ಅವರ ಕೃಷಿ ನೋಡುತ್ತಿದ್ದರೆ ಆ ಸೂಚನೆ ಕಾಣಿಸುತ್ತಿಲ್ಲ
ಕುವೆಂಪು ಅವರ ಮೇರು ಕೃತಿ ಯಾವುದು ಎಂಬ ಪ್ರಶ್ನೆಗೆ ಅವರ ಬಗ್ಗೆ ಅಸಮಾಧಾನ ಇಟ್ಟುಕೊಂಡವರು ಪೂರ್ಣಚಂದ್ರ ತೇಜಸ್ವಿ ಅನ್ನುವುದುಂಟು. ಬೇಂದ್ರೆಯವರ ಕೆಟ್ಟ ಕೃತಿ ವಾಮನ ಬೇಂದ್ರೆ ಎಂಬ ಜೋಕೂ ಚಾಲ್ತಿಯಲ್ಲಿದೆ ! ಮೊದಲನೆಯದ್ದರ ಬಗ್ಗೆ ಅನುಮಾನ ಬೇಕಾಗಿಲ್ಲ . ತೇಜಸ್ವಿ ತಮ್ಮ ಆರಂಭದ ಸಂಕಲನದಲ್ಲೇ ಪ್ರತಿಭೆ ತೋರಿದವರು. ಸಾಹಿತಿಯ ಮಗ ಸಾಹಿತಿಯಾಗೋದಿಲ್ಲ , ಸಾಹಿತ್ಯ ದ್ವೇಷಿಯಾಗುತ್ತಾನೆ ಎಂಬ ಮಾತನ್ನು ಸುಳ್ಳು ಮಾಡಿದವರು.
ಇದೊಂದು ತಮಾಷೆ ನೋಡಿ. ಜಗತ್ತಿನ ಶ್ರೇಷ್ಠ ಲೇಖಕರ ಮಕ್ಕಳು ಯಾರು ಎನ್ನುವುದೇ ನಮಗೆ ಗೊತ್ತಿಲ್ಲ . ಷೇಕ್ಸ್ಪಿಯರ್ ಮಗ ಯಾರು ಅನ್ನೋದೇನಾದರೂ ಗೊತ್ತೇ, ಕುಮಾರ ವ್ಯಾಸನಿಗೆ ಮಕ್ಕಳಿದ್ದರೇ? ಮಾಸ್ತಿಯವರ ಮಗ ಏನು ಮಾಡುತ್ತಾನೆ ? ಕಾಳಿದಾಸನ ಮಗ ಯಾವ ಕೃತಿ ಬರೆದ? ನಿಮಗೆ ಉತ್ತರ ಸಿಗುವುದಿಲ್ಲ . ಆಸ್ತಿಪಾಸ್ತಿ, ರಾಜ್ಯ, ಅಧಿಕಾರ ಯಾವುದು ಬೇಕಾದರೂ ಮಗನ ಪಾಲಾಗಬಹುದು. ಪ್ರತಿಭೆ ಹಾಗಾಗುವುದಿಲ್ಲ . ಆದರೆ, ಕುವೆಂಪು ವಿಚಾರದಲ್ಲಿ ಮಾತ್ರ ಹಾಗಾಯಿತು.
ನವ್ಯದ ಜಂಜಡಗಳಿಂದ, ಅಂತರ್ಮುಖತೆಯಿಂದ ಬೇಸತ್ತು , ಹೊಸ ಹಾದಿ ಹಿಡಿಯಬೇಕು ಎಂದು ತಮ್ಮ ಕಥಾಸಂಕಲನದ ಮೂಲಕ ಘೋಷಿಸಿಕೊಂಡೇ ಆಖಾಡಕ್ಕಿಳಿದ ತೇಜಸ್ವಿ ಬರೆದದ್ದು ಕೆಲವೇ ಕೃತಿಗಳನ್ನು . ಆದರೆ ಅವುಗಳೆಲ್ಲ ಅತ್ಯುತ್ತಮ ಕೃತಿಗಳೇ. ತಬರನ ಕತೆ, ಕುಬಿ ಮತ್ತು ಇಯಾಲ , ನಿಗೂಢ ಮನುಷ್ಯರು, ಕರ್ವಾಲೋ, ಚಿದಂಬರ ರಹಸ್ಯ, ಕಿರಗೂರಿನ ಗಯ್ಯಾಳಿಗಳು, ಜುಗಾರಿ ಕ್ರಾಸ್, ಕೃಷ್ಣೇಗೌಡರ ಆನೆ, ಪರಿಸರದ ಕತೆಗಳು... ಹೀಗೆ ಅವರ ಬರಹಗಳ ಪಟ್ಟಿ ಸಾಗುತ್ತದೆ. ಇವತ್ತೂ ಬೇಜಾರಾದಾಗ ನೀವು ಓದಬಹುದಾದ ಕತೆ ಬರೆದವರಲ್ಲಿ ,ನೆನಪಿಗೆ ಬರುವ ಬೆರಳೆಣಿಕೆಯಷ್ಟು ಮಂದಿಯಲ್ಲಿ ತೇಜಸ್ವಿಯೂ ಒಬ್ಬರು.
ತೇಜಸ್ವಿ ಉಳಿದ ಲೇಖಕರಂತಲ್ಲ . ಅವರು ಮೊದಲು ನಾನ್ ಅಕಾಡೆಮಿಕ್ ಸಾಹಿತಿ. ಅತ್ಯಂತ ಹುಲುಸಾಗಿ ಸಾಹಿತ್ಯ- ಕೃಷಿ ಮಾಡಿದವರು ಎಂದು ಅವರ ಕಾಫಿ ತೋಟ ನೋಡಿದವರು ಅವರನ್ನು ಗೇಲಿ ಮಾಡೋದುಂಟು. ಆದರೆ ತನ್ನನ್ನೇ ತಮಾಷೆ ಮಾಡಿಕೊಳ್ಳುವುದು ಅವರಿಗೆ ಪ್ರಿಯವಾದ ಸಂಗತಿ. ಅವರ ಎಲ್ಲಾ ಬರಹಗಳಲ್ಲೂ ನಾಯಕ ಪೇಚಿಗೀಡಾಗುತ್ತಾನೆ !
ಸದ್ಯಕ್ಕೆ ಮೂಡಿಗೆರೆಯಲ್ಲಿರುವ ತೇಜಸ್ವಿ, ಕಂಪ್ಯೂಟರ್ ಬೆನ್ನು ಹತ್ತಿದ್ದಾರೆ. ಇದು ಸಾಮಾನ್ಯ ಅಲ್ಲ ಕಣ್ರೀ.. ಇದರೊಳಗೆ ಏನೇನೋ ಇದೆ. ನೋಡಿದರೆ ಗಾಬರಿಯಾಗುತ್ತೆ ಅಂತ ಮೂರು ವರ್ಷದ ಹಿಂದೆಯೇ ಕಂಪ್ಯೂಟರ್ ಬೆನ್ನಿಗೆ ಬಿದ್ದ ತೇಜಸ್ವಿ ರಾಮಾಯಣ ದರ್ಶನಂನ ಹಸ್ತಪ್ರತಿ ಮುದ್ರಿಸಿ ಕೈ ಕೆಸರು ಮಾಡಿಕೊಂಡರು. ಆ ಸಾಹಸಕ್ಕೆ ಬಲಿಯಾದದ್ದು ಅವರ ಹಾಗೂ ಲಂಕೇಶ್ ಗೆಳೆತನ. ತೇಜಸ್ವಿ ತೇಜೋವಧೆ ಮಾಡಿದೆ ಅಂತ ಪಾಳೇಗಾರರು ಬೀಗಿದ್ದೂ ಆಯಿತು. ಈ ನಡುವೆ ಕಂಪ್ಯೂಟರ್ನಲ್ಲಿ ಅದೇನೋ ಸಾಹಸ ಮಾಡಿ ಚಿತ್ರಕಲಾವಿದರೂ ಆಗಿರುವ ತೇಜಸ್ವಿ, ಮಿಲಿನಿಯಮ್ ಪುಸ್ತಕ ಮಾಲೆ ಆರಂಭಿಸಿದರು. ಪುಸ್ತಕ ಪ್ರಕಾಶನ ಆರಂಭಿಸಿ ದುಡ್ಡು ಬೆಳೆಯ ತೊಡಗಿದರು. ಸೃಜನಶೀಲ ಸಾಹಿತ್ಯ ಮರೆತುಬಿಟ್ಟರು.
ಇವತ್ತು ಮತ್ತೆ ಸಾಹಿತ್ಯಕ್ಕೊಂದು ಕಳೆ ಬರಬೇಕಿದ್ದರೆ ತೇಜಸ್ವಿ ಕಥಾಸಂಕಲನವೋ ಕಾದಂಬರಿಯೋ ಹೊರಬೇಕು. ಅವರ ಕೃಷಿ ನೋಡುತ್ತಿದ್ದರೆ ಆ ಸೂಚನೆ ಕಾಣಿಸುತ್ತಿಲ್ಲ . ಕಾಫಿ ಬೆಳೀರಿ, ಕತೇನೂ ಬರೀರಿ.. ಅನ್ನೋದು ನಮ್ಮ ವಿನಮ್ರ ಮನವಿ.. ಇಂಥದ್ದೊಂದು ಬೇಡಿಕೆಯನ್ನು ಈ ಹಿಂದೆ ಅವರ ಮುಂದಿಟ್ಟಾಗ ಅವರು ಸಿಟ್ಟಾಗಿ- ಇನ್ನು ಮೇಲೆ ಪತ್ರಿಕೆಗಳ ಸಹವಾಸ ಸಾಕು ಕಣ್ರೀ. ಆ ನೀಚ ನನ್ನನ್ನ ಹಾಗೆಲ್ಲ ಕರೆದು ಅವಮಾನ ಮಾಡಿದ್ದಾನೆ. ಅವನು ಅದೇನೋ ಬರೀತಾನೆ... ಕೈಲಿ ಪೇಪರ್ ಇದೆ. ನಾನು ಹಾಗಲ್ಲ ಅಂತ ಎಷ್ಟು ಜನರ ಹತ್ತಿರ ಹೇಳಿಕೊಂಡು ಬರೋಕಾಗುತ್ತೆ . ಬಾಯಿ ಬಡ್ಕೋಬೇಕು ಅಷ್ಟೇ ಅಂದಿದ್ದರು.
ಈಗ ಲಂಕೇಶ್ ಇಲ್ಲ. ತೇಜಸ್ವಿಯವರ ಸಿಟ್ಟು ಕಮ್ಮಿಯಾಗಿರಬಹುದಲ್ಲ . ಆದರೆ ಲಂಕೇಶ್ ಸತ್ತ ಸುದ್ದಿಯನ್ನು ಅವರ ಕಿವಿಗೆ ಹಾಕಿದಾಗ ತೇಜಸ್ವಿ ನಿರ್ವಿಕಾರವಾಗಿ ಹೌದಾ ಅಂದಿದ್ದರು. ಹಿಂದೊಮ್ಮೆ ಅವರು ಲಂಕೇಶರಿಗೊಂದು ಪತ್ರ ಬರೆದು 'ನಮ್ಮದೆಲ್ಲ ಗ್ಯಾರಂಟಿ ಪಿರಿಯಡ್ ಮುಗಿದುಹೋಗಿದೆ. ಎಚ್ಚರಿಕೆಯಿಂದ ದೇಹ ಬಳಸಬೇಕು’ ಎಂದದ್ದು ಆಗ ಕೆಲವರಿಗಾದರೂ ನೆನಪಾಗಿರಬಹುದು.
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications