ಬಾಗಲಕೋಟೆಯಲ್ಲಿ ಇವತ್ತು
ಬಾಗಲಕೋಟೆ: 68ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಿಕೆಯಾಗಿ ಬಾಗಲಕೋಟೆಯಲ್ಲಿ ಕನ್ನಡ ಸಂಸ್ಕೃತಿ ಭವನವನ್ನು ಕೇಂದ್ರಸರ್ಕಾರ ನಿರ್ಮಿಸುವುದೆಂದು ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತಕುಮಾರ್ ಭರವಸೆ ನೀಡಿದ್ದಾರೆ.
ಸಂಸ್ಕೃತಿ ಭವನ ನಿರ್ಮಾಣಕ್ಕೆ ಜಾಗೆಯನ್ನು ಗೊತ್ತುಪಡಿಸಿದರೆ, ಒಂದೆರಡು ತಿಂಗಳಲ್ಲೇ ಹಣ ಬಿಡುಗಡೆ ಮಾಡಿ ಶಿಲಾನ್ಯಾಸ ಮಾಡಲಾಗುವುದು ಎಂದು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅನಂತಕುಮಾರ್ ಹೇಳಿದರು. ಸಂಸ್ಕೃತಿ ಭವನದ ನಿರ್ಮಾಣ ಪರಿಷತ್ತು ಅಥವಾ ರಾಜ್ಯ ಸರ್ಕಾರದ ಕೆಲಸ ಮಾತ್ರವಲ್ಲ , ಕೇಂದ್ರ ಸರ್ಕಾರದ ಕರ್ತವ್ಯವೂ ಆಗಿದೆ ಎಂದರು.
ಆಡಳಿತದಲ್ಲಿ ಕಡ್ಡಾಯ ಕನ್ನಡ ಶಾಸನಕ್ಕೆ ಒತ್ತಾಯ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಉನ್ನತ ಅಧಿಕಾರಿಗಳು ಕನ್ನಡದಲ್ಲೇ ಕಡ್ಡಾಯವಾಗಿ ವ್ಯವಹರಿಸುವ ಶಾಸನವನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕೆಂದು ಅನಂತಕುಮಾರ್ ಒತ್ತಾಯಿಸಿದರು. ಹೈಕೋರ್ಟ್ ಪೀಠ, ಆಲಮಟ್ಟಿ ಅಣೆಕಟ್ಟೆ ಮುಂತಾದ ರಾಜ್ಯದ ಹಿತಾಸಕ್ತಿಯ ವಿಷಯಗಳಲ್ಲಿ ಪಕ್ಷಭೇದ ಎನ್ನುವುದಿಲ್ಲ . ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಾವೆಲ್ಲಾ ರಾಜ್ಯಸರ್ಕಾರದ ಬೆನ್ನಿಗಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಯೋಜನೆಗಳಿಗೆ ಸರ್ಕಾರ ವಿಶೇಷ ಒತ್ತು ನೀಡುವ ಮೂಲಕ ಪ್ರಾದೇಶಿಕ ಅಸಮಾನತೆಯನ್ನು ಅಳಿಸಬೇಕು ಎಂದು ಮತ್ತೊಬ್ಬ ಅತಿಥಿ, ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ವಿಧಾನಪರಿಷತ್ತಿನ ವಿರೋಧಿ ನಾಯಕ ಕೆ.ಎಚ್. ಶ್ರೀನಿವಾಸ್ ಕೂಡ ಅನಂತಕುಮಾರ್ ಹಾಗೂ ಶೆಟ್ಟರ್ ಅವರ ಮಾತುಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಶಾಂತಾದೇವಿಗೆ ಸನ್ಮಾನ : ಸಮ್ಮೇಳನಾಧ್ಯಕ್ಷೆ ಶಾಂತಾದೇವಿ ಮಾಳವಾಡ ಅವರಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆಯಾಂದಿಗೆ ಒಂದು ಲಕ್ಷ ರುಪಾಯಿ ಮೊತ್ತವನ್ನು ಪರಿಷತ್ತಿನ ಪರವಾಗಿ ಅನಂತಕುಮಾರ್ ಅರ್ಪಿಸಿ ಸಮ್ಮೇಳನಾಧ್ಯಕ್ಷೆಗೆ ಗೌರವ ಸೂಚಿಸಿದರು. ಲಕ್ಷ ರುಪಾಯಿ ಗೌರವಧನವನ್ನು ಪರಿಷತ್ತಿನ ವಿವಿಧ ಯೋಜನೆಗಳಿಗೆ ಒದಗಿಸುವುದಾಗಿ ಶಾಂತಾದೇವಿ ಆಶ್ವಾಸನೆ ನೀಡಿದರು.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ










Click it and Unblock the Notifications