾರಿಸುವುದು ಹೇಗೆ ಎಂದು ತಿಳಿಯೋಣ.
ಅಗತ್ಯವಿರುವ ಸಾಮಗ್ರಿಗಳು:
* ತುಪ್ಪ - 1/2 ಕಪ್
* ಮೈದಾ - 1 ಕಪ್
* ಸಕ್ಕರೆ - 2 ಕಪ್
* ನೀರು - 1 ಕಪ್
* ಏಲಕ್ಕಿ ಪುಡಿ - 1/4 ಟೀಸ್ಪೂನ್
* ಹಸಿರು ಆಹಾರ ಬಣ್ಣ - 1/4 ಟೀಸ್ಪೂನ್
* ಕೇಸರಿ ಆಹಾರ ಬಣ್ಣ - 1/4 ಟೀಸ್ಪೂನ್
ಪಾಕವಿಧಾನ:
* ಮೊದಲು ಬಾಣಲೆಯನ್ನು ಒಲೆಯ ಮೇಲೆ ಇಟ್ಟು 1/2 ಕಪ್ ತುಪ್ಪ ಹಾಕಿ ಬಿಸಿ ಮಾಡಿ.
* ನಂತರ 1 ಕಪ್ ಮೈದಾ ಹಿಟ್ಟನ್ನು ಹಾಕಿ 2 ನಿಮಿಷ ಉಂಡೆಗಳಿಲ್ಲದೆ ಚೆನ್ನಾಗಿ ಕದಡಿ.
* ನಂತರ ಇನ್ನೊಂದು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ 2 ಕಪ್ ಸಕ್ಕರೆ ಮತ್ತು 1 ಕಪ್ ನೀರು ಹಾಕಿ ಬೆರೆಸಿ.
* ಸಕ್ಕರೆ ಚೆನ್ನಾಗಿ ಕರಗಿ ಗಟ್ಟಿಯಾಗಲು ಬಂದಾಗ ಮೈದಾ ಮಿಶ್ರಣವನ್ನು ಹಾಕಿ ಉಂಡೆಗಳಿಲ್ಲದೆ ಚೆನ್ನಾಗಿ ಕದಡಿ.
* ನಂತರ ಏಲಕ್ಕಿ ಪುಡಿಯನ್ನು ಹಾಕಿ ಬೆರೆಸಿ, ಸ್ಟವ್ ಆಫ್ ಮಾಡಿ.
* ನಂತರ ಈ ಮಿಶ್ರಣವನ್ನು ಮೂರು ಭಾಗಗಳಾಗಿ ವಿಂಗಡಿಸಬೇಕು.
* ನಂತರ ಒಂದು ಭಾಗಕ್ಕೆ ಹಸಿರು ಆಹಾರ ಬಣ್ಣವನ್ನು ಸೇರಿಸಿ ಚೆನ್ನಾಗಿ ಬೆರೆಸಿ.
* ಇನ್ನೊಂದರಲ್ಲಿ ಕೇಸರಿ ಫುಡ್ ಕಲರ್ ಹಾಕಿ ಚೆನ್ನಾಗಿ ಕಲಕಿ.
* ನಂತರ ಬಟರ್ ಪೇಪರ್ ಅನ್ನು ಟ್ರೇ ಮೇಲೆ ಹರಡಿ. ಅದರ ಮೇಲೆ ಮೊದಲು ಹಸಿರು ಮಿಶ್ರಣವನ್ನು ಹರಡಿ.

* ನಂತರ ಬಿಳಿ ವಿಶ್ರಣವನ್ನು ಹಾಕಿ ಹರಡಿ.
* ನಂತರ ಕೇಸರಿ ಬಣ್ಣದ ಮಿಶ್ರಣವನ್ನು ಹಾಕಿ ಸಮವಾಗಿ ಹರಡಿ.
* ಕೊನೆಗೆ ಟ್ರೇಯನ್ನು ತಲೆಕೆಳಗಾಗಿ ತಿರುಗಿಸಿ ಬಟರ್ ಪೇಪರ್ ತೆಗೆದು ಆಯತಾಕಾರದ ತುಂಡುಗಳಾಗಿ ಕತ್ತರಿಸಿದರೆ ರುಚಿಕರವಾದ ತ್ರಿವರ್ಣ ಬರ್ಫಿ ರೆಡಿ.
-
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
Buttermilk Summer Benefits: ಪ್ರತಿದಿನ ಮಜ್ಜಿಗೆ ಕುಡಿಯುವವರು ತಪ್ಪದೇ ತಿಳಿದುಕೊಳ್ಳಬೇಕಾದ ವಿಷಯಗಳು -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್












Click it and Unblock the Notifications