Happiness: ಜೀವನದಲ್ಲಿ ಖುಷಿಯಾಗಿರುವುದೇ ಆರೋಗ್ಯ: ಈ ವಿಚಾರ ನಿಮಗೆ ಗೊತ್ತಾ..?
ನಮ್ಮ ನಡುವೆ ಇರುವ ಹಲವರು ದೈಹಿಕವಾಗಿ ಆರೋಗ್ಯವಾಗಿದ್ದರೂ ಕೂಡ ಖುಷಿಯಾಗಿರುವುದನ್ನು ಮರೆತು ಸದಾ ಮುಖವನ್ನು ಗಂಟಿಕ್ಕಿಕೊಂಡು, ಯಾವುದೋ ಚಿಂತೆಯಲ್ಲಿ ಕಾಲ ಕಳೆಯುತ್ತಾ ಮಾನಸಿಕ ಅನಾರೋಗ್ಯವನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ನಿಜ ಹೇಳಬೇಕೆಂದರೆ ಸಮಸ್ಯೆಗಳು ಬೆಟ್ಟದಷ್ಟಿದ್ದರೂ ಅದೆಲ್ಲವನ್ನು ಮರೆತು ನಗುನಗುತಾ ಇರುವುದೇ ಆರೋಗ್ಯ ಎಂಬುದನ್ನು ಬಹುತೇಕರು ಮರೆತು ಬಿಟ್ಟಿರುತ್ತಾರೆ. ಹೀಗಾಗಿಯೇ ಅವರು ಖುಷಿಯಿಂದ ವಂಚಿತರಾಗಿ ಜೀವನ ಸಾಗಿಸುತ್ತಾರೆ.
ಸಾಮಾನ್ಯವಾಗಿ ದೇಹದಲ್ಲಿ ಏನಾದರೊಂದು ಸಮಸ್ಯೆ ಕಾಣಿಸಿಕೊಂಡಾಗ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುತ್ತೇವೆ. ಮತ್ತೆ ಅದು ಕಾಣಿಸುತ್ತಿಲ್ಲ ಎಂಬ ಸಮಾಧಾನದಿಂದ ದಿನ ಕಳೆಯುತ್ತೇವೆ. ನಮ್ಮ ದೇಹವನ್ನು ಬಾಧಿಸುವ ಕೆಲವು ರೋಗಗಳೇ ಹಾಗೆ. ಅವು ಚಿಕಿತ್ಸೆ ಬಳಿಕ ಸಂಪೂರ್ಣ ಗುಣವಾಗಿಬಿಡುತ್ತವೆ. ಮತ್ತೆ ಕೆಲವು ರೋಗಗಳು ಒಮ್ಮೆ ನಮ್ಮ ದೇಹವನ್ನು ಪ್ರವೇಶಿಸಿದರೆ ಅವು ವಾಸಿಯಾಗುವುದಿಲ್ಲ ಆಗಾಗ್ಗೆ ಕಾಡುತ್ತಲೇ ಇರುತ್ತವೆ ಇವುಗಳ ನಿಯಂತ್ರಣವನ್ನಷ್ಟೆ ಮಾಡಿಕೊಳ್ಳಬಹುದು.

ಕಾಯಿಲೆಗಳು ಮನುಷ್ಯನಿಗೆ ಬಾರದೆ ಕಲ್ಲು, ಮರಕ್ಕೆ ಬರುತ್ತಾ ಎಂಬುದು ಹಿಂದಿನಿಂದಲೂ ಹೇಳಿಕೊಂಡು ಬರುತ್ತಿರುವ ಮಾತು. ಇದು ನಿಜ. ಕಾಯಿಲೆ ಬಂತೆಂದು ತಲೆಕೆಡಿಸಿಕೊಳ್ಳದೆ ಅದಕ್ಕೊಂದು ಕಡೆ ಚಿಕಿತ್ಸೆ ಮಾಡುತ್ತಾ ಅದನ್ನು ಮರೆತು ಖುಷಿಯಾಗಿ ಬದುಕೋದನ್ನು ರೂಢಿಸಿಕೊಳ್ಳಬೇಕು. ಆಗ ನಾವು ಸ್ವಲ್ಪ ಮಟ್ಟಿಗೆ ನಮ್ಮ ರೋಗದ ನೋವನ್ನು ಮರೆಯಲು ಸಾಧ್ಯವಿದೆ. ನಮ್ಮಲ್ಲಿ ಹೆಚ್ಚು ಜನ ದೇಹಕ್ಕೆ ಅನಾರೋಗ್ಯ ಬಾಧಿಸಿದರೆ ಮಾನಸಿಕವಾಗಿ ಜರ್ಜರಿತರಾಗಿ ಬಿಡುತ್ತಾರೆ. ಕಾಯಿಲೆಗಳು ವಾಸಿಯಾಗಬೇಕಾದರೆ ಮಾನಸಿಕ ಆರೋಗ್ಯ ಮುಖ್ಯ.
ಖುಷಿಯಾಗಿ ಇರುವ ಸಂಕಲ್ಪ ಮಾಡೋಣ
ಕಾಯಿಲೆ ಬಗ್ಗೆ ಯೋಚಿಸುತ್ತಾ ಕುಳಿತುಕೊಂಡರೆ ಮಾನಸಿಕ ಖಿನ್ನತೆಯುಂಟಾಗಿ ನಮ್ಮ ಮೇಲೆ ನಮಗೆ ಜಿಗುಪ್ಸೆ ಬಂದು ಅದರಿಂದ ಅನಾಹುತವೇ ಜಾಸ್ತಿ ಎಂದರೆ ತಪ್ಪಗಲಾರದು. ಆದ್ದರಿಂದ ಎಂತಹ ಪರಿಸ್ಥಿತಿಯಲ್ಲೂ ನಮ್ಮಲ್ಲಿ ಖಿನ್ನತೆ ಆವರಿಸಲು ಬಿಡಬಾರದು. ಸದಾ ನಮ್ಮಲ್ಲೊಂದು ಆಹ್ಲಾದಕರ ವಾತಾವರಣವನ್ನು ಸೃಷ್ಟಿ ಮಾಡಿಕೊಳ್ಳಬೇಕು. ಇದು ನಮ್ಮಿಂದ ನಾವೇ ಮಾಡಿಕೊಳ್ಳಬೇಕಾದ ಕ್ರಿಯೆ ಆಗಿರುವುದರಿಂದ ಏನೇ ಆಗಲಿ ನಾನು ಖುಷಿಯಾಗಿಯೇ ಇರುತ್ತೇನೆ ಎಂಬ ಸಂಕಲ್ಪ ಮಾಡಬೇಕು.
ನಾನು ಅನುಭವಿಸುತ್ತಿರುವ ಸಮಸ್ಯೆ ನನ್ನದೊಬ್ಬನದಲ್ಲ. ಇದಕ್ಕಿಂತ ದೊಡ್ಡ ಸಮಸ್ಯೆಯನ್ನು ಇನ್ನೆಷ್ಟೋ ಮಂದಿ ಎದುರಿಸುತ್ತಿಲ್ಲವೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುತ್ತಾ ಸಮಾಧಾನವನ್ನು ನಮಗೆ ನಾವೇ ಮಾಡಿಕೊಂಡರೆ ನಮ್ಮದು ಸಮಸ್ಯೆ ಎನಿಸುವುದೇ ಇಲ್ಲ. ಮುಂಜಾನೆಯಿಂದಲೇ ನಾವು ಲವಲವಿಕೆಯಲ್ಲಿದ್ದಿದ್ದೇ ಆದರೆ ನಮ್ಮ ಮನಸ್ಸು ಪ್ರಾಂಜಲವಾಗಿದ್ದು, ಒಳ್ಳೆಯ ಕಾರ್ಯಗಳಲ್ಲಿ ತೊಡಗುವಂತೆ ಮಾಡುತ್ತದೆ. ಜತೆಗೆ ಆರೋಗ್ಯಕರ ಮನಸ್ಸನ್ನು ಹೊಂದಲು ಅನುಕೂಲ ಮಾಡಿಕೊಡುತ್ತದೆ.

ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತಿರುವುದೇಕೆ?
ಇವತ್ತು ನಮ್ಮಲ್ಲಿ ಎಲ್ಲ ರೀತಿಯ ಐಷಾರಾಮಿ ವಸ್ತುಗಳು ಇದ್ದರೂ ನಾವ್ಯಾರು ಸುಖಿಗಳಾಗಿ ಬದುಕಲು ಸಾಧ್ಯವಾಗುತ್ತಿಲ್ಲ ಏಕೆಂದರೆ ನಾವು ಸೌಲಭ್ಯಗಳನ್ನು, ಅಧಿಕಾರಗಳನ್ನು ಪಡೆದಂತೆಲ್ಲ ಸೋಮಾರಿಗಳಾಗುತ್ತಾ ಹೋಗುತ್ತಿದ್ದೇವೆ. ಜತೆಗೆ ಇನ್ನಷ್ಟು ಬೇಕೆನ್ನುವ ತಹತಹಿಕೆ ಕೂಡ ಮಾನಸಿಕವಾಗಿ ನೆಮ್ಮದಿ ಕಳೆದುಕೊಳ್ಳುವಂತೆ ಮಾಡುತ್ತಿದೆ. ಈ ಹಪಾಹಪಿ ನಮ್ಮನ್ನು ಖುಷಿಯಾಗಿ ಇರಲು ಬಿಡದೆ ಕಾಡುತ್ತದೆ.
ಇವತ್ತು ನಮ್ಮಲ್ಲಿ, ನಮ್ಮ ಕುಟುಂಬಗಳಲ್ಲಿ ಆಹ್ಲಾದಕರ ವಾತಾವರಣವೇ ನಿರ್ಮಾಣವಾಗುತ್ತಿಲ್ಲ. ನಾವು ಯಾರೊಂದಿಗೂ ಬೆರೆಯುತ್ತಿಲ್ಲ. ನಾವು ನಮ್ಮ ಅಂತಸ್ತಿಗೆ ತಕ್ಕವರೊಂದಿಗೆ ಮಾತ್ರ ಒಡನಾಟ ಇಟ್ಟುಕೊಳ್ಳಬೇಕೆಂಬ ಮನೋಭಾವವೂ ಇದಕ್ಕೆ ಕಾರಣವಾಗಬಹುದು. ಇಂತಹ ಮನೋಭಾವ ನಮ್ಮ ಸಂಬಂಧಗಳ ನಡುವೆ ಅಂತರ ಸೃಷ್ಟಿಸಿ ಮುಂದೆ ಕಂದಕಗಳಾಗಿ ಪರಿಣಮಿಸಿದಾಗ ನಮ್ಮನ್ನು ಏಕಾಂಗಿತನ ಕಾಡುವುದಂತೂ ಸತ್ಯ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications