ಬೆಂಗಳೂರಿನಲ್ಲಿ ಭೂಕಂಪ ಆಗಿದ್ದಿದ್ದರೆ ಈ ಸನ್ಮಾನ ನಡೆಯುತ್ತಿರಲಿಲ್ಲ
ಬೆಂಗಳೂರು : ಮೃದಂಗ ವಾದಕ, ಡಾ. ಟಿ.ಕೆ. ಮೂರ್ತಿ, ನೃತ್ಯ ಕಲಾವಿದ ಕೆ. ಮುರಳೀಧರ ರಾವ್ ಮತ್ತು ನಾಟಕಕಾರ ಎಚ್. ಎನ್. ಹೂಗಾರ ಅವರಿಗೆ ಕ್ರಮವಾಗಿ ಈ ಸಾಲಿನ ಪಿಟೀಲು ಚೌಡಯ್ಯ, ಶಾಂತಲಾ ನಾಟ್ಯ, ಹಾಗೂ ಗುಬ್ಬಿ ವೀರಣ್ಣ ಪ್ರಶಸ್ತಿಗಳನ್ನು ಮಂಗಳವಾರ ಪ್ರದಾನ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಇಲಾಖೆ ಸಚಿವೆ ರಾಣಿ ಸತೀಶ್ ಪ್ರಶಸ್ತಿ ವಿತರಿಸಿದರು. ಸಮಾರಂಭ ತೀರಾ ಸರಳವಾಗಿತ್ತು. ಕಾರ್ಯಕ್ರಮ ಆರಂಭಕ್ಕೆ ಮುನ್ನ -- ಪ್ರಶಸ್ತಿ ವಿತರಣಾ ಸಮಾರಂಭ ಅದ್ದೂರಿಯಾಗಿರಬೇಕಿತ್ತು. ಗಣ್ಯ ಸಚಿವರು ಭಾಗವಹಿಸಬೇಕಿತ್ತು ಎಂಬ ಆಕ್ಷೇಪಣೆ, ವಿರೋಧಗಳು ಕೇಳಿಬಂದದ್ದು ಸಮಾರಂಭದ ವಿಶೇಷ.
ನೆರೆ ರಾಜ್ಯ ಭೂಕಂಪ ದಿಂದ ತತ್ತರಿಸುವಾಗ ಅದ್ದೂರಿಯ ಅಗತ್ಯವಿಲ್ಲ ಎಂಬುದು ಆಕ್ಷೇಪಣೆ ಎತ್ತಿದವರಿಗೆ ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅವರ ಸಮಾಧಾನ. ಮುಖ್ಯ ಮಂತ್ರಿಗಳು ಈ ಸಮಾರಂಭದಲ್ಲಿ ಅನಿವಾರ್ಯ ಕಾರಣಗಳಿಂದ ಭಾಗವಹಿಸುತ್ತಿಲ್ಲ ಎಂದು ಸಚಿವೆ ಹೇಳಿದರು.
ಅಮರೇಶ್ ನುಗಡೋಣಿಗೆ ಕಾವ್ಯಾನಂದ ಪ್ರಶಸ್ತಿ : ಶನಿವಾರ, ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಕತೆಗಾರ ಅಮರೇಶ್ ನುಗಡೋಣಿ ಅವರಿಗೆ ಈ ಸಾಲಿನ ಕಾವ್ಯಾನಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ ನೀಡಿದ ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ವಿತರಿಸಿದರು. ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಶೇಷನಾರಾಯಣ್ಗೆ ತಮಿಳು ಪುರಸ್ಕಾರ: ಕನ್ನಡದ ಸಣ್ಣ ಕತೆಗಾರ ಮತ್ತು ಕಾದಂಬರಿಕಾರ ಶೇಷನಾರಾಯಣ್ ಅವರಿಗೆ (74) ತಮಿಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ತಮಿಳು ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿರುವುದನ್ನು ಗುರುತಿಸಿ, ಅನುವಾದ ಸಾಹಿತ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಂ. ಕರುಣಾ ನಿಧಿ ಇತ್ತೀಚೆಗೆ ಚೆನ್ನೈನಲ್ಲಿ ನೀಡಿರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications