Hibiscus Uses: ಬೇಸಿಗೆಯಲ್ಲಿ ದಾಸವಾಳದಿಂದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
ಈಗಿನಿಂದಲೇ ಬೇಸಿಗೆಯ ತೀವ್ರತೆ ಹೆಚ್ಚಾಗಿದ್ದು, ಹೊರಗೆ ಹೋದರೆ ನೆತ್ತಿ ಸುಡುತ್ತದೆ. ಅಷ್ಟೇ ಅಲ್ಲದೆ ಆರೋಗ್ಯದಲ್ಲಿ ಏರುಪೇರಾಗುವುದು, ವಿಪರೀತ ಸುಸ್ತು, ದೇಹದಲ್ಲಿ ಉಷ್ಣಾಂಶ ಹೆಚ್ಚುವುದು ಹೀಗೆ ಹತ್ತಾರು ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ನಮ್ಮ ಸುತ್ತಮುತ್ತಲಲ್ಲಿ ಸಿನಿಸರ್ಗದಲ್ಲಿಯೇ ಇರುವ ಗಿಡ, ಮರ, ಹಣ್ಣು, ಕಾಯಿಗಳನ್ನು ಬಳಸಿಕೊಂಡು ಬೇಸಿಗೆಯಲ್ಲಿ ನಮ್ಮನ್ನು ಕಾಡುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.
ನಮ್ಮ ಹಿತ್ತಿಲು ಸೇರಿದಂತೆ ಸುತ್ತಮುತ್ತ ಇರುವ ಹೂ ಗಿಡಗಳು, ತರಕಾರಿಗಳು, ಹಣ್ಣುಗಳು ಹೀಗೆ ಎಲ್ಲವೂ ತಮ್ಮದೇ ಆದ ಆರೋಗ್ಯಕಾರಿ ಗುಣಗಳನ್ನು ಹೊಂದಿದ್ದು ಅವುಗಳ ಉಪಯೋಗವನ್ನು ಅರಿತು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜಾಣ್ಮೆಯನ್ನು ಬೆಳೆಸಿಕೊಳ್ಳಬೇಕಷ್ಟೆ. ಹಿಂದೆ ಹಳ್ಳಿಗಳಲ್ಲಿ ಮನೆ ಬಳಿಯಿರುವ ಗಿಡಮೂಲಿಕೆಗಳನ್ನು ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವ ಕೆಲಸ ಮಾಡುತ್ತಿದ್ದರು. ಅವರಿಗೆ ಯಾವ ಕಾಲಕ್ಕೆ ಯಾವುದನ್ನು ಬಳಸಿಕೊಳ್ಳಬೇಕು ಎಂಬುದು ಗೊತ್ತಿತ್ತು ಹೀಗಾಗಿ ಅವರು ಹೂವಿನ ಗಿಡದಿಂದ ಆರಂಭವಾಗಿ ಹಣ್ಣಿನ ಮರಗಳ ತನಕ ಎಲ್ಲವನ್ನು ಬಳಸಿಕೊಳ್ಳುತ್ತಿದ್ದರು.

ಇವತ್ತು ನಾವು ನಮ್ಮ ಮನೆಗಳಲ್ಲಿ ಹಲವು ಹೂಗಿಡಗಳನ್ನು ನೆಡುತ್ತಿದ್ದು ಅವುಗಳನ್ನು ಅಲಂಕಾರದ ದೃಷ್ಟಿಯಿಂದಷ್ಟೆ ನೋಡುತ್ತಿದ್ದೇವೆ. ಆದರೆ ಅವುಗಳಲ್ಲಿರುವ ಆರೋಗ್ಯಕಾರಿ ಗುಣವನ್ನು ಅರಿತು ಅದರ ಬಳಕೆ ಮಾಡುವಲ್ಲಿ ವಿಫಲರಾಗುತ್ತಿದ್ದೇವೆ. ಹೀಗಾಗಿ ಆರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ಹೀಗಾಗಿ ಆರೋಗ್ಯಕಾರಿ ಗುಣ ಅದರಲ್ಲೂ ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿಸುವ ಗುಣ ಕೇವಲ ಹಣ್ಣು ತರಕಾರಿಯಲ್ಲಿ ಮಾತ್ರವಲ್ಲದೆ ಹೂಗಿಡಗಳಲ್ಲಿಯೂ ಇದೆ ಎನ್ನುವುದನ್ನು ತಿಳಿದುಕೊಳ್ಳಬೇಕಿದೆ.
ದಾಸವಾಳದಲ್ಲಿದೆ ತಂಪುಕಾರಕ ಗುಣ
ಬೇಸಿಗೆಯ ದಿನಗಳಲ್ಲಿ ದಾಸವಾಳವಂತು ಹತ್ತು ಹಲವು ರೀತಿಯಲ್ಲಿ ಮನುಷ್ಯನಿಗೆ ಉಪಯೋಗಕ್ಕೆ ಬರುತ್ತದೆ. ಇದರ ಹೂ, ಎಲೆ, ಬೇರು ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿದ್ದು, ಇದನ್ನರಿತು ಸಕಾಲದಲ್ಲಿ ಅದನ್ನು ಬಳಸಿಕೊಂಡಿದ್ದೇ ಆದರೆ ಹಲವು ರೋಗಗಳಿಂದ ದೂರವಿರಲು ಸಾಧ್ಯವಾಗಲಿದೆ. ದಾಸವಾಳದಲ್ಲಿ ಹಲವು ಜಾತಿಯ ಗಿಡಗಳಿದ್ದು ಅವುಗಳಲ್ಲಿ ಬಿಳಿದಾಸವಾಳ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿದೆ. ಇದರ ಹೂ ಎಲೆ ಬೇರು ಸರ್ವ ವಿಧದಲ್ಲಿಯೂ ಉಪಯೋಗಕಾರಿಯಾಗಿದೆ.
ದಾಸವಾಳದಲ್ಲಿ ತಂಪುಕಾರಕ ಗುಣಗಳು ಅಧಿಕ ಪ್ರಮಾಣದಲ್ಲಿರುವ ಕಾರಣ ಇದನ್ನು ಬೇಸಿಗೆಯ ದಿನಗಳಲ್ಲಿ ಬಳಸಿಕೊಳ್ಳುವುದು ಒಳ್ಳೆಯದು. ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ದೇಹದಲ್ಲಿ ಉಷ್ಣಾಂಶ ಹೆಚ್ಚಾಗುವುದು ಸಹಜ. ಇದರಿಂದ ತಲೆನೋವು, ಉರಿಮೂತ್ರ, ಸಮರ್ಪಕವಾಗಿ ಮಲವಿಸರ್ಜನೆಯಾಗದಿರುವುದು ಹೀಗೆ ಹತ್ತು ಹಲವು ಸಮಸ್ಯೆಗಳು ಎದುರಾಗುತ್ತವೆ, ಅಂತಹ ಸಂದರ್ಭದಲ್ಲಿ ಇದು ಉಪಯೋಗಕ್ಕೆ ಬರುತ್ತದೆ.

ಇದು ಮೈಮನ ಹಗುರವಾಗಿಸುತ್ತದೆ
ಬೇಸಿಗೆಯಲ್ಲಿ ಕೆಲವರಿಗೆ ಕೆಲವೊಮ್ಮೆ ತಲೆಯಲ್ಲಿ ಏನೋ ಭಾರವಾದಂತೆ ಭಾಸವಾಗುತ್ತಿರುತ್ತದೆ. ಜತೆಗೆ ತುರಿಕೆಯೂ ಕಾಣಿಸಿಕೊಳ್ಳಬಹುದು. ಇನ್ನು ದೇಹದ ಉಷ್ಣಾಂಶವು ಹೆಚ್ಚಾಗಬಹುದು ಇದನ್ನು ಕಡಿಮೆ ಮಾಡಿ ಹಗುರವಾಗಬೇಕಾದರೆ ದಾಸವಾಳದ ಎಲೆಗಳನ್ನು ನೀರಿನಲ್ಲಿ ನೆನೆಸಿಟ್ಟು ಬಳಿಕ ಅದನ್ನು ಕಿವುಚಿ ಎಲೆಗಳನ್ನು ಬೇರ್ಪಡಿಸಿ ಲೋಳೆಯಾದ ರಸವನ್ನು ಶೇಖರಿಸಿಟ್ಟುಕೊಂಡು ಸ್ನಾನ ಮಾಡುವ ವೇಳೆ ಮೊದಲಿಗೆ ಆ ನೀರನ್ನು ತಲೆಗೆ ಸುರಿದುಕೊಂಡರೆ ತಂಪಾದ ಅನುಭವವಾಗುತ್ತದೆ.
ಒಂದೈದು ನಿಮಿಷಗಳ ಕಾಲ ನೀರು ಹಾಕಿ ತೊಳೆದು ಬಳಿಕ ಸ್ನಾನ ಮಾಡಿದರೆ ತಲೆಯೆಲ್ಲ ಹಗುರವಾಗುತ್ತದೆ. ದೇಹದಲ್ಲಿ ಉಲ್ಲಾಸವಿರುತ್ತದೆ. ಇದು ಕೂದಲು ಉದುರುವುದು, ಹೊಟ್ಟಿನ ಸಮಸ್ಯೆಗೂ ಸಹಕಾರಿಯಾಗುತ್ತದೆ. ಶಾಂಪುಗಳು ಇನ್ನೂ ಮಾರುಕಟ್ಟೆಯನ್ನು ಆಕ್ರಮಿಸದ ಕಾಲದಲ್ಲಿ ಹಳ್ಳಿಗಳಲ್ಲಿ ಹಿಂದಿನ ಕಾಲದವರು ಇದನ್ನೇ ಬಳಸುತ್ತಿದ್ದರು.
ಬಿಳಿದಾಸವಾಳ ಆರೋಗ್ಯದ ಗಣಿ
ದಾಸವಾಳದಲ್ಲಿ ಗರ್ಭವೃದ್ಧಿ ಮಾಡುವ, ಕೂದಲನ್ನು ಬೆಳೆಸುವ, ದಾಹ ತಣಿಸುವ, ಧಾತು ವೃದ್ಧಿಸುವ ಗುಣವೂ ಇದೆ ಎನ್ನಲಾಗುತ್ತಿದೆ. ಹೂಗಳು, ಬೇರು, ಎಲೆಗಳು ಉಪಯುಕ್ತವಾಗಿದ್ದು, ಎಲೆಗಳನ್ನು ಹಿಂಡಿ ಪ್ರತಿದಿನ ಐದಾರು ಚಮಚದಷ್ಟು ರಸವನ್ನು ಸೇವಿಸುವುದರಿಂದ ಹೊಟ್ಟೆಯಲ್ಲಿನ ಸಮಸ್ಯೆಗಳು ಪರಿಹಾರವಾಗುತ್ತವೆ. ಇನ್ನು ಇದೇ ರಸದೊಂದಿಗೆ ಕಲ್ಲು ಸಕ್ಕರೆ ಹಾಕಿ ಸೇವಿಸಿದರೆ ಪಿತ್ತ ಕಡಿಮೆಯಾಗುತ್ತದೆ. ಬಿಳಿ ದಾಸವಾಳದ ಬೇರನ್ನು ಹಸುವಿನ ಹಾಲಿನಲ್ಲಿ ಅರೆದು ಸೇವಿಸಿದರೆ ಗರ್ಭಧಾರಣೆಗೆ ಸಹಕಾರಿಯಾಗಲಿದೆ.
ಬೇರಿನ ರಸವನ್ನು ಗೋಪಿ ಚಂದನದ ಜೊತೆ ಸೇವಿಸಿದರೆ ಗರ್ಭಸ್ರಾವ ತಡೆಯಲು ಸಾಧ್ಯವಾಗುತ್ತದೆ. ದಾಸವಾಳದ ಎಲೆಯನ್ನು ಅರೆದು ತಲೆಗೆ ಲೇಪಿಸಿದರೆ ಕೂದಲು ಉದುರುವುದನ್ನು ತಡೆಗಟ್ಟಬಹುದು. ಬಿಳಿದಾಸವಾಳದ ಹೂವುಗಳನ್ನು ತುಪ್ಪದಲ್ಲಿ ಹುರಿದು ತಿನ್ನುವುದರಿಂದ ಮೂಲವ್ಯಾಧಿಯನ್ನು ನಿಯಂತ್ರಿಸಬಹುದಾಗಿದೆ. ಎಲೆ ಮತ್ತು ಹೂಗಳನ್ನು ಕಲ್ಲು ಸಕ್ಕರೆಯೊಂದಿಗೆ ಅರೆದು ಸೇವಿಸುತ್ತಾ ಬಂದರೆ ಹೊಟ್ಟೆಯಲ್ಲಿ ಕಾಣಿಸುವ ಕೆಲವೊಂದು ತೊಂದರೆಗಳು ಮಾಯವಾಗುತ್ತವೆ. ಇಷ್ಟೆಲ್ಲ ಲಾಭಗಳು ದಾಸವಾಳದಲ್ಲಿದೆ ಎಂದ ಮೇಲೆ ಅದರ ಬಳಕೆ ಮಾಡಲು ಮುಂದಾಗುವುದು ಜಾಣತನವಾಗತ್ತದೆ.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications