Vastu Tips: ಪ್ರೇಮಿಗಳ ದಿನದಂದು ಈ ಗಿಫ್ಟ್ ಕೊಡಬೇಡಿ, ಸರ್ವನಾಶ ಖಂಡಿತ!
ಫೆಬ್ರವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನಕ್ಕಾಗಿ ಹಲವಾರು ಜೋಡಿಗಳು ಕಾಯುತ್ತಿವೆ. ಈ ದಿನ ಪ್ರೇಮಿಗಳು ಪರಸ್ಪರ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಆದರೆ ನೀವು ನಿಮ್ಮ ಸಂಗಾತಿಗೆ ಕೊಡುವ ಗಿಫ್ಟ್ ಇದಾಗಿದ್ದರೆ ನಿಮಗೆ ಅಪಾಯ ಖಂಡಿತ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಯಾವ ಉಡುಗೊರೆಯನ್ನು ಸಂಗಾತಿಗೆ ನೀಡಬಾರದು? ಇದರ ಬಗ್ಗೆ ಈಗ ತಿಳಿಯೋಣ.
ನಮ್ಮ ಆತ್ಮೀಯರಿಗೆ ಉಡುಗೊರೆಗಳನ್ನು ನೀಡುವುದು ತುಂಬಾ ಹಳೆಯ ಪದ್ಧತಿ. ಆದರೆ ನೀವು ಉಡುಗೊರೆಗಳನ್ನು ನೀಡುವಾಗ ಈ ತಪ್ಪನ್ನು ಮಾಡಬೇಡಿ. ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರ ನಮ್ಮ ಜೀವನದ ಪ್ರತಿಯೊಂದು ಅಂಶಕ್ಕೂ ಸಂಬಂಧಿಸಿದೆ. ಕೆಲಸಗಳನ್ನು ವಾಸ್ತು ಪ್ರಕಾರ ಮಾಡಿದರೆ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಇದನ್ನು ಮಾಡದಿದ್ದರೆ ವಾಸ್ತು ದೋಷದ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದರೆ ಬೇರೆಯವರೊಂದಿಗೆ ಹಂಚಿಕೊಳ್ಳಬಾರದ ಆ ವಸ್ತುಗಳು ಯಾವುವು ಎಂದು ಈಗ ತಿಳಿಸೋಣ.

ವಾಚ್
ವಾಚ್ ಅನ್ನು ಬೇರೆಯವರಿಗೆ ಎಂದಿಗೂ ನೀಡಬಾರದು. ಜೊತೆಗೆ ಬೇರೆಯವರ ಗಡಿಯಾರವನ್ನು ಧರಿಸಬಾರದು. ವಾಸ್ತು ಪ್ರಕಾರ ಗಡಿಯಾರ ಸಮಯವನ್ನು ಹೇಳುವುದಲ್ಲದೆ, ಜೀವನದ ಒಳ್ಳೆಯ ಮತ್ತು ಕೆಟ್ಟ ಸಮಯಗಳಿಗೂ ಸಹ ಸಂಬಂಧ ಹೊಂದಿದೆ. ಕೆಟ್ಟ ಸಮಯವನ್ನು ಎದುರಿಸುತ್ತಿರುವ ವ್ಯಕ್ತಿಯ ಗಡಿಯಾರವನ್ನು ನೀವು ಎಂದಾದರೂ ಧರಿಸಿದರೆ, ಅದು ನಿಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಅಥವಾ ನೀವು ನೀಡಿದ ಗಡಿಯಾರ ಧರಿಸಿದರೂ, ನಿಮ್ಮ ಸಕಾರಾತ್ಮಕತೆ ಅವರ ಕಡೆಗೆ ಹೋಗಬಹುದು. ಹೀಗಾಗಿ ಗಡಿಯಾರವನ್ನು ಉಡುಗೊರೆಯಾಗಿ ನೀಡುವುದು ಹಾಗೂ ಬೇರೆಯವರ ಗಡಿಯಾರವನ್ನು ಧರಿಸುವುದನ್ನು ತಪ್ಪಿಸಿ.
ಚಪ್ಪಲಿಗಳು
ಚಪ್ಪಲಿ ಅಥವಾ ಶೂಗಳನ್ನು ಯಾರಿಗೂ ಉಡುಗೊರೆಯಾಗಿ ನೀಡಬೇಡಿ. ಜೊತೆಗೆ ಬೇರೆಯವರ ಚಪ್ಪಲಿ ಅಥವಾ ಬೂಟುಗಳನ್ನೂ ಧರಿಸಬಾರದು. ಹೀಗೆ ಮಾಡುವುದರಿಂದ ಶನಿಯು ನಿಮ್ಮ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಇದರಿಂದಾಗಿ ಈ ಬಾರಿ ಪ್ರೇಮಿಗಳ ದಿನ ಈ ವಸ್ತುವನ್ನು ಉಡುಗೊರೆಯಾಗಿ ನೀಡುವುದನ್ನು ತಪ್ಪಿಸಿ.
ಮದುವೆಯ ಉಡುಪುಗಳು
ನಿಮ್ಮ ಮದುವೆಯ ಉಡುಪನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಹೀಗೆ ಮಾಡುವುದರಿಂದ ನಿಮ್ಮ ಪ್ರೇಮ ಅಥವಾ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಉಂಟಾಗಬಹುದು. ಅಲ್ಲದೆ ನೀವು ನಿಮ್ಮ ಬಟ್ಟೆಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಾರದು. ಇದು ನಿಮ್ಮ ಸಕಾರಾತ್ಮಕತೆಯನ್ನು ಕಡಿಮೆ ಮಾಡುತ್ತದೆ ಮತ್ತು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.
ಸುಗಂಧ ದ್ರವ್ಯ
ಸುಗಂಧ ದ್ರವ್ಯವ ನಿಮ್ಮ ಮನಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ನಿಮ್ಮ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ. ಸುಗಂಧ ದ್ರವ್ಯ ಅಥವಾ ಪರಿಮಳವನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಮದು ವಾಸ್ತು ಸಾಸ್ತ್ರ ಹೇಳುತ್ತದೆ. ಹೀಗಾಗಿ ನಿಮ್ಮ ಪ್ರೇಮಿಗೆ ಇದನ್ನು ಉಡುಗೊರೆಯಾಗಿ ನೀಡಬೇಡಿ.
ಉಂಗುರ ಮತ್ತು ಬಳೆ
ನಿಮ್ಮ ಉಂಗುರಗಳು ಮತ್ತು ಬಳೆಗಳನ್ನು ಬೇರೆಯವರೊಂದಿಗೆ ಎಂದಿಗೂ ಹಂಚಿಕೊಳ್ಳಬಾರದು. ಅಥವಾ ಹೊಸದನ್ನೂ ಕೂಡ ಉಡುಗೊರೆಯಾಗಿ ನೀಡಬಾರದು. ಹೀಗೆ ಮಾಡುವುದರಿಂದ ನಿಮ್ಮ ವೈವಾಹಿಕ ಅಥವಾ ಪ್ರೇಮ ಜೀವನ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಪೆನ್ನು
ನಿಮ್ಮ ನೆಚ್ಚಿನ ಪೆನ್ನು ನೀವು ಯಾರಿಗೂ ಕೊಡಬಾರದು. ಅಲ್ಲದೆ ಹೊಸದನ್ನೂ ಉಡುಗೊರೆಯಾಗಿ ನೀಡಬಾರದು. ಹೀಗೆ ಮಾಡುವುದರಿಂದ ನಿಮ್ಮ ಯಶಸ್ಸನ್ನು ಇತರರೊಂದಿಗೆ ಹಂಚಿಕೊಂಡಾಗುತ್ತದೆ. ಹೀಗಾಗಿ ಪೆನ್ನು ಉಡುಗೊರೆಯಾಗಿ ನೀಡಬೇಡಿ.
ಪೊರಕೆ
ಲಕ್ಷ್ಮಿ ದೇವಿಯು ಪೊರಕೆಯಲ್ಲಿ ವಾಸಿಸುತ್ತಾಳೆ. ಮನೆಯಿಂದ ಬಡತನವನ್ನು ಹೋಗಲಾಡಿಸಲು ಪೊರಕೆಯನ್ನು ಬಳಸಲಾಗುತ್ತದೆ. ಈ ಕಾರಣಕ್ಕಾಗಿ ಪೊರಕೆಯನ್ನು ಬೇರೆಯವರಿಗೆ ನೀಡಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯು ನಿಮ್ಮನ್ನು ಬಿಟ್ಟು ಹೋಗಬಹುದು.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಏಕೈಕ ಉದ್ದೇಶ. ಯಾವುದೇ ಮಾಹಿತಿ ಕಾರ್ಯರೂಪಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications