Summer Health Tips: ದೇಹ ತಂಪಾಗಿರಬೇಕಾ? ಹಾಗಾದರೆ ಈ 5 ನೈಸರ್ಗಿಕ ಆಹಾರಗಳು ಬಳಸಿ
ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೆಚ್ಚಿದ ಬಿಸಿಲಿನ ಶಾಖದಿಂದಾಗಿ ನಿರ್ಜಲೀಕರಣ, ದಣಿವು ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗುತ್ತವೆ. ಆದರೆ ಸರಿಯಾದ ಆಹಾರ ಪದ್ಧತಿ ಅನುಸರಿಸುವುದರಿಂದ ದೇಹವನ್ನು ಸುಲಭವಾಗಿ ತಂಪಾಗಿಡಬಹುದು ಎಂದು ತಜ್ಞರು ಹೇಳುತ್ತಾರೆ.
ಬೇಸಿಗೆಯಲ್ಲಿ ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯಕವಾಗುವ ಕೆಲವು ಆಹಾರಗಳ ಮಾಹಿತಿಯನ್ನು ನೀಡಲಾಗಿದೆ:
ಕಲ್ಲಂಗಡಿ: ಹೈಡ್ರೇಶನ್ ಕಿಂಗ್
ಬೇಸಿಗೆಯ ಬಿಸಿಲಿಗೆ ಕಲ್ಲಂಗಡಿ ಹಣ್ಣಿಗಿಂತ ಮಿಗಿಲಾದ ಅಮೃತ ಮತ್ತೊಂದಿಲ್ಲ. ಕಲ್ಲಂಗಡಿಯಲ್ಲಿ ನೀರಿನಂಶದ ಪ್ರಮಾಣ ಹೆಚ್ಚು ಇರುವುದರಿಂದ ದೇಹವನ್ನು ಹೈಡ್ರೇಟ್ ಆಗಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಚರ್ಮವನ್ನು ಸೂರ್ಯನ ಹಾನಿಯಿಂದ ರಕ್ಷಿಸುತ್ತದೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಇದು ಪ್ರಮುಖ ಹಣ್ಣು.

ಸೌತೆಕಾಯಿ: ತಂಪೋ ತಂಪು, ಆರೋಗ್ಯಕ್ಕೆ ಕಂಪು
ನೀರು ಮತ್ತು ಪೋಷಕಾಂಶಗಳ ಗಣಿ ಅಂದರೆ ಅದು ಸೌತೆಕಾಯಿ, ಇದರಲ್ಲಿ ನೀರು ಮತ್ತು ಫೈಬರ್ ಸಮೃದ್ಧವಾಗಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ದೇಹದ ಒಳಭಾಗವನ್ನು ತಂಪಾಗಿಡುವಲ್ಲಿ ಸಹಕಾರಿ. ಕಡಿಮೆ ಕ್ಯಾಲೋರಿ ಇರುವುದರಿಂದ ತೂಕ ನಿಯಂತ್ರಣಕ್ಕೂ ಸಹಾಯಕ. ಇದು ಮಲಬದ್ಧತೆಯನ್ನು ದೂರವಿಟ್ಟು ದೇಹವನ್ನು ರಿಫ್ರೆಶ್ ಆಗಿಡುತ್ತದೆ.
ಅನಾನಸ್: ಪೋಷಕಾಂಶಗಳ ಭಂಡಾರ
ಅನಾನಸ್ ಕೇವಲ ರುಚಿಯಷ್ಟೇ ಅಲ್ಲ, ಅನಾನಸ್ನಲ್ಲಿ ಬ್ರೋಮೆಲೈನ್ ಎಂಬ ಕಿಣ್ವವಿದ್ದು, ಇದು ಬಿಸಿಲಿನಿಂದ ಉಂಟಾಗುವ ಉರಿಯೂತವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಇದು ದೇಹಕ್ಕೆ ತ್ವರಿತ ಶಕ್ತಿ ನೀಡುತ್ತದೆ.

ಮೊಸರು: ಹೊಟ್ಟೆಗೆ ಹಿತಕಾರಿ
ಬೇಸಿಗೆಯಲ್ಲಿ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಬಹುದು, ಇದು ನಮ್ಮ ದೇಹದಲ್ಲಿರುವ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಪ್ರೋ ಬಯೋಟಿಕ್ಸ್ ನಮ್ಮ ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತವೆ ಮತ್ತು ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ನಿವಾರಿಸುತ್ತವೆ. ಇದರಲ್ಲಿರುವ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಬೇಸಿಗೆಯಲ್ಲಿ ಆಗುವ ಸುಸ್ತನ್ನು ದೂರ ಓಡಿಸಿ ನಿಮ್ಮನ್ನು ಸದಾ ಹುಮ್ಮಸ್ಸಿನಲ್ಲಿ ಇರುವಂತೆ ಮಾಡುತ್ತದೆ.
ನಿಂಬೆ ಹಣ್ಣು: ಇನ್ಸ್ಟಂಟ್ ಎನರ್ಜಿ ಬೂಸ್ಟರ್
ದೇಹದ ವಿಷಕಾರಿ ಅಂಶಗಳನ್ನು ಹೊರಹಾಕಲು ನಿಂಬೆ ಹಣ್ಣು ತುಂಬಾ ಒಳ್ಳೆಯದು. ಒಂದು ಲೋಟ ನಿಂಬೆ ಪಾನಕ ಕುಡಿದರೆ ಸಾಕು ಬೇಸಿಗೆಯ ಸುಸ್ತು ಮಾಯವಾಗಿ ತ್ವರಿತವಾಗಿ ದೇಹಕ್ಕೆ ಶಕ್ತಿ ಸಿಗುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಚರ್ಮವನ್ನು ಕಾಂತಿಯುತವಾಗಿರಿಸುತ್ತದೆ.
-
Ragi Ambli: ಬೇಸಿಗೆಯ ಬಿಸಿಲಿಗೆ ತಂಪೆರೆಯುವ 'ರಾಗಿ ಅಂಬಲಿ'; ಮನೆಯಲ್ಲೇ ಮಾಡುವ ಸುಲಭ ವಿಧಾನ ಇಲ್ಲಿದೆ -
Waterfalls: ಜೋಗದಿಂದ ಚುಂಚಿವರೆಗೆ; ಈ ಬೇಸಿಗೆಯಲ್ಲಿ ನೀವು ಭೇಟಿ ನೀಡಲೇಬೇಕಾದ 10 ಜಲಪಾತಗಳಿವು -
ದಿನಕ್ಕೆ 5 ನಿಮಿಷ ಸಾಕು: ಆಯುರ್ವೇದದಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ -
Heatstroke vs Dehydration: ಬೇಸಿಗೆಯಲ್ಲಿ ಕಾಡುವ ಶಾಖಾಘಾತ ಮತ್ತು ನಿರ್ಜಲೀಕರಣ: ಇವುಗಳ ವ್ಯತ್ಯಾಸ ತಿಳಿಯಿರಿ -
Summer Vacation: ಮಕ್ಕಳಿಗೆ ರಜೆಯನ್ನು ಆನಂದಿಸಲು ಬಿಡಿ; ಹರಿಕೃಷ್ಣ ಹೊಳ್ಳ ಬರಹ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು














Click it and Unblock the Notifications