Vastu Tips: ಪ್ರೇಮಿಗಳ ದಿನದಂದು ಈ ಗಿಫ್ಟ್ ಕೊಡಬೇಡಿ, ಸರ್ವನಾಶ ಖಂಡಿತ!
ಫೆಬ್ರವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನಕ್ಕಾಗಿ ಹಲವಾರು ಜೋಡಿಗಳು ಕಾಯುತ್ತಿವೆ. ಈ ದಿನ ಪ್ರೇಮಿಗಳು ಪರಸ್ಪರ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಆದರೆ ನೀವು ನಿಮ್ಮ ಸಂಗಾತಿಗೆ ಕೊಡುವ ಗಿಫ್ಟ್ ಇದಾಗಿದ್ದರೆ ನಿಮಗೆ ಅಪಾಯ ಖಂಡಿತ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಯಾವ ಉಡುಗೊರೆಯನ್ನು ಸಂಗಾತಿಗೆ ನೀಡಬಾರದು? ಇದರ ಬಗ್ಗೆ ಈಗ ತಿಳಿಯೋಣ.
ನಮ್ಮ ಆತ್ಮೀಯರಿಗೆ ಉಡುಗೊರೆಗಳನ್ನು ನೀಡುವುದು ತುಂಬಾ ಹಳೆಯ ಪದ್ಧತಿ. ಆದರೆ ನೀವು ಉಡುಗೊರೆಗಳನ್ನು ನೀಡುವಾಗ ಈ ತಪ್ಪನ್ನು ಮಾಡಬೇಡಿ. ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರ ನಮ್ಮ ಜೀವನದ ಪ್ರತಿಯೊಂದು ಅಂಶಕ್ಕೂ ಸಂಬಂಧಿಸಿದೆ. ಕೆಲಸಗಳನ್ನು ವಾಸ್ತು ಪ್ರಕಾರ ಮಾಡಿದರೆ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಇದನ್ನು ಮಾಡದಿದ್ದರೆ ವಾಸ್ತು ದೋಷದ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದರೆ ಬೇರೆಯವರೊಂದಿಗೆ ಹಂಚಿಕೊಳ್ಳಬಾರದ ಆ ವಸ್ತುಗಳು ಯಾವುವು ಎಂದು ಈಗ ತಿಳಿಸೋಣ.

ವಾಚ್
ವಾಚ್ ಅನ್ನು ಬೇರೆಯವರಿಗೆ ಎಂದಿಗೂ ನೀಡಬಾರದು. ಜೊತೆಗೆ ಬೇರೆಯವರ ಗಡಿಯಾರವನ್ನು ಧರಿಸಬಾರದು. ವಾಸ್ತು ಪ್ರಕಾರ ಗಡಿಯಾರ ಸಮಯವನ್ನು ಹೇಳುವುದಲ್ಲದೆ, ಜೀವನದ ಒಳ್ಳೆಯ ಮತ್ತು ಕೆಟ್ಟ ಸಮಯಗಳಿಗೂ ಸಹ ಸಂಬಂಧ ಹೊಂದಿದೆ. ಕೆಟ್ಟ ಸಮಯವನ್ನು ಎದುರಿಸುತ್ತಿರುವ ವ್ಯಕ್ತಿಯ ಗಡಿಯಾರವನ್ನು ನೀವು ಎಂದಾದರೂ ಧರಿಸಿದರೆ, ಅದು ನಿಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಅಥವಾ ನೀವು ನೀಡಿದ ಗಡಿಯಾರ ಧರಿಸಿದರೂ, ನಿಮ್ಮ ಸಕಾರಾತ್ಮಕತೆ ಅವರ ಕಡೆಗೆ ಹೋಗಬಹುದು. ಹೀಗಾಗಿ ಗಡಿಯಾರವನ್ನು ಉಡುಗೊರೆಯಾಗಿ ನೀಡುವುದು ಹಾಗೂ ಬೇರೆಯವರ ಗಡಿಯಾರವನ್ನು ಧರಿಸುವುದನ್ನು ತಪ್ಪಿಸಿ.
ಚಪ್ಪಲಿಗಳು
ಚಪ್ಪಲಿ ಅಥವಾ ಶೂಗಳನ್ನು ಯಾರಿಗೂ ಉಡುಗೊರೆಯಾಗಿ ನೀಡಬೇಡಿ. ಜೊತೆಗೆ ಬೇರೆಯವರ ಚಪ್ಪಲಿ ಅಥವಾ ಬೂಟುಗಳನ್ನೂ ಧರಿಸಬಾರದು. ಹೀಗೆ ಮಾಡುವುದರಿಂದ ಶನಿಯು ನಿಮ್ಮ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಇದರಿಂದಾಗಿ ಈ ಬಾರಿ ಪ್ರೇಮಿಗಳ ದಿನ ಈ ವಸ್ತುವನ್ನು ಉಡುಗೊರೆಯಾಗಿ ನೀಡುವುದನ್ನು ತಪ್ಪಿಸಿ.
ಮದುವೆಯ ಉಡುಪುಗಳು
ನಿಮ್ಮ ಮದುವೆಯ ಉಡುಪನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಹೀಗೆ ಮಾಡುವುದರಿಂದ ನಿಮ್ಮ ಪ್ರೇಮ ಅಥವಾ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಉಂಟಾಗಬಹುದು. ಅಲ್ಲದೆ ನೀವು ನಿಮ್ಮ ಬಟ್ಟೆಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಾರದು. ಇದು ನಿಮ್ಮ ಸಕಾರಾತ್ಮಕತೆಯನ್ನು ಕಡಿಮೆ ಮಾಡುತ್ತದೆ ಮತ್ತು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.
ಸುಗಂಧ ದ್ರವ್ಯ
ಸುಗಂಧ ದ್ರವ್ಯವ ನಿಮ್ಮ ಮನಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ನಿಮ್ಮ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ. ಸುಗಂಧ ದ್ರವ್ಯ ಅಥವಾ ಪರಿಮಳವನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಮದು ವಾಸ್ತು ಸಾಸ್ತ್ರ ಹೇಳುತ್ತದೆ. ಹೀಗಾಗಿ ನಿಮ್ಮ ಪ್ರೇಮಿಗೆ ಇದನ್ನು ಉಡುಗೊರೆಯಾಗಿ ನೀಡಬೇಡಿ.
ಉಂಗುರ ಮತ್ತು ಬಳೆ
ನಿಮ್ಮ ಉಂಗುರಗಳು ಮತ್ತು ಬಳೆಗಳನ್ನು ಬೇರೆಯವರೊಂದಿಗೆ ಎಂದಿಗೂ ಹಂಚಿಕೊಳ್ಳಬಾರದು. ಅಥವಾ ಹೊಸದನ್ನೂ ಕೂಡ ಉಡುಗೊರೆಯಾಗಿ ನೀಡಬಾರದು. ಹೀಗೆ ಮಾಡುವುದರಿಂದ ನಿಮ್ಮ ವೈವಾಹಿಕ ಅಥವಾ ಪ್ರೇಮ ಜೀವನ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಪೆನ್ನು
ನಿಮ್ಮ ನೆಚ್ಚಿನ ಪೆನ್ನು ನೀವು ಯಾರಿಗೂ ಕೊಡಬಾರದು. ಅಲ್ಲದೆ ಹೊಸದನ್ನೂ ಉಡುಗೊರೆಯಾಗಿ ನೀಡಬಾರದು. ಹೀಗೆ ಮಾಡುವುದರಿಂದ ನಿಮ್ಮ ಯಶಸ್ಸನ್ನು ಇತರರೊಂದಿಗೆ ಹಂಚಿಕೊಂಡಾಗುತ್ತದೆ. ಹೀಗಾಗಿ ಪೆನ್ನು ಉಡುಗೊರೆಯಾಗಿ ನೀಡಬೇಡಿ.
ಪೊರಕೆ
ಲಕ್ಷ್ಮಿ ದೇವಿಯು ಪೊರಕೆಯಲ್ಲಿ ವಾಸಿಸುತ್ತಾಳೆ. ಮನೆಯಿಂದ ಬಡತನವನ್ನು ಹೋಗಲಾಡಿಸಲು ಪೊರಕೆಯನ್ನು ಬಳಸಲಾಗುತ್ತದೆ. ಈ ಕಾರಣಕ್ಕಾಗಿ ಪೊರಕೆಯನ್ನು ಬೇರೆಯವರಿಗೆ ನೀಡಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯು ನಿಮ್ಮನ್ನು ಬಿಟ್ಟು ಹೋಗಬಹುದು.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಏಕೈಕ ಉದ್ದೇಶ. ಯಾವುದೇ ಮಾಹಿತಿ ಕಾರ್ಯರೂಪಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications