Healthy Fruits: ಬೇಸಿಗೆಯಲ್ಲಿ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳು, ಇಂದೇ ತಿನ್ನಲು ಆರಂಭಿಸಿ
ಬೇಸಿಗೆ ಆರಂಭವಾಗಿದೆ. ಬಿಸಿಲು ಕ್ರಮೇಣ ಹೆಚ್ಚುತ್ತಿದೆ. ಬೇಸಿಗೆಯಲ್ಲಿ ದೇಹವು ತುಂಬಾ ಬೆವರುತ್ತದೆ. ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುವುದು. ಜೊತೆಗೆ ಆಯಾಸ, ನಿಶಕ್ತಿ, ತಲೆತಿರುಗುವಿಕೆ, ಹೊಟ್ಟೆ ಉರಿಯಂತಹ ಸಮಸ್ಯೆಗಳು ಕಾಣಿಸುತ್ತವೆ. ಶಾಖದ ಹೊಡೆತದಿಂದ ತುಂಬಾ ಅಪಾಯಕಾರಿ ಸಮಸ್ಯೆಗಳು ಕಂಡುಬರಬಹುದು.
ಈ ಋತುವಿಗೆ ಅಗತ್ಯವಾದ 4 ಹಣ್ಣುಗಳನ್ನು ಆಹಾರ ತಜ್ಞರು ಸೂಚಿಸುತ್ತಾರೆ. ಈ ಹಣ್ಣುಗಳು ಶಕ್ತಿಯನ್ನು ಒದಗಿಸುವುದಲ್ಲದೆ, ನೀರಿನ ಕೊರತೆಯನ್ನು ಸಹ ತಪ್ಪಿಸುತ್ತವೆ. ಈ ಹಣ್ಣುಗಳ ಸೇವನೆಯಿಂದ ಬೇಸಿಗೆಯಲ್ಲಿ ಹೆಚ್ಚು ಶಕ್ತಿಯುತವಾಗಿರಬಹುದು. ಅಲ್ಲದೆ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕಡಿಮೆ ಅನಾರೋಗ್ಯಕ್ಕೆ ಒಳಗಾಗುತ್ತೀರಿ. ಆದ್ದರಿಂದ ಶಾಖ ಹೆಚ್ಚಾದಂತೆ ಈ ಹಣ್ಣುಗಳ ಹೆಚ್ಚು ಸೇವನೆ ಮಾಡುವುದು ಮುಖ್ಯ. ಹಾಗಾದರೆ ಆ ಹಣ್ಣುಗಳು ಯಾವುವು ಎಂದು ಈಗ ತಿಳಿಯೋಣ.

ಕಲ್ಲಂಗಡಿ
ಕಲ್ಲಂಗಡಿ ಹಣ್ಣಿನಲ್ಲಿ ನೀರಿನಂಶ ಹೆಚ್ಚಾಗಿರುತ್ತದೆ. ಅದಕ್ಕಾಗಿಯೇ ಇದು ನಿರ್ಜಲೀಕರಣವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಅಲ್ಲದೆ ದೇಹಕ್ಕೆ ಸಾಕಷ್ಟು ಪೋಷಣೆಯನ್ನು ನೀಡುತ್ತದೆ. ದೇಹವನ್ನು ತಂಪಾಗಿಸಿ ನಿಮ್ಮನ್ನು ಉಲ್ಲಾಸದಿಂದ ಇಡುತ್ತದೆ. ಜೊತೆಗೆ ದೇಹದ ಶಕ್ತಿಯನ್ನು ಕಾಪಾಡಿ ದಣಿವು ಆಗದಂತೆ ನೋಡಿಕೊಳ್ಳುತ್ತದೆ.

ಪಪ್ಪಾಯಿ
ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ. ಈ ಹಣ್ಣಿನ ಅತಿ ದೊಡ್ಡ ಪ್ರಯೋಜನ ಹೊಟ್ಟೆಗಿದೆ. ಇದು ಹೊಟ್ಟೆಯ ಉಷ್ಣತೆ ಹೆಚ್ಚಾಗಲು ಬಿಡುವುದಿಲ್ಲ ಮತ್ತು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಬೇಸಿಗೆಗೆ ಉತ್ತಮ ಆಯ್ಕೆಯಾಗಿದ್ದು ಮಲಬದ್ಧತೆಯಿಂದ ಬಳಲುತ್ತಿರುವವರು ಇದನ್ನು ತಿನ್ನುವುದು ಅನುಕೂಲಕರ.

ಕರಬೂಜ
ಈ ಸಿಹಿ ಹಣ್ಣು ಕಲ್ಲಂಗಡಿ ಹಣ್ಣಿನಂತಿ ದೇಹವನ್ನು ತಂಪಾಗಿಡುತ್ತದೆ. ಮೂತ್ರವರ್ಧಕ ಗುಣಗಳನ್ನು ಹೊಂದಿದೆ ಎಂದು ಆಹಾರ ತಜ್ಞರು ಹೇಳುತ್ತಾರೆ. ಇದು ಮೂತ್ರಪಿಂಡಗಳು, ಮೂತ್ರಕೋಶ ಇತ್ಯಾದಿಗಳಿಗೆ ಒಳ್ಳೆಯದು ಮತ್ತು ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಮಾವು
ಮಾವನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಬೇಸಿಗೆಯಲ್ಲಿ ಮಾವು ತಿನ್ನುವುದರಿಂದ ವಿಟಮಿನ್ ಎ ಮತ್ತು ವಿಟಮಿನ್ ಸಿ ಕೊರತೆ ಉಂಟಾಗುವುದಿಲ್ಲ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ, ಆದ್ದರಿಂದ ಇದನ್ನು ಸೇವಿಸಿ. ಆದಾಗ್ಯೂ, ಅಲರ್ಜಿ ಇರುವವರು ಇದರಿಂದ ದೂರವಿರಬೇಕು.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತಾರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಏಕೈಕ ಉದ್ದೇಶ. ಯಾವುದೇ ಮಾಹಿತಿ ಅನುಷ್ಠಾನಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications