ಬಿಸಿಲಿನಲ್ಲಿ ಈ ಬಣ್ಣದ ಛತ್ರಿ ಬಳಸುವುದರಿಂದ ಇದೆ ಲಾಭ, ಏನದು ?
ಬಿಸಿಲು ಹಾಗೂ ಮಳೆಯ ಸಂದರ್ಭದಲ್ಲಿ ಛತ್ರಿ ಬಳಸುವುದು ಮಾಮೂಲಿ. ಆದರೆ, ಛತ್ರಿ ಬಳಸುವಾಗ ಬಣ್ಣ ಬದಲಾದರೂ ಪರಿಣಾಮ ಬೀರಲಿದೆ ಎನ್ನುವ ಬಗ್ಗೆ ಕೇಳಿದ್ದೀರಾ. ಹೌದು ಇದು ಅಚ್ಚರಿ ಏನಿಸಿದರೂ ಇದರಲ್ಲಿ ಅರ್ಥವಿದೆ ಎನ್ನುತ್ತಾರೆ ತಜ್ಞರು. ಬೇಸಿಗೆ ಕಾಲ ರಾಜ್ಯದಲ್ಲಿ ಬಿರುಬಿಸಿಲು ಜೋರಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ದೆಹಲಿ ಮಾದರಿಯ ಬಿಸಿಲು ಕಾಣಿಸಿಕೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಈಗಾಗಲೇ ಬಿಸಿಲಿನ ಝಳ ಜೋರಾಗಿದೆ. ಸಾಮಾನ್ಯವಾಗಿ ಈ ರೀತಿಯ ಸಂದರ್ಭದಲ್ಲಿ ಜನ ಛತ್ರಿ ಬಳಸುವುದು ಮಾಮೂಲಿ. ಆದರೆ ಬಿಸಿಲಿನಲ್ಲಿ ಕಪ್ಪು ಬಣ್ಣದ ಛತ್ರಿಗಳನ್ನು ಬಳಸುವುದರ ಹಿಂದೆ ಬೇರೆ ಬೇರೆ ಲಾಭಗಳಿವೆ. ಅದು ಹೇಗೆ ಎನ್ನುವ ವಿವರ ಇಲ್ಲಿದೆ.
ಕರ್ನಾಟಕ ಕಳೆದ ವರ್ಷ ಭಾರೀ ಬಿಸಿಲಿಗೆ ಸಾಕ್ಷಿಯಾಗಿತ್ತು. ಈ ವರ್ಷ ಫೆಬ್ರವರಿ ಎರಡನೇ ವಾರದಿಂದಲೇ ಬಿಸಿಲು ಶುರುವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಸಿಲು ಇರಲಿದೆ. ಬಿಸಿಲು - ಮಳೆಯಿಂದ ತಪ್ಪಿಸಿಕೊಳ್ಳಲು ಜನ ಛತ್ರಿಗಳನ್ನು ಬಳಸುವುದು ತೀರ ಸಾಮಾನ್ಯ ಸಂಗತಿ. ಆದರೆ ಕೆಲವು ಛತ್ರಿಗಳಿಂದ ಬಿಸಿಲು ಹೆಚ್ಚಾಗಿ ನಿಮ್ಮ ಮೇಲೆ ಬೀಳಲಿದೆ. ಅಷ್ಟೇ ಅಲ್ಲ ದೇಹದ ಚರ್ಮದ ಮೇಲೂ ಅದು ಪರಿಣಾಮ ಬೀರುವ ಸಾಧ್ಯತೆ ಇದೆ ಅದು ಹೇಗೆ ಎನ್ನುವ ವಿವರ ನೋಡೋಣ.

ಬಿಸಿಲು ಹೆಚ್ಚಾಗಿ ಇರುವಾಗ ಯಾವುದೇ ಕಾರಣಕ್ಕೂ ಕಪ್ಪು ಬಟ್ಟೆಗಳನ್ನು ಹಾಕಿಕೊಳ್ಳಬಾರದು ಎಂದು ಹೇಳಲಾಗುತ್ತದೆ. ಆದರೆ ಛತ್ರಿಗಳ ಬಳಕೆಯ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನೀವು ಬಿಸಿಲಿನಲ್ಲಿ ಬೇರೆ ಬಣ್ಣದ ಛತ್ರಿಗಳನ್ನು ಬಳಸುವುದಕ್ಕಿಂತ ಕಪ್ಪು ಛತ್ರಿಗಳನ್ನು ಬಳಸುವುದರಿಂದ ಆಗುವ ಲಾಭಗಳು ಹೆಚ್ಚು.
ಹೌದು ಇದು ಕೇಳುವುದಕ್ಕೆ ನಿಮಗೆ ಅಚ್ಚರಿ ಅಂತ ಅನಿಸಿದರೂ ಕಪ್ಪು ಛತ್ರಿಗಳನ್ನು ಹೆಚ್ಚು ಬಿಸಿಲು ಇರುವಾಗ ಬಳಸಿದರೆ ನಿಮ್ಮ ದೇಹದ ಮೇಲೆ ಸೂರ್ಯಕಿರಣ ಅಥವಾ ಯುವಿ ಕಿರಣದ ಪರಿಣಾಮ ಬೀರುವುದಿಲ್ಲ. ಕಪ್ಪು ಬಣ್ಣದ ಛತ್ರಿಗಳು UV ಕಿರಣಗಳನ್ನು ತಡೆಯುವಲ್ಲಿ ಪರಿಣಾಮಕಾರಿಯಾಗಿವೆ. ಈ ಬಣ್ಣದ ಛತ್ರಿಗಳು ಸೂರ್ಯನ ಬೆಳಕನ್ನು ಹೀರಿಕೊಳ್ಳುವ ಮತ್ತು ಅತಿಗೆಂಪು (ಯುವಿ) ವಿಕಿರಣ ದೇಹದ ಮೇಲೆ ಬೀಳುವುದನ್ನು ಉಳಿದ ಬಣ್ಣದ ಛತ್ರಿಗಳಿಗಿಂತ ಪರಿಣಾಮಕಾರಿಯಾಗಿ ತಡೆಯುತ್ತದೆ.

ಕಪ್ಪು ಛತ್ರಿ ಹೇಗೆ ಸಹಕಾರಿ: ಕಪ್ಪು ಛತ್ರಿಯು ಶಾಖವನ್ನು ಹೀರಿಕೊಳ್ಳುತ್ತದೆ. Uv ಕಿರಣಗಳನ್ನು ತಡೆಯುವಲ್ಲಿ ಪರಿಣಾಮಕಾರಿಯಾಗಿದೆ. ದೇಹದ ಮೇಲೆ ಯುವಿ ಕಿರಣವು ಬೀಳುವುದರಿಂದ ದೇಹದ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆದರೆ ಕಪ್ಪು ಛತ್ರಿಯನ್ನು ಬಳಸುವುದರಿಂದ ಚರ್ಮದ ಹಾನಿಯನ್ನು ತಪ್ಪಿಸಬಹುದಾಗಿದೆ. ಇದೇ ಸಂದರ್ಭದಲ್ಲಿ ಬಿಳಿ ಅಥವಾ ತಿಳಿ ಬಣ್ಣದ ಛತ್ರಿಗಳನ್ನು ಬಳಸುವುದರಿಂದ ಬಿಸಿಲಿನ ಕಿರಣಗಳು ನಿಮ್ಮ ದೇಹದ ಮೇಲೆ ಬಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಇದು ಬಿಸಿಲಿಗೆ ಮಾತ್ರ ಅನ್ವಯವಾಗಿದೆ. ಮಳೆಗಾಲದಲ್ಲಿ ಅಥವಾ ಮಳೆ ಬರುವಾಗ ಯಾವ ಬಣ್ಣದ ಛತ್ರಿಯನ್ನಾದರೂ ಬಳಸಬಹುದು.
-
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications